ಗುಬ್ಬಿ | ರಾಷ್ಟ್ರ ಭಕ್ತಿ ಸಮರ್ಪಣೆಗೆ ಪ್ರತಿ ಮನೆ ಮೇಲೆ ರಾಷ್ಟ್ರ ಧ್ವಜ ಹಾರಿಸಿ : ಎಸ್ ಡಿ ದಿಲೀಪ್ ಕುಮಾರ್ ಕರೆ

Date:

Advertisements

ಸ್ವಾತಂತ್ರ್ಯೋತ್ಸವದ ಮುನ್ನ ದಿನ ಪ್ರತಿ ಮನೆ ಮನೆಗಳ ಮೇಲೆ ಭಾವೈಕ್ಯತೆ ಸಾರುವ ನಮ್ಮ ರಾಷ್ಟ್ರಧ್ವಜ ಹಾರಿಸುವ ಮೂಲಕ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ತಾಲೂಕಿನ ಜನತೆ ಕೈ ಜೋಡಿಸಬೇಕು ಎಂದು ಗುಬ್ಬಿ ಬಿಜೆಪಿ ಪಕ್ಷದ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಕರೆ ನೀಡಿದರು.

ಗುಬ್ಬಿ ಪಟ್ಟಣದ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಬಿಜೆಪಿ ಪಕ್ಷದ ಮೂಲಕ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಭಾವೈಕ್ಯತೆಯ ಸಂದೇಶ ಸಾರುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ರಾಷ್ಟ್ರ ಧ್ವಜವನ್ನು ಎಲ್ಲಾ ಕಾರ್ಯಕರ್ತರಿಗೆ ನೀಡಲಾಗಿದೆ ಎಂದರು.

ಬಿಜೆಪಿ ಮುಖಂಡ ಎಚ್.ಟಿ.ಭೈರಪ್ಪ ಮಾತನಾಡಿ ರಾಷ್ಟ್ರಧ್ವಜವನ್ನು ಮೊದಲಿಗೆ ಸರ್ಕಾರಿ ಶಾಲಾ ಮತ್ತು ಕಚೇರಿಗಳ ಮೇಲೆ ಹಾರಿಸಲಾಗುತ್ತಿತ್ತು. ನಂತರದ ದಿನಗಳಲ್ಲಿ ಸಂವಿಧಾನದ ಆಶಯದಂತೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ಮನೆ ಮನೆಗಳ ಮೇಲೆ ಹಾರಿಸುವ ಮೂಲಕ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಹಿನ್ನೆಲೆ ಇಡೀ ದೇಶದ ಜನತೆ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಸ್ವಾತಂತ್ರ್ಯೋತ್ಸವದ ದಿನವನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಬೇಕಿದೆ. ಅದರಂತೆ ನಮ್ಮ ತಾಲೂಕಿನಲ್ಲಿಯೂ ಗೌರವಯುತವಾಗಿ ಎಲ್ಲರೂ ರಾಷ್ಟ್ರಧ್ವಜ ಹಾರಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

Advertisements

ಪಟ್ಟಣ ಪಂಚಾಯಿತಿ ಸದಸ್ಯ ಜಿ. ಆರ್ ಶಿವಕುಮಾರ್ ಮಾತನಾಡಿ ದೇಶಭಕ್ತಿ ಅನಾವರಣಕ್ಕೆ ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ಅವಕಾಶ ಕೇಂದ್ರ ಸರ್ಕಾರ ನೀಡಿದೆ. ಅದರಂತೆ ಎಲ್ಲರೂ ಪ್ರತಿ ಮನೆಯ ಮೇಲೆ ರಾಷ್ಟ್ರ ಧ್ವಜ ನಿಯಮಾನುಸಾರ ಹಾರಿಸಿ ನಮ್ಮ ರಾಷ್ಟ್ರೀಯ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಎನ್.ಲಕ್ಷ್ಮಿರಂಗಯ್ಯ, ಮುಖಂಡರಾದ ಬಿ.ಲೋಕೇಶ್, ವಿಶ್ವನಾಥ್, ಸಿದ್ದರಾಜು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X