ಹಾವೇರಿ | ನಿವೇಶನ ಹಂಚಿಕೆಗೆ ಗ್ರಾಮಸ್ಥರ ಒತ್ತಾಯ

Date:

Advertisements

ಅಕಾಲಿಕ ಮಳೆ ಹಾಗೂ ಅತಿವೃಷ್ಠಿಯಿಂದ ಬಹುತೇಕರು ಮನೆಗಳನ್ನು ಕಳೆದುಕೊಂಡಿದ್ದು, ವಾಸಿಸಲು ಸಾಧ್ಯವಾಗದಂತಹ ಸ್ಥಿತಿ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಗ್ರಾಮ ಪಂಚಾಯತಿ ಖಾಲಿ ನಿವೇಶನಗಳನ್ನು ಹಂಚಿಕೆ ಮಾಡದೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಡಿಎಸ್ಎಸ್ ಮುಖಂಡ ಸಂತೋಷ ಆರೋಪಿಸಿದರು.

ಹಾವೇರಿ ತಾಲೂಕಿನ ಕೋಳೂರು ಗ್ರಾಮದ ಖಾಲಿ‌ ಇರುವ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆ ವಿಳಂಬದ ವಿರುದ್ಧ ಕೋಳೂರು ಗ್ರಾಮ ಪಂಚಾಯಿತಿ ಎದುರು ನಡೆದ ಬೃಹತ್ ಪ್ರತಿಭಟನೆ ವೇಳೆ ಪಿಡಿಒ ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಗ್ರಾಮ ಪಂಚಾಯತಿ ಖಾಲಿ ನಿವೇಶನಗಳನ್ನು ಹಂಚಿಕೆ ಮಾಡದೆ ವಿಳಂಬ ಮಾಡುತ್ತಿದ್ದು, ಸ್ಥಳೀಯರನ್ನು ನಿತ್ಯವೂ ಅಲೆದಾಡಿಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

“ಖಾಲಿ ನಿವೇಶನಗಳನ್ನು ಕೂಡಲೇ ಹಂಚಿಕೆ ಮಾಡಬೇಕು. ಈಗಲೂ ವಿಳಂಬ ದೋರಣೆ ಮುಂದುವರೆಸಿದರೆ, ಮುಂದಿನ ಪರಿಣಾಮ ಎದುರಿಸಲು ಸಿದ್ಧರಾಗಿ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಮಾನಸಿಕ ಆರೋಗ್ಯ ವಿಭಾಗದ ಪ್ರಗತಿ; ಡಬ್ಲ್ಯೂಎಚ್‍ಒ ತಂಡದಿಂದ ಪರಿಶೀಲನೆ

ಕೋಳೂರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಈಶ್ವರಪ್ಪ ಮನವಿ ಸ್ವೀಕರಿಸಿದ್ದು, “ಸಂಬಂಧಪಟ್ಟ ಇಲಾಖೆಯ ಪೂರ್ವಾನುಮತಿ ಪಡೆಯಲು ತಿಳಿಸಿದೆ ಹಾಗೂ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರು, ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X