ತುಮಕೂರು | ದೆಹಲಿಯಲ್ಲಿ ನನ್ನ ವಿರುದ್ಧ ಮೂರು ಜನರಿಂದ ಪಿತೂರಿ : ಮಾಜಿ ಸಚಿವ ಕೆ ಎನ್ ರಾಜಣ್ಣ

Date:

Advertisements

“ಕಳೆದ ಬುಧವಾರ ಸಚಿವನಾಗಿದ್ದೆ, ಇಂದು ಮಾಜಿ ಸಚಿವನಾಗಿದ್ದೇನೆ, ಆದರೆ ನನಗೆ ಯಾವುದೂ ಬದಲಾವಣೆಯ ಅನುಭವವಾಗಿಲ್ಲ. ನನ್ನ ಮೇಲೆ ಜನರ ಇಟ್ಟಿರುವ ವಿಶ್ವಾಸ ಹಾಗೂ ಪ್ರೀತಿಯನ್ನು ನೋಡಿದರೆ ನನಗೆ ಸಂತೋಷವಾಗುತ್ತದೆ” ಎಂದು ಮಾಜಿ ಸಚಿವ ಕೆ. ಎನ್ ರಾಜಣ್ಣ ಹೇಳಿದರು

ಮಧುಗಿರಿಯಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು,  ರಾಹುಲ್ ಗಾಂಧಿ ವೋಟ್ ಚೋರಿ ವಿಚಾರದಲ್ಲಿ ಜಾಗೃತಿ ಮೂಡಿಸುತ್ತಿರುವುದು ಒಳ್ಳೆಯ ಕೆಲಸ. ಹಳ್ಳಿಗಳಲ್ಲಿ ನಕಲಿ ವೋಟ್ ಹಾಕಲು ಅವಕಾಶವಿಲ್ಲ, ಆದರೆ ನಗರಗಳಲ್ಲಿ ಇದು ಹೆಚ್ಚಾಗಿದೆ. ಆರ್ ಎಸ್.ಎಸ್  ನವರು ಸಿಸ್ಟಮ್ಯಾಟಿಕ್ ಆಗಿ ನಡೆಸುತ್ತಾರೆ” ಎಂದು ಆರೋಪಿಸಿದರು.

 ಸಚಿವ ಸ್ಥಾನ ವಜಾ ವಿಚಾರ “ಇದು ಮುಖ್ಯಮಂತ್ರಿ ನಿರ್ಧಾರವಲ್ಲ, ಹೈ ಕಮಾಂಡ್ ನಿರ್ಧಾರ. ಮೂವರು ದೆಹಲಿಯಲ್ಲಿ ಪಿತೂರಿ ಮಾಡಿದ್ದಾರೆ. ಆದರೆ ನಾನು ಜನರ ಸೇವೆ ಮಾಡಲು ಬಳಸುತ್ತೇನೆ. ಸಮಯ ಬಂದಾಗ ಮತ್ತೆ ಸಚಿವ ಸ್ಥಾನ ಪಡೆಯುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisements

 “1998ರಲ್ಲಿ ವಿಧಾನ ಪರಿಷತ್‌ಗೆ ಅತಿ ಹೆಚ್ಚು ಬಹುಮತದಲ್ಲಿ ಗೆದ್ದಿದ್ದೆ. 2004ರಲ್ಲಿ ಟಿಕೆಟ್ ಸಿಗಲಿಲ್ಲ. ಮಧುಗಿರಿಯಲ್ಲಿ ಮೊದಲ ಬಾರಿ ಸೋಲು ಅನುಭವಿಸಿದ್ದೇನೆ, ಆದರೆ ಗೆಲುವು, ಸೋಲನ್ನು ಒಂದೇ ರೀತಿಯಾಗಿ ಸ್ವೀಕರಿಸಿದ್ದೇನೆ” ಎಂದು ನೆನಪಿಸಿಕೊಂಡರು.

 “ನಾನು ಸುಳ್ಳು ಹೇಳುವುದಿಲ್ಲ. ಅಧಿಕಾರಕ್ಕಿಂತ ಜನರ ಪ್ರೀತಿ ಮುಖ್ಯ. ಸಿದ್ದರಾಮಯ್ಯ ಬಡವರ ಪರ ಕೆಲಸ ಮಾಡುತ್ತಿದ್ದಾರೆ, ಅದರಿಂದ ಖುಷಿ ಇದೆ” ಎಂದರು.

ಶ್ರೀರಾಮುಲು ಅವರನ್ನು ಕಾಂಗ್ರೆಸ್‌ಗೆ ಕರೆತರುವ ಪ್ರಯತ್ನದಲ್ಲಿದ್ದೇನೆ ಎಂಬುದು ಸಹ ಅವರು ಬಹಿರಂಗಪಡಿಸಿದರು. ದೆಹಲಿಗೆ ತೆರಳಿ ಬಂದ ಬಳಿಕ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X