ಹೈಕೋರ್ಟ್ ಕೊಲಿಜಿಯಂಗಿಂತ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಮೇಲಲ್ಲ: ಸಿಜೆಐ ಬಿ ಆರ್‌ ಗವಾಯಿ

Date:

Advertisements

ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ಕೊಲಿಜಿಯಂ – ಎರಡೂ ಸಾಂವಿಧಾನಿಕ ಸಂಸ್ಥೆಗಳು. ಇವುಗಳಲ್ಲಿ ಯಾವುದೂ ಮೇಲಲ್ಲ, ಯಾವುದೂ ಕೀಳಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಅವರು ಶನಿವಾರ ಅಭಿಪ್ರಾಯಪಟ್ಟರು.

ಸುಪ್ರೀಂ ಕೋರ್ಟ್ ಬಾರ್‌ ಅಸೋಸಿಯೇಷನ್‌ (ಎಸ್‌ಸಿಬಿಎ) 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಎಸ್‌ಸಿಬಿಎ ಅಧ್ಯಕ್ಷ ವಿಕಾಸ್‌ ಸಿಂಗ್‌ ಅವರು, ‘ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳ ನೇಮಕ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ವಕೀಲಿಕೆ ಮಾಡುವ ವಕೀಲರನ್ನೂ ಪರಿಗಣಿಸಿ’ ಎಂದು ಮನವಿ ಮಾಡಿದರು.

ಆಗ ಸಿಜೆಐ ಗವಾಯಿ ಅವರು, ‘ನ್ಯಾಯಮೂರ್ತಿಗಳ ನೇಮಕಕ್ಕೆ ನಿರ್ದಿಷ್ಟ ಹೆಸರು ಶಿಫಾರಸು ಮಾಡುವಂತೆ ಹೈಕೋರ್ಟ್‌ ಕೊಲಿಜಿಯಂಗೆ, ಸುಪ್ರೀಂ ಕೋರ್ಟ್ ಕೊಲಿಜಿಯಂ ಆದೇಶ ಮಾಡುವಂತಿಲ್ಲ’ ಎಂದು ಸ್ಪಷ್ಟಪಡಿಸಿದರು.

Advertisements

‘ನ್ಯಾಯಮೂರ್ತಿಗಳ ನೇಮಕ ವಿಚಾರದಲ್ಲಿ ಹೈಕೋರ್ಟ್‌ ಕೊಲಿಜಿಯಂ ಮೊದಲಿಗೆ ನಿರ್ಧಾರ ಕೈಗೊಳ್ಳುತ್ತದೆ. ಹೈಕೋರ್ಟ್‌ ಕೊಲಿಜಿಯಂಗೆ ನಾವು ಕೆಲವು ಹೆಸರುಗಳನ್ನು ಶಿಫಾರಸು ಮಾಡುತ್ತೇವೆ ಮತ್ತು ಅವುಗಳನ್ನು ಪರಿಗಣಿಸುವಂತೆ ಮನವಿ ಮಾಡುತ್ತೇವೆ. ಅಂತಿಮವಾಗಿ ಹೈಕೋರ್ಟ್‌ ಕೊಲಿಜಿಯಂ ಅರ್ಹ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿ ಸುಪ್ರೀಂ ಕೋರ್ಟ್‌ಗೆ ಕಳುಹಿಸುತ್ತದೆ’ ಎಂದು ವಿವರಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಟ್ಟೆಗೆ ವಿರೋಧ; ಬಡ ಮಕ್ಕಳ ಆಹಾರದ ಸ್ವಾತಂತ್ರ್ಯಕ್ಕೆ ಕೊಕ್ಕೆ

ಸಂಜೀವ್‌ ಖನ್ನಾ ಅವರು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಆಗಿದ್ದಾಗ, ಅಭ್ಯರ್ಥಿಗಳೊಂದಿಗೆ ಸಂದರ್ಶನ ನಡೆಸುವ ಪ್ರಕ್ರಿಯೆಯನ್ನು ಆರಂಭಿಸಲಾಯಿತು. ಅಭ್ಯರ್ಥಿಗಳೊಂದಿಗೆ 10 ನಿಮಿಷ, 15 ನಿಮಿಷ ಅಥವಾ ಅರ್ಧ ತಾಸು ಸಂವಾದ ನಡೆಸಿದಾಗ ಸಮಾಜದ ಸೇವೆ ಸಲ್ಲಿಸಲು ಅವರು ಯೋಗ್ಯರೇ ಎಂಬುದನ್ನು ಪರಿಶೀಲಿಸಬಹುದು ಎಂದು ಅವರು ಹೇಳಿದರು.

ಸ್ವಾತಂತ್ರ್ಯೋತ್ಸವನ್ನು ಉಲ್ಲೇಖಿಸಿ, ಸ್ವಾತಂತ್ರ್ಯವು ರಾಜಕೀಯ ಚಳವಳಿ ಅಷ್ಟೇ ಅಲ್ಲ, ನೈತಿಕ ಮತ್ತು ಕಾನೂನಾತ್ಮಕ ಹೋರಾಟವೂ ಆಗಿತ್ತು. ಅಸಂಖ್ಯಾತ ವಕೀಲರು ಈ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂಬುದನ್ನು ದೇಶದ ಇತಿಹಾಸವು ತಿಳಿಸಿಕೊಡುತ್ತದೆ ಎಂದು ಹೇಳಿದರು.

ರವೀಂದ್ರನಾಥ ಟ್ಯಾಗೋರ್‌, ಮಹಾತ್ಮ ಗಾಂಧಿ, ಬಿ ಆರ್‌ ಅಂಬೇಡ್ಕರ್‌, ಮೌಲಾನಾ ಅಬುಲ್ ಕಲಾಮ್ ಆಜಾದ್‌ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರನ್ನು ಅವರು ಸ್ಮರಿಸಿದರು. ದುರ್ಬಲರ ಸ್ವಾತಂತ್ರ್ಯವನ್ನು ವಿಸ್ತರಿಸುವ ಮತ್ತು ಅವರ ಹಕ್ಕುಗಳನ್ನು ರಕ್ಷಿಸುವ ಮೂಲಕ ನಾವು ಕಾನೂನನ್ನು ವ್ಯಾಖ್ಯಾನಿಸಿ, ಬಲಪಡಿಸಬೇಕಾಗಿದೆ. ಆಗ ಮಾತ್ರ ಟ್ಯಾಗೋರ್‌ ಅವರ ಪ್ರಾರ್ಥನೆ, ಮಹಾತ್ಮ ಗಾಂಧಿ ಅವರ ಸ್ವರಾಜ್ಯ, ಅಂಬೇಡ್ಕರ್‌ ಅವರ ಪ್ರಜಾಪ್ರಭುತ್ವ ಚಿಂತನೆ ಫಲಿಸುತ್ತದೆ ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X