ಚಿತ್ರದುರ್ಗ | ನರೇಗಾ ಕೆಲಸ, ಕೂಲಿ ವಿಳಂಬ ವಿರೋಧಿಸಿ ಗ್ರಾಕೂಸ್ ಕಾರ್ಯಕರ್ತರ ಪತ್ರ ಚಳವಳಿ

Date:

Advertisements

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕು ಸಿದ್ಧೇಶ್ವರನ ದುರ್ಗಾ ಗ್ರಾಮ ಪಂಚಾಯಿತಿಯಲ್ಲಿ ನರೇಗಾ-ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು 250 ಜನ ಕೆಲಸ ಮಾಡುತ್ತಿದ್ದು, ಒಂದುವರೆ ತಿಂಗಳಾದರೂ ಸಹ ಕೂಲಿ ಹಣ ಪಾವತಿ ಆಗಿರುವುದಿಲ್ಲ. ಅಲ್ಲದೆ ನಿರಂತರವಾಗಿ ನೂರು ಮಾನವ ದಿನಗಳ ಕೆಲಸ ಒದಗಿಸಲು ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ-ಗ್ರಾಕೂಸ್ ಪ್ರತಿಭಟನೆ ನಡೆಸಿ ಪತ್ರ ಚಳವಳಿ ನೆಡೆಸಿದರು.

ಈ ವೇಳೆ ಮಾತನಾಡಿದ ಗ್ರಾಕೂಸ್ ಮುಖಂಡರು “ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಪ್ರದೇಶದ ಬಡಜನರಿಗೆ ಆರ್ಥಿಕ ನೆರವು ಒದಗಿಸಿದೆ. ಆದರೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಿದ್ದೇಶ್ವರನ ದುರ್ಗಾ ಪಂಚಾಯತಿಯಲ್ಲಿ ಒಂದುವರೆ ತಿಂಗಳಾದರೂ ಒಂದು ವಾರದ ಕೂಲಿ ಸಹ ಹಣ ಪಾವತಿ ಆಗಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

1002502181

“100 ಮಾನವ ದಿನಗಳು ಮುಗಿಯುವವರೆಗೂ ನಿರಂತರ ಕೆಲಸ ನೀಡಬೇಕು. 2024ರಲ್ಲಿ ಆಗಸ್ಟ್ ತಿಂಗಳ ಹೊತ್ತಿಗೆ ಒಂದು ಕೂಲಿ ಕಾರ್ಡ್ ನಲ್ಲಿ ಇಬ್ಬರು ಕೆಲಸಕ್ಕೆ ಬರುತ್ತಿದ್ದರೆ ಅಂತಹವರ ನೂರು ಮಾನವ ದಿನಗಳು ಮುಗಿಯುತ್ತಾ ಬಂದಿತ್ತು. ಮತ್ತು 15ರಿಂದ 20 ಸಾವಿರ ಹಣ ಕೂಲಿ ಕಾರ್ಮಿಕರಿಗೆ ಪಾವತಿಯಾಗಿತ್ತು” ಎಂದು ತಿಳಿಸಿದರು.

Advertisements

“ಈ ವರ್ಷದಲ್ಲಿ ಬರೀ 15 ದಿನ ಕೆಲಸ ಮಾಡಿದ್ದು, ಇದುವರೆಗೂ ಹಣ ಬಿಡುಗಡೆಯಾಗದ ಕಾರಣ ಕಾರ್ಮಿಕರು ತೊಂದರೆ ಎದುರಿಸುತ್ತಿದ್ದು, ಕೆಲಸ ಮಾಡಿದ ಕೂಲಿ ಕಾರ್ಮಿಕರಿಗೆ ಈ ಕೂಡಲೇ ಸರ್ಕಾರ ತಕ್ಷಣವೇ ಹಣ ಬಿಡುಗಡೆ ಮಾಡಬೇಕು ಎಂದು ಪತ್ರ ಚಳುವಳಿ ನಡೆಸುತ್ತಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಇತಿಹಾಸದಲ್ಲಿ ಮೊದಲ ಬಾರಿಗೆ ಚಳ್ಳಕೆರೆಯಲ್ಲಿ ಯೂರಿಯಾ ಕೊರತೆ; ರೈತರ ಆತಂಕ

ಕಾರ್ಯಕರ್ತರು “ಕೂಲಿ ಕೊಡಿ, ಕೆಲಸ ಕೊಡಿ, ಇಲ್ಲ ಕುರ್ಚಿ ಬಿಡಿ” ಎಂದು ಘೋಷಣೆ ಕೂಗುತ್ತಾ ಪತ್ರ ಚಳುವಳಿ ನಡೆಸಿದರು.‌ ಪತ್ರ ಚಳುವಳಿ ವೇಳೆ ಗ್ರಾಕೂಸ್ ಮುಖಂಡರಾದ ಮಂಜಮ್ಮ, ಸಂಧ್ಯಾ, ವೈಶಾಲಿ, ನಾಗೇಂದ್ರ, ಸರೋಜಮ್ಮ, ಈರಮ್ಮ, ಶೇಖಪ್ಪ, ಮುದ್ದಪ್ಪ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X