ಹಾವೇರಿ | ಆ.16ರ ಕ್ಯಾಬಿನೆಟ್ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲೇಬೇಕು: ಉಡಚಪ್ಪ ಮಾಳಗಿ

Date:

Advertisements

ರಾಜ್ಯ ಸರ್ಕಾರವು ಆಗಸ್ಟ್ 16ರ ಕ್ಯಾಬಿನೆಟ್ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲೇಬೇಕು. ಈ ಬಗ್ಗೆ ಎಲ್ಲ ಶಾಸಕರು ಹಾಗೂ ಸಚಿವ ಸಂಪುಟದ ಎಲ್ಲರೂ ಸಹಕಾರ ನೀಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, “ಒಳಮೀಸಲಾತಿ ಜಾರಿಯನ್ನು ಯಾವುದೇ ಕಾನೂನು ಕಗ್ಗಂಟು ಉಂಟಾಗದಂತೆ ಜಾರಿ ಆದೇಶ ಮಾಡಿಸುವ ಬಗ್ಗೆ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ನಿರಂತರವಾಗಿ ಹೋರಾಟ, ಕ್ರಾಂತಿಕಾರಿ ಪಾದಯಾತ್ರೆ, ಕ್ರಾಂತಿಕಾರಿ ರಥಯಾತ್ರೆ, ಕ್ರಾಂತಿಕಾರಿ ರಥಯಾತ್ರೆ ಮತ್ತು ಪ್ರತಿಭಟನೆಗಳನ್ನು ಹಮ್ಮಿಕೊಂಡು ಬರುತ್ತಿರುವ ಕರ್ನಾಟಕದ ಸಮಸ್ತ ಒಳಮೀಸಲಾತಿ ಹೋರಾಟಗಾರರು ಬೆಂಗಳೂರಿನಲ್ಲಿ ದುಂಡು ಮೇಜಿನ ಸಭೆ ನಡೆಸಿ, ನಾಗಮೋಹನ್ ದಾಸ್ ಅವರ ವರದಿ ಜಾರಿಗೆ ಸಂಬಂಧಿಸಿದಂತೆ ಹಿರಿಯ ವಕೀಲರು, ನಿವೃತ್ತ ಅಧಿಕಾರಿಗಳು ಮತ್ತು ರಾಜ್ಯದ ವಿವಿಧ ಸಂಘಟನೆಗಳ ಹೋರಾಟಗಾರರ ಮಧ್ಯ ಗಂಭೀರ ಚರ್ಚೆಗಳು ನಡೆದವು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ವಿವಿಧ ಬೇಡಿಕೆ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Advertisements

“ಅಗಸ್ಟ್ 16ರ ಕ್ಯಾಬಿನೆಟ್ಟಿನಲ್ಲೇ ಒಳಮೀಸಲಾತಿ ಜಾರಿಯ ಘೋಷಣೆಯಾಗಬೇಕು. ಯಾವುದೇ ಉಪಸಮಿತಿ ರಚಿಸಿ, ಒಳಮೀಸಲಾತಿ ಜಾರಿಯನ್ನು ಮತ್ತಷ್ಟು ಕಾಲ ಮುಂದೂಡಿ, ಈಗಾಗಲೇ ವಯೋಮಿತಿ ಮೀರುತ್ತಿರುವ ಯುವಕರ ಭವಿಷ್ಯವನ್ನು ಹಾಳುಮಾಡಬಾರದು. ಒಳಮೀಸಲಾತಿ ಜಾರಿಗೆ ಎಲ್ಲ ಸಚಿವರು ಒಕ್ಕೊರಲಿನಿಂದ ಒಪ್ಪಿಗೆ ಸೂಚಿಸಬೇಕು” ಎಂದು ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X