ಧಾರವಾಡ | ಮಕ್ಕಳು ಮಾನವ ಲೋಕದ ಸುಂದರ ಪುಷ್ಪಗಳು: ಸಂಗಮೇಶ ಬಬಲೇಶ್ವರ

Date:

Advertisements

ಮಕ್ಕಳು ಮಾನವ ಲೋಕದ ಸುಂದರ ಪುಷ್ಪಗಳಾಗಿದ್ದು, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇಂದು ದೇಶಾದ್ಯಂತ ಆಚರಿಸುವುತ್ತಿರುವ ಸ್ವಾತಂತ್ರೋತ್ಸವ ಅರ್ಥಪೂರ್ಣವಾಗಬೇಕಾದರೆ, ಮಕ್ಕಳಲ್ಲಿ ದೇಶಾಭಿಮಾನ ಬೆಳೆಸಬೇಕಾದ ಅಗತ್ಯವಿದೆ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.

ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಕೇಂದ್ರ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಬಾಲಮಂದಿರ ಮಕ್ಕಳಿಗಾಗಿ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ನಾವೆಲ್ಲ ಮಾಧ್ಯಮದಲ್ಲಿ ಗಮನಿಸಿರುವಂತೆ ಶಾಲೆಗಳಲ್ಲಿ ಮೊಟ್ಟೆ ವಿತರಿಸುವ ವಿಚಾರದಲ್ಲಿ ಹಾಗೂ ಅಡುಗೆಯವಳು ಬೇರೆ ಕೋಮಿನವಳು ಎನ್ನುವ ಕಾರಣಕ್ಕೆ ಶಾಲೆ ಮಕ್ಕಳನ್ನು ಬೇರೆ ಕಡೆಗೆ ಟಿ.ಸಿ ಕಿತ್ತುಕೊಂಡು ಹೋಗಿ ಪ್ರವೇಶ ಕೊಡಿಸುತ್ತಿರುವ ಪಾಲಕರ ಮನಸ್ಥಿತಿ ಬದಲಾಗಬೇಕಾಗಿದೆ. 79 ನೇ ಸ್ವಾತಂತ್ರೋತ್ಸವ ಆಚರಿಸುವುತ್ತಿರುವ ನಾವು ಈ ಸಂದರ್ಭದಲ್ಲಿ ಈ ಕುರಿತು ಗಂಭೀರವಾದ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ” ಎಂದರು.

ಬಾಲಮಂದಿರದ ಮಕ್ಕಳು ಭಕ್ತಿ ಗೀತೆ, ಭಾವಗೀತೆ, ಪಪೇಟ ಶೋ ಹಾಗೂ ಯೋಗ ನೃತ್ಯವನ್ನು ಪ್ರದರ್ಶಿಸಿ ಎಲ್ಲರ ಗಮನವನ್ನು ಸೆಳೆದರು. ಈ ಸಂದರ್ಭದಲ್ಲಿ ಪಾಲ್ಗೊಂಡ ಎಲ್ಲ ಮಕ್ಕಳಿಗೂ ಪುಸ್ತಕಗಳನ್ನು ವಿತರಿಸಿದರು.

Advertisements

ಇದನ್ನೂ ಓದಿ: ಧಾರವಾಡ | ಭಾರತದ ಮುಂದಿರುವ ಸವಾಲುಗಳನ್ನು ಒಗ್ಗಟ್ಟಿನಿಂದ ಎದುರಿಸಬೇಕಿದೆ: ಡಾ. ಬಡಿಗೇರ

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ರವೀಂದ್ರ ರತ್ನಾಕರ, ಆಪ್ತಕಾರ್ಯದರ್ಶಿ ಅನ್ನಪೂರ್ಣ ಸಂಗಳದ, ದೀಪಾ ಜಾವೂರ, ಅರ್ಚನಾ ಮಧುಶ್ರೀ, ಮೀನಾಕ್ಷಿ ಮೆಡ್ಲೇರಿ, ಹಂಜಗಿ, ಸುಭಾಷ ಚಂದ್ರಗಿರಿ, ಪದ್ಮಶ್ರೀ ಮೇಟಿ, ಸುವರ್ಣಲತಾ ಮಠದ, ಅರ್ಪಿತಾ, ರಾಜೇಶ್ವರಿ ಹಾಗೂ ಅಕಾಡೆಮಿ ಸಿಬ್ಬಂದಿ ವರ್ಗದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X