ಬೀದರ್‌ | ನಿರಂತರ ಮಳೆ : ಜಮೀನು ಜಲಾವೃತ, ಸೇತುವೆ ಮೇಲೆ ಹರಿದ ನೀರು!

Date:

Advertisements

ಬೀದರ್ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರೈತರ ಜಮೀನುಗಳು ಜಲಾವೃತಗೊಂಡಿವೆ.

ಶುಕ್ರವಾರ ಬೆಳಿಗ್ಗೆ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನ ಖಡಕ್‌ ಬಿಸಿಲಿನೊಂದಿಗೆ ಮೋಡ ಬಯಲಾಯಿತು. ಪುನಃ ರಾತ್ರಿಯಿಂದ ಬಿರುಸಿನ ಮಳೆ ಆರಂಭವಾಯಿತು.

ಇಂದು (ಶನಿವಾರ) ಬೆಳಿಗ್ಗೆಯಿಂದ ದಟ್ಟ ಕಾರ್ಮೋಡ ಕವಿದಿದ್ದು, ಜಿಟಿ ಜಿಟಿ ಮಳೆ, ಕೆಲವೊಮ್ಮೆ ಜೋರು ವರ್ಷಧಾರೆ ಆಗುತ್ತಿದೆ. ಇದರಿಂದಾಗಿ ವಾತಾವರಣ ಸಂಪೂರ್ಣ ತಂಪಾಗಿದ್ದು, ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಪರದಾಡಿದರು. ಬೈಕ್‌ ಸವಾರರು ಹೊರಗಡೆ ಹೋಗಲು ಯೋಚಿಸುವಂತಾಗಿದೆ.

Advertisements

ಮಳೆಗೆ ನೀರಿನ ಹರಿವು ಹೆಚ್ಚಾದ ಪರಿಣಾಮ ಕಮಲನಗರ ತಾಲೂಕಿನ ಕೋರಿಯಾಳ-ಬಸನಾಳ ಗ್ರಾಮಗಳ ಮಧ್ಯೆದ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಜನರು ಸೇತುವೆ ಮೇಲಿಂದ ತೆರಳಲು ತೊಂದರೆಯಾಗಿದೆ. ಹೊಸ ಸೇತುವೆ ನಿರ್ಮಿಸಬೇಕೆಂದು ಎಂದು ಬಸವನಾಳ ಗ್ರಾಮದ ರೈತ ಸದಾನಂದ ಪಾಟೀಲ್‌ ಆಗ್ರಹಿಸಿದರು.

WhatsApp Image 2025 08 16 at 11.33.13 AM
ಜಮೀನಿನಲ್ಲಿ ನೀರು ಸಂಗ್ರಹಗೊಂಡ ಪರಿಣಾಮ ಬೆಳೆ ಹಳದಿ ಬಣ್ಣಕ್ಕೆ ತಿರುಗಿದೆ.

ಸತತ ಮಳೆಯಿಂದ ಜಿಲ್ಲೆಯ ಹಲವೆಡೆ ರೈತರ ಜಮೀನುಗಳಲ್ಲಿ ನೀರು ನಿಂತಿದೆ. ಇದರಿಂದ ಸೋಯಾಅವರೆ, ಉದ್ದು, ಹೆಸರು ಸೇರಿದಂತೆ ಇತರೆ ಬೆಳೆ ಹಾನಿಯಾಗುತ್ತದೆ ಎಂದು ಆತಂಕಗೊಂಡಿದ್ದಾರೆ. ಇನ್ನು ಕೆಲವು ಕಡೆ ಕಟಾವಿಗೆ ಬಂದ ಹೆಸರು ಬೆಳೆ ಮಳೆಯಿಂದ ಹಾನಿಯಾಗುವ ಸಾಧ್ಯತೆಯಿದ್ದು, ರೈತರ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ ಎಂದು ರೈತ ಲೋಕೇಶ ಗೊಂಡ ಹೇಳುತ್ತಾರೆ.

ಇದನ್ನೂ ಓದಿ : ಬೀದರ್‌ | ಈದಿನ ಫಲಶೃತಿ: ವಿಕಲಚೇತನ ಸಹೋದರಿಯರ ಮನೆಗೆ ದೌಡಾಯಿಸಿದ ಅಧಿಕಾರಿಗಳು; ಮಾಸಾಶನದ ಭರವಸೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X