ಮುದ್ದೇಬಿಹಾಳ | ಒಳಮೀಸಲಾತಿ ವರದಿ ತಿರಸ್ಕರಿಸಲು ಆಗ್ರಹಿಸಿ ಛಲವಾದಿ ಮಹಾಸಭಾ ಪ್ರತಿಭಟನೆ

Date:

Advertisements

ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಸರ್ಕಾರಕ್ಕೆ ನೀಡಿರುವ ಒಳ ಮೀಸಲಾತಿ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ಆಗ್ರಹಿಸಿ ಛಲವಾದಿ ಮಹಾಸಭಾ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಸಮಿತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.

ಮುದ್ದೇಬಿಹಾಳದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೂ ಜಾಥಾ ನಡೆಸಿದ ಬಳಿಕ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸಮೀಕ್ಷೆಯು ಸಂಪೂರ್ಣ ತಾತ್ಕಾಲಿಕ,, ಅಸಂಬದ್ಧ ಮತ್ತು ತೃಪ್ತಿಕರವಾಗಿ ನಡೆದಿರುವುದಿಲ್ಲ. ಐತಿಹಾಸಿಕ ಹಾಗೂ ಕಾನೂನು ಬದ್ಧ ಮಾಹಿತಿಯ ಅಪರ್ಯಾಪ್ತತೆಯಿಂದ ಕೂಡಿದೆ. ಬಲಗೈ ಸಮುದಾಯದ ಜನಸಂಖ್ಯೆಯನ್ನು ಅಂಕಿ ಅಂಶಗಳಿಂದ ಕಡಿಮೆ ಮಾಡುವ ಉದ್ದೇಶದಿಂದ ಮಾದಿಗ ಸಮುದಾಯದ ಜನಸಂಖ್ಯೆಗೆ ಬಲಗೈ ಸಮುದಾಯ ಸೇರ್ಪಡೆಗೊಳಿಸಲಾಗಿದೆ. ಸರ್ಕಾರದ ಆದೇಶಗಳು, ನಿಯಮಾವಳಿ ಉಲ್ಲಂಘನೆಯಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

Advertisements
WhatsApp Image 2025 08 14 at 4.20.33 PM

ಸಮೀಕ್ಷೆಯಲ್ಲಿ ಅಪೂರ್ಣತೆ ಮತ್ತು ತಾತ್ಕಾಲಿಕ ದೋಷಗಳಿವೆ. ಐತಿಹಾಸಿಕ ಮತ್ತು ಕುಲ ಶಾಸ್ತ್ರೀಯ ಅಧ್ಯಯನದ ಕೊರತೆ ಇದೆ. ಬಲಗೈ ಸಮುದಾಯದ ವಿರುದ್ಧ ದ್ವೇಷಪೂರ್ವಕ ನಿರ್ಧಾರವಾಗಿದ್ದು ಸಮುದಾಯದ ಜನಸಂಖ್ಯೆಯನ್ನು ಕುಗ್ಗಿಸುವ ಉದ್ದೇಶವೇ ಹೊಂದಿದೆ. ನ್ಯಾಯಮೂರ್ತಿ ನಾಗಮೋಹನ ದಾಸ್ ರವರ ವರದಿಯನ್ನು ಸಂಪೂರ್ಣ ತಿರಸ್ಕರಿಸಬೇಕು. ವರದಿಯನ್ನು ಅಂಗೀಕರಿಸಿದರೆ, ಸರ್ಕಾರ, ಪರಿಶಿಷ್ಟ ಜಾತಿ ಸಚಿವರು ಮತ್ತು ಶಾಸಕರು ನಿರ್ವಹಣೆಯ ಫಲಿತಾಂಶಕ್ಕೆ ಹೊಣೆಗಾರರಾಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಇದನ್ನು ಓದಿದ್ದೀರಾ? ‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

ಪ್ರತಿಭಟನೆಯಲ್ಲಿ ಹರೀಶ್ ನಾಟೇಕರ್, ವೈ ಎಸ್ ವಿಜಯಕರ್, ಪ್ರಕಾಶ ಸರೋವರ, ಗುಂಡಪ್ಪ ಚಲವಾದಿ, ಮಲ್ಲು ತಳವಾರ, ಬಸವರಾಜ ಸಾರೂರ, ಮಂಜುನಾಥ ಕಟ್ಟಿಮನಿ, ಶಿವಪುತ್ರ ಅಜಿಮನಿ, ಶ್ರೀಶೈಲ ಬೀದರಕುಂದಿ, ಪರಶು ಮುರಾಳ, ಎಸ್ ಎನ್ ಚಲವಾದಿ, ಈರಣ್ಣ ತಾರನಾಳ, ಸಿದ್ದಪ್ಪ ಚಲವಾದಿ ಹಾಗೂ ಭೀಮಣ್ಣ ಛಲವಾದಿ ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X