ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಅವರು ಕೊನೆಯುಸಿರು ಎಳೆದರು. ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿನಯದ ‘ಸಂತ’, ಕ್ರೇಜಿ ಸ್ಟಾರ್ ರವಿಚಂದ್ರನ್ ನಟನೆ ‘ಮಲ್ಲಿಕಾರ್ಜುನ’, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ನಾಗರಹಾವು’ , ಶಿವರಾಜ್ ಕುಮಾರ್ ಅಭಿನಯದ ಸಂತ ಸೇರಿ ಹಲವು ಸಿನಿಮಾಗಳನ್ನು ಮುರಳಿ ಮೋಹನ್ ಅವರು ನಿರ್ದೇಶನ ಮಾಡಿದ್ದರು.
ಉಪೇಂದ್ರ ನಿರ್ದೇಶನದ ಶ್, ಓಂ ಸೇರಿದಂತೆ ಹಲವು ಚಿತ್ರಗಳಿಗೆ ಸಹನಿರ್ದೇಶಕ, ಸಂಭಾಷಣೆಕಾರರಾಗಿ ಕೆಲಸ ಮಾಡಿದ್ದರು.
ಇದನ್ನು ಓದಿದ್ದೀರಾ? 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಕಟ: ಕನ್ನಡದ ‘ಸನ್ಫ್ಲವರ್ಸ್ ವರ್ ದಿ ಫಸ್ಟ್ ಒನ್ ಟು ನೋ’ ಕಿರುಚಿತ್ರಕ್ಕೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ
ಬೆಂಗಳೂರಿನ ಜೆಸಿ ರಸ್ತೆಯಲ್ಲಿ ಇರುವ ಖಾಸಗಿ ಆಸ್ಪತ್ರೆಯಲ್ಲಿ ಮುರಳಿ ಮೋಹನ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕಿಡ್ನಿ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಈ ಹಿಂದೆ ಶಸ್ತ್ರಚಿಕಿತ್ಸೆಗೆ ಅನುದಾನದ ಅವಶ್ಯಕತೆಯಿದೆ ಎಂದು ಹೇಳಿಕೊಂಡಿದ್ದರು. ಐದಾರು ವರ್ಷಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅವರ ಶಸ್ತ್ರಚಿಕಿತ್ಸೆಗೆ 30ರಿಂದ 35 ಲಕ್ಷ ರೂಪಾಯಿ ರೂಪಾಯಿ ಬೇಕಾಗಿತ್ತು. ಅದಕ್ಕಾಗಿ ಮನವಿ ಕೂಡ ಮಾಡಿದ್ದರು.
ಮುರಳಿ ಮೋಹನ್ ಅವರ ನಿಧನಕ್ಕೆ ಆಪ್ತರು, ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
