ದೇಶದ್ರೋಹಿಗಳ ಭದ್ರತೆಗೆ ನಿಲ್ಲುತ್ತಿರುವುದು ಅಧಿಕಾರದ ದುರುಪಯೋಗ: ಕಾಂಗ್ರೆಸ್‌ ವಿರುದ್ಧ ಯತ್ನಾಳ್‌ ಕಿಡಿ

Date:

Advertisements
  • ‘ಕಾಂಗ್ರೆಸ್‌ ಆದ್ಯತೆಗಳೇನು ಎಂಬುದು ಸಮಾಜಕ್ಕೆ ಗೊತ್ತಾಗುತ್ತದೆ’
  • ‘ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಭಯೋತ್ಪಾದಕ ಘಟನೆ’

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಗಳಲ್ಲಿ ಬಂಧಿತರಾಗಿರುವ ‘ಅಮಾಯಕ’ರನ್ನು ಬಿಡುಗಡೆಗೊಳಿಸಲು ಉಪಸಮಿತಿ ರಚಿಸಿ ಅವರನ್ನು ಬಂಧ ಮುಕ್ತ ಮಾಡುವ ಉತ್ಸಾಹ, ಉತ್ಸುಕತೆ, ಉಮೇದು ಬಾಂಗ್ಲಾ ನುಸುಳುಕೋರರನ್ನು ಹತ್ತಿಕ್ಕಲು ತೋರದೆ ಇರುವುದು ಇವರ ಆದ್ಯತೆಗಳೇನು ಎಂದು ಸಮಾಜಕ್ಕೆ ಗೊತ್ತಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಭಯೋತ್ಪಾದಕ ಘಟನೆ ಎಂದು ಮಾನ್ಯ ಉಚ್ಚ ನ್ಯಾಯಾಲಯವೇ ಹೇಳಿರುವಾಗ, ಸರ್ಕಾರ ರಾಜ್ಯದ ಆಂತರಿಕ ಭದ್ರತೆ, ನುಸುಳುಕೋರರ ಪತ್ತೆ, ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು, ಬ್ಯಾಂಕ್ ಅವ್ಯವಹಾರಗಳ ತನಿಖೆಗಳನ್ನು ಚುರುಕು ಮಾಡುವ ಬದಲಾಗಿ ದೇಶ ವಿರೋಧಿಗಳ ಪರವಾಗಿ ನಿಂತಿದೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಧಿಕೃತ ಶಾಲೆಗಳಿಗೆ ಬೀಗಮುದ್ರೆ ಶಿಕ್ಷೆ; ಭ್ರಷ್ಟ ಅಧಿಕಾರಿಗಳಿಗೆ ಯಾಕೆ ರಕ್ಷೆ?

Advertisements

“ಸಚಿವ ಸಂಪುಟದಲ್ಲೂ ಇದನ್ನು ಅನುಮೋದಿಸಿಕೊಂಡು ದೇಶದ್ರೋಹಿಗಳ ಭದ್ರತೆಗೆ ನಿಲ್ಲುತ್ತಿರುವುದು ಅಧಿಕಾರದ ದುರುಪಯೋಗ, ಅಲ್ಪಸಂಖ್ಯಾತರ ಓಲೈಕೆ ಹಾಗೂ ರಾಜ್ಯದ ಜನರಿಗೆ ಬಗೆದ ಅನ್ಯಾಯ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರು ಅಮಾಯಕರೇ? ಕಲ್ಲು ಹೊಡೆದು ಹಿಂದೂಗಳ ಮನೆ ಜಖಂ ಮಾಡಿದವರು ಅಮಾಯಕರೇ? ಅಂದಿನ ಕಾಂಗ್ರೆಸ್ ಶಾಸಕರಾದ ದಲಿತ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದವರು ಅಮಾಯಕರೇ? ಡಿಸಿಪಿ ಕಾರ್ ಧ್ವಂಸ ಮಾಡಿದವರು ಅಮಾಯಕರೇ? ಪೋಲೀಸರ ಮೇಲೆ ದಾಳಿ ಮಾಡಿದವ್ರು ಅಮಾಯಾಕರೇ?”ಎಂದು ಲೇವಡಿ ಮಾಡಿದ್ದಾರೆ.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X