ಕೋಮುದ್ವೇಷಿ ಕೃತ್ಯ | ಯುವಕನನ್ನು ಹೊಡೆದು ಕೊಂದ ಕೋಮುವಾದಿ ದುರುಳರು

Date:

Advertisements

ಕೋಮುವಾದಿ ಗುಂಪೊಂದು 21 ವರ್ಷದ ಯುವಕನನ್ನು ಭೀಕರವಾಗಿ ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಜಾಮನೇರ್ ಪ್ರದೇಶದಲ್ಲಿ ನಡೆದಿದೆ. ಅದೂ, ಘಟನೆಯು ಪೊಲೀಸ್‌ ಠಾಣೆಯಿಂದ ಕೆಲವೇ ಮೀಟರ್‌ ದೂರದಲ್ಲಿ ಕೃತ್ಯ ನಡೆದಿದ್ದು, ಕಾನೂನು-ಸುವ್ಯವಸ್ಥೆಯ ಬಗ್ಗೆ ಗಂಭೀರ ಕಳವಳ ಹುಟ್ಟುಹಾಕಿದೆ.

ಜಾಮನೇರ್ ತಾಲೂಕಿನ ಛೋಟಿ ಬೆಟವಾಡ್‌ ಗ್ರಾಮದ ನಿವಾಸಿ ಸುಲೇಮಾನ್ ರಹೀಮ್ ಖಾನ್ ಎಂಬ ಯುವಕನನ್ನು ಜಾಮನೇರ್ ಪೊಲೀಸ್‌ ಠಾಣೆಯ ಬಳಿ, ಕೋಮುವಾದಿ ಗುಂಪು ಬರ್ಬರವಾಗಿ ಹತ್ಯೆಗೈದಿದೆ ಎಂದು ‘ಮಖ್ತೂಬ್ ಮೀಡಿಯಾ’ ವರದಿ ಮಾಡಿದೆ.

“ಪೊಲೀಸ್‌ ಠಾಣೆಯಿಂದ ಕೆಲವೇ ಮೀಟರ್ ದೂರದಲ್ಲಿನ ಕೆಫೆಯಲ್ಲಿ ಸುಲೇಮಾನ್ ಮತ್ತು ಓರ್ವ ಯುವತಿ ಕುಳಿದಿದ್ದರು. ಅಲ್ಲಿಗೆ ಬಂದ, 10-15 ಮಂದಿಯ ಕೋಮುವಾದಿ ಗುಂಪು, ಸುಲೇಮಾನ್ ಅವರನ್ನು ವಾಹನದಲ್ಲಿ ಅಪಹರಿಸಿತು. ವಿವಿಧ ಸ್ಥಳಗಳಿಗೆ ಕರೆದೊಯ್ದು, ಹಲ್ಲೆ ನಡೆಸಿದೆ. ಬಳಿಕ, ಆತನ ಮನೆಯ ಎದುರು ಬಿಸಾಡಿ ಹೋಗಿದೆ” ಎಂದು ವರದಿಯಾಗಿದೆ.

Advertisements

ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಸುಮಾರ್‌ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಆತನ ಕುಟುಂಬಸ್ಥರು ಮುಂದಾಗಿದ್ದಾರೆ. ಆದರೆ, ಅವರ ಮೇಲೂ ದುರುಳರ ಗುಂಪು ಹಲ್ಲೆ ನಡೆಸಿದೆ. ಸುಲೇಮಾನ್ ಅವರ ತಂದೆ, ತಾಯಿ ಮತ್ತು ಸಹೋದರಿಗೂ ಗಾಯಗಳಾಗಿವೆ. ಆದಾಗ್ಯೂ, ಸುಲೇಮಾನ್‌ ಅವರನ್ನು ಜಲಗಾಂವ್ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ದಾರಿ ಮಧ್ಯೆಯೇ ಅತ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಈ ವರದಿ ಓದಿದ್ದೀರಾ?: ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಸುಲೇಮಾನ್ ಮೇಲೆ ಕಬ್ಬಣದ ರಾಡ್‌ಗಳಿಂದ ಹಲ್ಲೆ ನಡೆದಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

“ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದ, ಆರೋಪಿಗಳ ಬಂಧನಕ್ಕೆ ಹುಟುಕಾಟ ನಡೆಯುತ್ತಿದೆ. ದಾಳಿಗೆ ನಿಖರವಾದ ಕಾರಣವೇನು ಎಂಬುದು ಇನ್ನೂ ಗೊತ್ತಾಗಿಲ್ಲ. ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಅಧೀಕ್ಷಕ ಮಹೇಶ್ವರ ರೆಡ್ಡಿ ಮಾಹಿತಿ ನೀಡಿದ್ದಾರೆ.

12ನೇ ತರಗತಿವರೆಗೆ ವ್ಯಾಸಂಗ ಮಾಡಿರುವ ಸುಲೇಮಾನ್, ಪೊಲೀಸ್‌ ಇಲಾಖೆಗೆ ಕೆಲಸಕ್ಕೆ ಸೇರಲು ಬಯಸಿದ್ದರು. ಅದಕ್ಕಾಗಿ, ಸಿದ್ದತೆ ನಡೆಸುತ್ತಿದ್ದರು. ಅವರ ಮೇಲೆ ದಾಳಿ ನಡೆದ ದಿನ, ಆತನ ಪೊಲೀಸ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಜಾಮನೇರ್‌ಗೆ ಹೋಗಿದ್ದರು ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X