ಉಡುಪಿ | ವಿಶೇಷ ಮಕ್ಕಳ ಜೊತೆ ಸ್ವಾತಂತ್ರ್ಯೋತ್ಸವ ಆಚರಿಸಿದ ಅಲ್ಪಸಂಖ್ಯಾತರ ವೇದಿಕೆ

Date:

Advertisements

ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ವತಿಯಿಂದ ಉಡುಪಿ ತಾಲೂಕಿನ ನೇಜಾರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಆಲ್-ಫುರ್ಖಾನ್ ವಿಶೇಷ ಮಕ್ಕಳ ಶಾಲೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಸಂಸ್ಥಾಪಕರ ದಿನಾಚರಣೆ ಮತ್ತು ಸ್ವಾತಂತ್ರ್ಯ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ವಿಶೇಷ ಮಕ್ಕಳು ರಾಷ್ಟ್ರ ಧ್ವಜಾರೋಹಣ ಮಾಡಿ ದೇಶಪ್ರೇಮ ಗೀತೆಗಳನ್ನು ಹಾಡಿ ಎಲ್ಲರ ಮನ ಗೆದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಅಧ್ಯಕ್ಷರಾದ ಚಾರ್ಲ್ಸ್ ಅಂಬ್ಲರ್ ಮಾತನಾಡುತ್ತಾ, ದೇವರು ನಮ್ಮನ್ನು ಹುಟ್ಟಿಸಿದ ಹಾಗೆ ಈ ಮಕ್ಕಳನ್ನು ಸಹ ಹುಟ್ಟಿಸಿದ್ದಾನೆ. ಇವರನ್ನು ಅಂಗವಿಕಲರು ಎಂದು ಹೇಳಬಾರದು. ಇವರಲ್ಲಿಯೂ ತುಂಬಾ ಪ್ರತಿಭೆಯಿದೆ. ಇವರನ್ನು ವಿಶೇಷ ಮಕ್ಕಳು ಎಂದು ಹೇಳಬೇಕು. ಇಂತಹ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಶಾಲೆಯ ಪೋಷಕರಾದ ದಿಲ್ದಾರ್ ಫಝ್ಲುರ್ರಹ್ಮಾನ್ ಇವರು ಬಂದ ಅತಿಥಿಗಳನ್ನು ಸ್ವಾಗತಿಸಿ, ಇಂತಹ ಶಾಲೆಯ ಅಗತ್ಯತೆ ಮತ್ತು ಮಕ್ಕಳ ಪ್ರತಿಭೆ ಬಗ್ಗೆ ವಿವರಿಸಿದರು. ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಮಾಜಿ ಅಧ್ಯಕ್ಷರಾದ ಖತೀಬ್ ಅಬ್ದುಲ್ ರಶೀದ್ ಯವರು ಮಕ್ಕಳ ಉತ್ಸಾಹವನ್ನು ಹೆಚ್ಚಿಸಲು ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ವತಿಯಿಂದ ಶಾಲೆಯ ಎಲ್ಲಾ ಮಕ್ಕಳಿಗೂ ಉಡುಗೊರೆಗಳನ್ನು ಹಂಚಿದರು. ವಿಶೇಷ ಮಕ್ಕಳಿಗೆ ಪ್ರೋತ್ಸಾಹ ನೀಡುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯವೆಂದು ಸಂಘಟಕರು ತಿಳಿಸಿದರು.

Advertisements

ವೇದಿಕೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಬೈಕಾಡಿ ಹುಸೇನ್ ಸಾಹೆಬ್, ನಿಕಟಪೂರ್ವ ಅಧ್ಯಕ್ಷರಾದ ಇಸ್ಮಾಯಿಲ್ ಹುಸೈನ್ ಕಟ್ಪಾಡಿ, ಕಾರ್ಯದರ್ಶಿ ಟಿ.ಎಂ. ಝಫ್ರುಲ್ಲಾ , ಕೋಶಾಧಿಕಾರಿ ಸಯ್ಯದ್ ಎಂ.ಎಸ್. ಖಾನ್, ಸಂಪರ್ಕ ಪತ್ರಿಕೆಯ ಸಂಪಾದಕ ಜೆರಾಲ್ಡ್ ಪಿಂಟೊ, ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಮತ್ತು ಶಾಲೆಯ ಅಧ್ಯಾಪಕರು ಹಾಗೂ ಪೋಷಕರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಯಾಗುವಂತೆ ಸಹಕರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X