ಶಿರಸಿ | ಕೂಲಿ ಮಾಡಿದ ಹಣ ಕೊಡದೆ ಇದ್ದಿದ್ದಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

Date:

Advertisements

ಕೂಲಿ ಹಣದ ವಿಚಾರದಲ್ಲಿ ನಡೆದ ಜಗಳ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನನ್ನು ಹರಿತವಾದ ಆಯುಧದಿಂದ ಹೊಡೆದು ಕೊಲೆ ಮಾಡಿದ ಘಟನೆ ಶಿರಸಿ ತಾಲೂಕಿನ ಸೊಂದಾ ಗ್ರಾಮದ ಕಮಾಟಗೇರಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೃತಪಟ್ಟ ವ್ಯಕ್ತಿಯನ್ನು ಕಮಾಟಗೇರಿಯ ರವೀಶ ಗಣಪತಿ ಚನ್ನಯ್ಯ (40) ಎಂದು ಗುರುತಿಸಲಾಗಿದೆ. ಮಂಜುನಾಥ ಬಸ್ಯಾ ಚನ್ನಯ್ಯ ಕೊಲೆ ಮಾಡಿದ ಆರೋಪಿ

ಮೃತ ರವೀಶ ಗ್ರಾಮದಲ್ಲಿ ಮೇಸ್ತ್ರಿಯಾಗಿ ಕೆಲಸ ಮಾಡಿಕೊಂಡಿದ್ದು, ತೋಟ ಮತ್ತು ಗದ್ದೆ ಮಾಲೀಕರಿಂದ ಕೂಲಿ ಪಡೆದು, ತಮ್ಮೊಂದಿಗೆ ಕೆಲಸ ಮಾಡುವ ಇತರ ಕಾರ್ಮಿಕರಿಗೆ ಹಣ ನೀಡುತ್ತಿದ್ದ. ಆರೋಪಿ ಮಂಜುನಾಥ ಕೂಡ ರವೀಶರೊಂದಿಗೆ ಕೆಲಸ ಮಾಡುತ್ತಿದ್ದನು. ಕಳೆದ ಹಲವು ದಿನಗಳಿಂದ ಮಂಜುನಾಥ ತನ್ನ ಕೂಲಿ ಹಣವನ್ನು ಕೊಡುವಂತೆ ರವೀಶನ ಮನೆಯ ಬಳಿ ಬಂದು ಗಲಾಟೆ ಮಾಡುತ್ತಿದ್ದನು. ರವೀಶನ ಪತ್ನಿ ಚೇತನಾ ಹಲವು ಬಾರಿ ಸಮಾಧಾನ ಮಾಡಿ ಕಳುಹಿಸಿದ್ದರು.

Advertisements

ಗುರುವಾರ ರಾತ್ರಿ 8:15 ರಿಂದ ಶುಕ್ರವಾರ ಬೆಳಗಿನ ಜಾವ 6:30ರ ನಡುವಿನ ಅವಧಿಯಲ್ಲಿ, ಆರೋಪಿ ಮಂಜುನಾಥನ ಮನೆಯಂಗಳದಲ್ಲಿ ಕೂಲಿ ಹಣದ ವಿಷಯವಾಗಿ ರವೀಶ ಮತ್ತು ಮಂಜುನಾಥನ ನಡುವೆ ತೀವ್ರ ವಾಗ್ವಾದ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಮಂಜುನಾಥ, ಯಾವುದೋ ಹರಿತವಾದ ಆಯುಧದಿಂದ ರವೀಶನ ತಲೆಗೆ ಬಲವಾಗಿ ಹೊಡೆದಿದ್ದಾನೆ. ಇದರಿಂದಾಗಿ ರವೀಶ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಉತ್ತರ ಕನ್ನಡ | ದೌರ್ಜನ್ಯಗಳಿಂದ ನೊಂದ ಮಹಿಳೆಯರಿಗೆ ನೆರವಾಗಲು ಶೀಘ್ರದಲ್ಲೇ ಹೆಚ್ಚುವರಿ ಸಖಿ ಕೇಂದ್ರ

ಶುಕ್ರವಾರ ಬೆಳಿಗ್ಗೆ ರವೀಶನ ಪತ್ನಿ ಚೇತನಾ ಈ ಘಟನೆಯನ್ನು ಗಮನಿಸಿದ್ದು, ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಪತಿಯ ಕೊಲೆಗೆ ಮಂಜುನಾಥನೇ ಕಾರಣವೆಂದು ಆರೋಪಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣದ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸಣ್ಣ ಕೂಲಿ ಹಣದ ವಿವಾದಕ್ಕಾಗಿ ನಡೆದ ಈ ದುರ್ಘಟನೆ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X