ಯಾದಗಿರಿ | ಅನಧಿಕೃತ ಇ-ಖಾತೆಗಳು ಸೃಷ್ಠಿ; ಕ್ರಮಕ್ಕೆ ನಗರಸಭೆ ಪೌರಾಯುಕ್ತ ಆಗ್ರಹ

Date:

Advertisements

ಸರ್ಕಾರಿ ಜಾಗದಲ್ಲಿ ಸುಮಾರು 1,310ರಷ್ಟು ಅನಧಿಕೃತ ಇ-ಖಾತೆಗಳು, ಯೋಜನಾ ಪ್ರಾಧಿಕಾರದ ಅನುಮೋದನೆ ಇಲ್ಲದೆ 45 ಎಕರೆಯಲ್ಲಿ ಇ-ಖಾತೆಗಳನ್ನು ಸೃಷ್ಠಿಸಲಾಗಿದ್ದು, ಯಾದಗಿರಿ ನಗರಸಭೆಯಿಂದ ಸರ್ಕಾರಕ್ಕೆ ಅಂದಾಜು 18 ಕೋಟಿ ರೂ. ನಷ್ಟವುಂಟಾಗಿದೆ ಎಂದು ಯಾದಗಿರಿ ನಗರಸಭೆ ಪೌರಾಯುಕ್ತ ಸಂಗಮೇಶ ಉಪಾಸೆ ತಿಳಿಸಿದರು.

“ಯಾದಗಿರಿ ನಗರಸಭೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ ಪೌರಾಯುಕ್ತರು, ಕಂದಾಯ ನಿರೀಕ್ಷಿಕರು, ಕಂದಾಯ ಅಧಿಕಾರಿಗಳು, ಕಿರಿಯ ಎಂಜಿನಿಯರ್, ಕರ ವಸೂಲಿಗರರ ಸಹಯೋಗದಿಂದ 2019ರಿಂದ 2023ರ ವರೆಗೆ 1310 ಇ-ಖಾತೆಗಳು ಅನಧಿಕೃತವಾಗಿವೆ” ಎಂದು ಹೇಳಿದರು.

“ಎನ್‌ಎ ಆಗದಿರುವ ಭೂಮಿ, ಪ್ಲಾನಿಂಗ್‌ ಆಗದೇ ಇರುವ ಭೂಮಿ, ಬಿಡುಗಡೆ ಆಗದಿರುವ ಭೂಮಿ, ರೈತರು ಉಳುಮೆ ಮಾಡುವಂತಹ ಭೂಮಿಗಳನ್ನು ಅನಧಿಕೃತವಾಗಿ ಲೇಔಟ್‌ ಮಾಡಿದ್ದು, ನಗರಸಭೆಗೆ ಅಂದಾಜಜು 18 ಕೋಟಿ ರೂ. ನಷ್ಟವುಂಟಾಗಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಲ್ಯಾಣ ಕರ್ನಾಟಕಕ್ಕೆ ಜಾಗತಿಕ ಮಟ್ಟದಲ್ಲಿ ಮಹತ್ವ ದೊರಕಬೇಕಿದೆ: ಸಾಹಿತಿ ಮಲ್ಲಿಕಾರ್ಜುನ ಕಡಕೋಳ

“ಅನಧಿಕೃತ ಇ-ಖಾತೆ ಮಾಡಿರುವ ಅಂದಿನ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಲಬುರಗಿ ಪ್ರಾದೇಶಿಕ ಆಯುಕ್ತರಿಗೆ ದಾಖಲೆ ಸಹಿತ ದೂರು ಸಲ್ಲಿಸಲಾಗಿದೆ. ಶೀಘ್ರದಲ್ಲೇ ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಬೇಕು” ಎಂದು ಪ್ರಕಟಣೆಗೆ ತಿಳಿಸಿದ್ದಾರೆ.

ಯಾದಗಿರಿ ಜಿಲ್ಲಾ ವಾಲೆಂಟಿಯರ್ ರಾಹುಲ್ ಕೊಲ್ಲೂರ್ ಕರ್ ಅವರ ಮಾಹಿತಿ ಆಧರಿಸಿದ ವರದಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X