ಬಾಗಲಕೋಟೆ | ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ರಾಜ್ಯ ಮಟ್ಟದ ಹೋರಾಟ

Date:

Advertisements

ರಾಜ್ಯದ ಕುರಿಗಾಯಿಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಅವರಿಗಾಗಿ ಪ್ರತ್ಯೇಕವಾಗಿ ಕುರಿಗಾಹಿಗಳ ಹಿತರಕ್ಷಣಾ ಕಾನೂನು ಜಾರಿಗೆ ತರುವಂತೆ ಒತ್ತಾಯಿಸಿ ಆ.19ರಂದು ರಾಜ್ಯದ ʼಕುರಿಗಾಹಿಗಳ ನಡೆ ವಿಧಾನಸೌಧದ ಕಡೆʼ ಹೋರಾಟ ನಡೆಸಲಾಗುವುದು ಎಂದು ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಹೋರಾಟ ಸಮಿತಿ ರಾಜ್ಯ ಮುಖಂಡ ಯಲ್ಲಪ್ಪ ಹೆಗಡೆ ಹೇಳಿದರು.

ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಕುರಿಗಾಹಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಶೋಷಣೆ, ಅತ್ಯಾಚಾರ, ಕೊಲೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿಗೊಳಿಸಬೇಕು. ಇದೇ ತಿಂಗಳ 19ರಂದು ನಡೆಯುವ ಈ ಹೋರಾಟದಲ್ಲಿ ರಾಜ್ಯದ ವಿವಿಧ ಕಡೆಯಿಂದ 2 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ. ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿಗೆ ತರುವ ಕುರಿತು ಘೋಷಣೆ ಮಾಡಿದೆ. ಅದರಂತೆ ಈಗ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚೆ ಮಾಡಿ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಕುರಿಗಾಹಿಗಳನ್ನು ರಕ್ಷಿಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕುರುಬ ಸಮಾಜದ ಜಿಲ್ಲಾ ಅಧ್ಯಕ್ಷ ಡಿ ಬಿ ಸಿದ್ದಾಪುರ, ಸಿದ್ದಪ್ಪ ಬಳಗಾನೂರ, ಶಿವಲಿಂಗ ನಿಂಗನೂರ, ಸದಾಶಿವ ತಮ್ಮಾಪುರ, ಪರಶುರಾಮ ಮಂಟೂರ ಮುಂತಾದವರು ಉಪಸ್ಥಿತರಿದ್ದರು.

Advertisements

ಇದನ್ನು ಓದಿ: ಬಾಗಲಕೋಟೆ | ರ‍್ಯಾಗಿಂಗ್‌ ಕಾಟಕ್ಕೆ ಪದವಿ ಕಾಲೇಜು ವಿದ್ಯಾರ್ಥಿನಿ ಬಲಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X