ಶಿವಮೊಗ್ಗ | ಕೆರೆಯಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವು

Date:

Advertisements

ಶಿವಮೊಗ, ಕೆರೆಯಲ್ಲಿ ಕಾಲು ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ, ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಗೌಡನಕೆರೆಯಲ್ಲಿ ನಡೆದಿದೆ.ಆಯನೂರು – ಹಣಗೆರೆಕಟ್ಟೆ ರಸ್ತೆಯ ಹೊಸೂರು ಗ್ರಾಮದ ನಿವಾಸಿ ನಿಶಾಂತ್ (25) ನೀರುಪಾಲಾದ ಯುವಕ ಎಂದು ಗುರುತಿಸಲಾಗಿದೆ.

ಬೆಳಿಗ್ಗೆ ಸರಿಸುಮಾರು 6 ಗಂಟೆ ಸುಮಾರಿಗೆ ಗೌಡನಕೆರೆಗೆ ಯುವಕ ತೆರಳಿದ್ದು, 10 ಗಂಟೆಯಾದರೂ ಮನೆಗೆ ಹಿಂದಿರುಗಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕಾರಣದಿಂದ ಕುಟುಂಬದವರು ಕೆರೆ ಬಳಿ ಆಗಮಿಸಿ ಪರಿಶೀಲಿಸಿದ್ದಾರೆ. ಈ ವೇಳೆ ಯುವಕನ ಬೈಕ್ ಹಾಗೂ ಚಪ್ಪಲಿ ಮಾತ್ರ ಪತ್ತೆಯಾಗಿದೆ. ತಕ್ಷಣವೇ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದಾರೆ.

Advertisements

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ತಂಡ, ಬೋಟ್ ಮೂಲಕ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದೆ. ಸಂಜೆ 4. 30 ಗಂಟೆ ಸುಮಾರಿಗೆ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ ಹಚ್ಚುವಲ್ಲಿ ಸಫಲವಾಗಿದೆ. ಈ ಕುರಿತಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X