ವಿಜಯಪುರ | ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಸಂಘ ಪ್ರತಿಭಟನೆ

Date:

Advertisements

ಕನಿಷ್ಠ 10 ಸಾವಿರ ರೂ. ಗೌರವಧನ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ವಿಜಯಪುರದಲ್ಲಿ ಧರಣಿ ನಡೆಸಲಾಯಿತು.

ನಗರದ ಡಾ.ಬಿ.ಆ‌ರ್.ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡ ಧರಣಿಯಲ್ಲಿ ನೂರಾರು ಆಶಾ ಕಾರ್ಯಕರ್ತೆಯರು ಭಾಗವಹಿಸಿ ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು.

ಎಐಕೆಕೆಎಂಎಸ್ ಸಂಘಟನೆ ರಾಜ್ಯ ಕಾರ್ಯದರ್ಶಿ ಬಿ.ಭಗವಾನ್ ರೆಡ್ಡಿ ಮಾತನಾಡಿ, “ಕಳೆದ ಜನವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಹೋರಾಟ ನಡೆಸಿದಾಗ ಕನಿಷ್ಠ 10 ಸಾವಿರ ರೂ.ಗೌರವದ ಗ್ಯಾರಂಟಿ ಕೊಡುತ್ತೇವೆ. ಬಜೆಟ್‌ನಲ್ಲೂ ಘೋಷಣೆ ಮಾಡುವುದಾಗಿ ಸರಕಾರ ಭರವಸೆ ನೀಡಿತ್ತು. ಈವರೆಗೂ ಈಡೇರಿಸಿಲ್ಲ.” ಎಂದು ದೂರಿದರು. “ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೇವೆಯಲ್ಲಿರುವ ಆಶಾ ಕಾರ್ಯ ಕರ್ತೆಯರಿಗೆ ಸರಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಇಲ್ಲದಿದ್ದರೆ ರಾಜ್ಯವ್ಯಾಪಿ ಹೋರಾಟ ತೀವ್ರಗೊಳಿಸಲಾಗುವುದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಜಿಲ್ಲಾ ಮುಖಂಡ ಭರತ್‌ ಕುಮಾರ್ ಎಚ್ ಟಿ ಮಾತನಾಡಿ,‌ “ರಾಜ್ಯ ಹಾಗೂ ಕೇಂದ್ರ ಸರಕಾರಗಳು ‘ದುಡಿಯುವ ವರ್ಗದ ಹಿತಾಸಕ್ತಿ ಕಾಪಾಡುತ್ತಿಲ್ಲ. ಆಶಾ ಕಾರ್ಯಕರ್ತೆಯರಿಗೆ ನ್ಯಾಯಯುತವಾಗಿ 10 ಸಾವಿರ ರೂ. ಕನಿಷ್ಠ ವೇತನ ಕೂಡಲೇ ಜಾರಿಗೊಳಿಸಬೇಕು” ಎಂದರು.

ಇದನ್ನೂ ಓದಿ: ವಿಜಯಪುರ | ಶಿಥಿಲಗೊಂಡಿರುವ ಬಂಗಾರ ಗುಂಡಿಯ ಸರ್ಕಾರಿ ಶಾಲೆ: ಜೀವ ಭಯದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು!

ಜಿ ಜಿ ಗಾಂಧಿ ಮಾತನಾಡಿ, “ಒಂದು ಕುಟುಂಬ ಜೀವನ ನಿರ್ವಹಿಸಲು ಕನಿಷ್ಠ 25,000 ರೂ. ಅವಶ್ಯ ಇದೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ವೈದ್ಯರಂತೆ ಪ್ರಥಮ ಚಿಕಿತ್ಸೆ ಮಾಡುತ್ತ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ಪ್ರೋತ್ಸಾಹ ಧನ ಕೊಡುತ್ತಿಲ್ಲ. ಹೆಚ್ಚು ಕೆಲಸ ತೆಗೆದುಕೊಂಡು ಕನಿಷ್ಠ ವೇತನ ನೀಡದ ಸರಕಾರದ ಕ್ರಮ ಖಂಡನೀಯ” ಎಂದರು.

ಧರಣಿಯಲ್ಲಿ ಯುವಜನ ಸಂಘಟನೆಯ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗಬಾಗೇವಾಡಿ, ಶಿವಬಾಳಮ್ಮ ಕೊಂಡಗುಳಿ, ಶಿವರಂಜಿನಿ, ಆಶಾ ಕಾರ್ಯಕರ್ತೆಯರಾದ ನಿರ್ಮಲಾ, ಜಯಶ್ರೀ ಕುಂಬಾರ, ಮೆಹರುನ್ನಿಸಾ ಜಬನೂರು, ಮಲ್ಲಮ್ಮ, ರೇಣುಕಾ ಕಲಗುಟಕರ, ಲಕ್ಷ್ಮೀ ಸೀಮೆಕೇರಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X