ಯಾದಗಿರಿ | ಎಲ್ಲ ಕಛೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಭಾವಚಿತ್ರ ಅಳವಡಿಸುವಂತೆ ಒತ್ತಾಯ

Date:

Advertisements
  • ರಾಯಣ್ಣ ಭಾವಚಿತ್ರ ಅಳವಡಿಸಲು ಕಾರ್ಮಿಕರ ಸೇವಕರು ಸಂಘಟನೆ ಆಗ್ರಹ
  • ಶಹಾಪೂರ ತಾಲೂಕು ತಹಸೀಲ್ದಾರ್‌ ಅವರಿಗೆ ಮನವಿ ಪತ್ರ ಸಲ್ಲಿಕೆ

ಸರ್ಕಾರಿ, ಖಾಸಗಿ ಕಛೇರಿ ಸೇರಿದಂತೆ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಅಳವಡಿಸಲು ಕಾರ್ಮಿಕರ ಸೇವಕರು ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಪೂರ ತಹಸೀಲ್ದಾರ್‌ಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ್ದಾರೆ.

ಕಾರ್ಮಿಕರ ಸೇವಕರು ಸಂಘಟನೆ ಜಿಲ್ಲಾಧ್ಯಕ್ಷ ಮಾಳಪ್ಪ ಎಸ್. ಪೂಜಾರಿ ಮಾತನಾಡಿ, “ಅಪ್ರತಿಮ ವೀರರಾಗಿದ್ದ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರು ಇಂದಿನ ಯುವ ಜನಾಂಗಕ್ಕೆ ಸ್ಪೂರ್ತಿಯಾಗಿದ್ದಾರೆ. ಅಂತಹ ಮಹಾನ್ ವ್ಯಕ್ತಿಯ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸುವುದು ಹಿಂದೆಂದಿಗಿಂತಲೂ ಇಂದು ಅತ್ಯಗತ್ಯವಾಗಿದೆ. ದೇಶಪ್ರೇಮಿ ರಾಯಣ್ಣನವರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಛೇರಿ, ಖಾಸಗಿ ಶಾಲಾ – ಕಾಲೇಜುಗಳಲ್ಲಿ ಅಳವಡಿಸಿ ಪ್ರತಿವರ್ಷ ಅವರ ಜನ್ಮ ದಿನಾಚರಣೆ ಹಾಗೂ ಹುತಾತ್ಮ ದಿನಾಚರಣೆಯನ್ನು ಆಚರಿಸುವಂತೆ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಆದೇಶವನ್ನು ಪಾಲಿಸದೇ ಇರುವುದು ವಿಷಾದನೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಕೂಡಲೇ ಜಾರಿಗೊಳಿಸಿ ಎಲ್ಲ ಸರ್ಕಾರಿ ಹಾಗೂ ಖಾಸಗಿ ಕಛೇರಿಗಳಲ್ಲಿ ರಾಯಣ್ಣರವರ ಭಾವಚಿತ್ರ ಕಡ್ಡಾಯವಾಗಿ ಅಳವಡಿಸಬೇಕು. ಅಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದೊಂದಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಜನ್ಮದಿನವೂ ಆಚರಿಸಬೇಕು ಮತ್ತು ಜನವರಿ 26 ರಂದು ಗಣರಾಜ್ಯೋತ್ಸವ ಕಾರ್ಯಕ್ರಮದೊಂದಿಗೆ ರಾಯಣ್ಣನವರ ಹುತಾತ್ಮ ದಿನಾಚರಣೆ ಆಚರಿಸಬೇಕು. ರಾಯಣ್ಣನವರ ಜೀವನ ಮತ್ತು ಹೋರಾಟದ ಕುರಿತು ಉಪನ್ಯಾಸ ಸೇರಿದಂತೆ ವಿವಿಧ ಸ್ಪರ್ಧೆ ಏರ್ಪಡಿಸಬೇಕು” ಎಂದು ಅವರು ಆಗ್ರಹಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಮಣಿಪುರದಿಂದ ’ಈ ದಿನ’ ವರದಿ- 5 | ಎಳೆಯ ಕೈಗಳಲ್ಲಿ ಬಂದೂಕು! ಬಂಕರ್‌ಗಳಲ್ಲಿ ಕಂಡ ದುರಂತ ಕಥನ

ಈ ಸಂದರ್ಭದಲ್ಲಿ ಸಂಘಟನೆ ಪ್ರಮುಖರಾದ ಅಯ್ಯಪ್ಪ ಟನಿಕೆದಾರ, ಹಣಮಂತರಾಯ ಶರಣವರ, ಯಲ್ಲು ಶಹಾಪೂರ, ಖದಿರ್ ಬಾಷಾ ಇಬ್ರಾಹಿಂಪೂರ ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X