ಉಡುಪಿ | ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ಕೊಡುಗೆ ಅಪಾರ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Date:

Advertisements

ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ರಾಜ್ಯ ಸರ್ಕಾರವೂ ಕೂಡಾ ಮೀನುಗಾರರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಮೀನುಗಾರರ ಹಿತಾಸಕ್ತಿ ಕಾಪಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಉಡುಪಿ ಜಿಲ್ಲಾಡಳಿತ ಮತ್ತು ಮೀನುಗಾರಿಕೆ ಇಲಾಖೆ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಮೀನುಗಾರಿಕೆಯಲ್ಲಿ ಜೀವರಕ್ಷಕ ಸಾಧನಗಳ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸುವ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ‌ಮೀನುಗಾರರು ತಮ್ಮ ಜೀವದ ಹಂಗನ್ನೇ ತೊರೆದು‌ ಸಮುದ್ರಕ್ಕಿಳಿದು ಮೀನುಗಾರಿಕೆ ಮಾಡುತ್ತಾರೆ ಎಂದರು.

ಮೀನುಗಾರರು ಕಡಲಿನಲ್ಲಿ ಹಗಲೂ ರಾತ್ರಿ ಲೆಕ್ಕಿಸದೆ ತಮ್ಮ ಜೀವವನ್ನು ಪಣಕಿಟ್ಟು ದುಡಿದು ತಮ್ಮ ಕುಟುಂಬವನ್ನು ಸಾಕುವುದಕ್ಕಾಗಿ ನೈಸರ್ಗಿಕ ಸಂಪನ್ಮೂಲಗಳ ಸಧ್ಬಳಕೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವು ಹಲವು ಯೋಜನೆಗಳಡಿ ಮೀನುಗಾರರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಾ ಬಂದಿದೆ. ಇದರ ಸದುಪಯೋಗವನ್ನು ಮೀನುಗಾರರು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ‌

Advertisements

ಮಳೆಗಾಲದ ಸಮಯದಲ್ಲಿ ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಮೀನುಗಾರರ ಕುಟುಂಬಗಳಿಗೆ ಜೀವನೋಪಾಯಕ್ಕಾಗಿ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ರಾಜ್ಯದ ವಂತಿಗೆಯನ್ನು ದ್ವಿಗುಣಗೊಳಿಸಲಾಗಿದೆ. ಮೀನುಗಾರರಿಗೆ ಪ್ರತೀ ವರ್ಷ ಜೀವರಕ್ಷಕ ಸಾಧನಗಳಾದ ಲೈಫ್‌ ಬಾಯ್‌ & ಲೈಫ್‌ ಜಾಕೆಟ್‌ ಗಳನ್ನು ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದೆ ಎಂದರು.

1006690225

ಮೀನುಗಾರರು ಸುರಕ್ಷಿತವಾಗಿ ಸಮುದ್ರಕ್ಕಿಳಿದು ಮೀನುಗಾರಿಕೆ ಮಾಡಬೇಕು, ಕಳೆದ 5 ವರ್ಷಗಳಲ್ಲಿ ‌140 ಜನರು ಪ್ರಾಣ‌ ಕಳೆದುಕೊಂಡಿದ್ದಾರೆ. ಮೀನುಗಾರಿಕೆ ಎಂದರೆ ಬೆಂಕಿ‌ ಜೊತೆ ಸರಸವಾಡಿದಂತೆ, ಜೀವ ರಕ್ಷಕ ಗಳನ್ನು ಸೂಕ್ತವಾಗಿ ಬಳಸಿಕೊಂಡು ಮೀನುಗಾರಿಕೆ ಮಾಡಬೇಕು. ಸಿದ್ದರಾಮಯ್ಯನವರು ಈ ಹಿಂದೆ ಸಿಎಂ ಆಗಿದ್ದಾಗಲೂ ಮೀನುಗಾರರಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದರು, ಈಗಲೂ ಸರ್ಕಾರ ಮೀನುಗಾರರ ಪರ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

  • ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ
    ಇದೇ ವೇಳೆ ಮೀನುಗಾರರಿಗೆ ನಿವೇಶನ ಹಕ್ಕು ಪತ್ರ ಹಾಗೂ ಮನೆ ಮಂಜೂರಾತಿ ಹಕ್ಕು ಪತ್ರವನ್ನು ಸಚಿವರು ವಿತರಿಸಿದರು.‌ ‌ಜೊತೆಗೆ ಉಳಿತಾಯ ಪರಿಹಾರ ಯೋಜನೆಯಡಿ ಫಲಾನುಭವಿಗಳಿಗೆ ತಲಾ ಮೂರು ಸಾವಿರದಂತೆ ಚೆಕ್ ವಿತರಣೆ, ಜೀವರಕ್ಷಕ ಸಾಧನಗಳನ್ನು ವಿತರಿಸಿದರು.‌

ಸಮಾರಂಭದಲ್ಲಿ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೆರೂರು, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ‌ರಮೇಶ್ ಕಾಂಚನ್, ರಾಜ್ಯ ಸಂಕಷ್ಟ ಪರಿಹಾರ ಸಮಿತಿ ಸದಸ್ಯರಾದ ಮದನ್ ಕುಮಾರ್, ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ‌ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್‌, ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ‌ವಿವೇಕ್, ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X