ಹುಕ್ಕೇರಿ ಪಟ್ಟಣದಲ್ಲಿ ಹಾಡಹಗಲೇ ಭೀಕರ ಕೊಲೆ: ಬೆಚ್ಚಿಬಿದ್ದ ಸ್ಥಳೀಯರು

Date:

Advertisements

ಹುಕ್ಕೇರಿ ಪಟ್ಟಣದಲ್ಲಿ ಹಾಡಹಗಲೇ ಸಂತೆ ಸಮಯದಲ್ಲಿ ಜನಸಂದಣಿ ನಡುವೆಯೂ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ ಮಡಿರುವ ಘಟನೆ ನಡೆದಿದ್ದು, ಇದನ್ನು ಕಂಡ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ಮಲಿಕ್ ಜಾನ್ ಜಮಖಂಡಿ ಎಂಬಾತ ದುಷ್ಕರ್ಮಿಗಳಿಂದ ಕೊಲೆಯಾದ ವ್ಯಕ್ತಿ. ಈತ ಹುಸೇನ್ ಸಾಬ್ ಜಮಖಂಡಿ ಮತ್ತು ಮೈಮೂನ್ ಬಿ ದಂಪತಿಯ ಮಗನಾಗಿದ್ದು, ಮೂಲತಃ ಗೋಕಾಕ್ ತಾಲೂಕಿನ ದೂಪದಾಳ ಗ್ರಾಮದವರು.

ಸುಮಾರು 25 ವರ್ಷಗಳಿಂದ ತಮ್ಮ ತಾಯಿಯ ತವರು ಮನೆ ಅವರಗೋಳ ಗ್ರಾಮದಲ್ಲಿ ವಾಸಿಸುತ್ತಿದ್ದರು. ಬೆಳಗಾವಿಯ ಅಶೋಕ ಐರನ್ ಫ್ಯಾಕ್ಟರಿಯಲ್ಲಿ ಉದ್ಯೋಗ ಮಾಡುತ್ತಿದ್ದ ಮಲಿಕ್ ಜಾನ್, ಕೆಲಸಕ್ಕೆ ತೆರಳುವ ವೇಳೆ, ಹುಕ್ಕೇರಿ ನಾಕಾದಲ್ಲಿ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದಾರೆ.

Advertisements

“ನಮ್ಮ ಊರಿನಲ್ಲಿ ಇಷ್ಟು ಭೀಕರ ಕೊಲೆ ನಡೆಯುವುದು ಇದೇ ಮೊದಲ ಬಾರಿಗೆ” ಎಂದು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಘಟನೆಯ ಕೆಲವೇ ಗಂಟೆಗಳಲ್ಲಿ ಹುಕ್ಕೇರಿ ಪೊಲೀಸರು ಚುರುಕಾಗಿ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಕ್ರಮ ಸಂಬಂಧ ಹಾಗೂ ಅಸ್ತಿ ವಿಚಾರ ಕೊಲೆಯ ನಿಖರ ಕಾರಣ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಧರ್ಮಸ್ಥಳ ಪ್ರಕರಣ | 13ನೇ ಪಾಯಿಂಟ್ ಶೋಧ ಕಾರ್ಯ ಬುಧವಾರವೂ ಮುಂದುವರಿಕೆ

ಮೃತದೇಹವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಘಟನೆ ಹುಕ್ಕೇರಿ ಇತಿಹಾಸದಲ್ಲೇ ಅತ್ಯಂತ ಬೆಚ್ಚಿಬೀಳಿಸುವ ಕೊಲೆ ಎಂದು ಸ್ಥಳೀಯರು ಹೇಳಿದ್ದಾರೆ. ತನಿಖೆ ಮುಂದುವರೆದಿದ್ದು, ಆರೋಪಿಗಳಿಂದ ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Download Eedina App Android / iOS

X