ವಿಜಯಪುರ | ಆಲಮಟ್ಟಿ ಜಲಾಶಯ ಭರ್ತಿಗೆ ಕೆಲವೇ ಗಂಟೆಗಳು ಬಾಕಿ

Date:

Advertisements

ಆಲಮಟ್ಟಿ ಜಲಾಶಯದ ಒಳಹರಿವು ಕಡಿಮೆಯಾಗಿದೆ. ಒಂದು ವಾರದಿಂದ ಜಲಾಶಯದ ಹೊರಹರಿವು ಕಡಿಮೆ ಮಾಡಿದ್ದರಿಂದ ಜಲಾಶಯ ಬಹುತೇಕ ಆಗಸ್ಟ್ 15ರ ವೇಳೆಗೆ ಭರ್ತಿಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆಗಸ್ಟ್ ನಲ್ಲಿಯೂ ಪ್ರವಾಹ ಸ್ಥಿತಿ ಇದ್ದು, ಒಳಹರಿವು ಏರುಮುಖವಾಗಿದ್ದರೆ ಜಲಾಶಯ ಭರ್ತಿ ಮಾಡುವುದಿಲ್ಲ. ಸದ್ಯಕ್ಕೆ ಒಳಹರಿವು ಕೂಡ ಕಡಿಮೆ ಇದ್ದು, ಪ್ರವಾಹದ ಸ್ಥಿತಿಯಿಲ್ಲ. ಹೀಗಾಗಿ ಆಗಸ್ಟ್ 15ಕ್ಕೆ ಜಲಾಶಯದ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಕೆಬಿಜೆಎನ್ಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಹೊರಹರಿವು ಸ್ಥಗಿತಗೊಳಿಸಿದ್ದರೆ, ಜೂನ್ ಅಂತ್ಯಕ್ಕೆ ಜಲಾಶಯ ಭರ್ತಿಯಾಗುತ್ತಿತ್ತು. ಆದರೆ, ಕೇಂದ್ರ ಜಲ ಆಯೋಗದ ಮಾರ್ಗದರ್ಶನದನ್ವಯ ಜಲಾಶಯವನ್ನು ಕೆಲ ಮಾನದಂಡ ಅನುಸರಿಸಿ ಭರ್ತಿ ಮಾಡಲಾಗುತ್ತದೆ. ಈ ವರ್ಷ ಮುಂಗಾರು ಮಳೆ ಉತ್ತಮವಾಗಿದೆ ಎಂಬ ಹವಮಾನ ವರದಿ, ಇದೇ ಮೊದಲ ಬಾರಿ ಮೇ 19 ರಂದೇ ಅತಿ ಬೇಗನೆ ಜಲಾಶಯದ ಒಳಹರಿವು ಆರಂಭಗೊಂಡಿದ್ದರಿಂದ ಜಲಾಶಯ ಅರ್ಧ ಬರ್ತಿಯಾಗುವ ಮುನ್ನವೇ ಅಂದರೆ ಮೇ 30ರಂದೆ ಜಲಾಶಯದಿಂದ ನೀರು ಬಿಡಲು ಆರಂಭಿಸಲಾಗಿದೆ.

Advertisements

ಇದರಿಂದಾಗಿ ಜಲಾಶಯಕ್ಕೆ 1.20 ಲಕ್ಷ ಕ್ಯೂಸೆಕ್ಸ್ ಅಧಿಕ ಒಳಹರಿವು ಬಂದು, 1.40 ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ಇದರಿಂದಾಗಿ ಜಲಾಶಯದ ಮುಂಭಾಗದಲ್ಲಿ ಯಾವುದೇ ಪ್ರವಾಹ ಸ್ಥಿತಿ ಉಂಟಾಗಲಿಲ್ಲ. ಕೆ ಬಿ ಜೆ ಎನ್ ಎಲ್ ಅಧಿಕಾರಿಗಳು ಈ ಬಾರಿ ಮುಂಜಾಗ್ರತೆ ಕ್ರಮ ಅನುಸರಿಸುವುದರಿಂದ ಈ ಬಾರಿ ಜಲಾಶಯದ ಹಿಂಭಾಗ ಹಾಗೂ ಮುಂಭಾಗದಲ್ಲಿ ಜಮೀನುಗಳಿಗೆ ನೀರು ನುಗ್ಗುವುದು ಮತ್ತಿತರ ಯಾವುದೇ ಅನಾಹುತಗಳು ಸಂಭವಿಸಲಿಲ್ಲ.

ಇದನ್ನೂ ಓದಿ: ವಿಜಯಪುರ | ಶಿಥಿಲಗೊಂಡಿರುವ ಬಂಗಾರ ಗುಂಡಿಯ ಸರ್ಕಾರಿ ಶಾಲೆ: ಜೀವ ಭಯದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು!

519.60 ಮೀಟರ್ ಗರಿಷ್ಠ ಎತ್ತರದ ಜಲಾಶಯದಲ್ಲಿ, 519.52 ಮೀಟರ್ ವರೆಗೆ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 32 ಪಾಯಿಂಟ್ 395 ಕ್ಯೂಸೆಕ್ ಒಳಹರಿವು ಇದ್ದು, 30.370 ಕ್ಯೂಸೆಕ್ ನೀರನ್ನು ನದಿ ಪಾತ್ರದಿಂದ ಹರಿ ಬಿಡಲಾಗುತ್ತಿದೆ. 123. 081 ಟಿಎಂಸಿ ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 121.606 ಟಿಎಂಸಿ ಅಡಿ ನೀರು ಮಾತ್ರ ಬಾಕಿ ಇದೆ. ಅಧಿಕಾರಿಗಳ ಮುಂಜಾಗ್ರತ ಕ್ರಮ ಹಾಗೂ ಜಲ ಆಯೋಗದ ಮಾರ್ಗದರ್ಶನದಿಂದ ಜಲಾಶಯದ ಹತ್ತಿರವಿರುವ ಜಮೀನುಗಳಿಗೆ ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X