ಕೋಲಾರ | ನಗರಸಭೆ ಅನುದಾನದಿಂದಲೇ ಫುಡ್‌ ಕೋರ್ಟ್‌ ನಿರ್ಮಾಣ: ಲಕ್ಷ್ಮಿದೇವಮ್ಮ

Date:

Advertisements

ಸಾರ್ವಜನಿಕರ ಅನುಕೂಲಕ್ಕಾಗಿ ಕೋಲಾರ ನಗರದ ಸರ್ವಜ್ಞ ಪಾರ್ಕ್‌ ಬಳಿ ನಗರಸಭೆ ಅನುದಾನದಿಂದ ಫುಡ್‌ ಕೋರ್ಟ್‌ ನಿರ್ಮಾಣ ಮಾಡಲಾಗಿದೆ ಎಂದು ಕೋಲಾರ ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ ರಮೇಶ್‌ ತಿಳಿಸಿದರು.

ನಗರಸಭೆಯ ಸ್ವಂತ ನಿಧಿ ₹13.50 ಲಕ್ಷ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ₹20.31 ಲಕ್ಷ ಸೇರಿ ಒಟ್ಟು ₹33.81 ಲಕ್ಷ ವೆಚ್ಚದಲ್ಲಿ ಫುಡ್‌ ಕೋರ್ಟ್‌ ನಿರ್ಮಿಸಲಾಗಿದೆ ಎಂದು ಶನಿವಾರ ಸ್ಪಷ್ಟಪಡಿಸಿದರು.

ಜಿಲ್ಲಾಧಿಕಾರಿಯಾಗಿದ್ದ ಅಕ್ರಂ ಪಾಷಾ ನಗರಸಭೆ ಆಡಳಿತಾಧಿಕಾರಿಯಾಗಿದ್ದಾಗ ಶಾಸಕ ಕೊತ್ತೂರು ಜಿ.ಮಂಜುನಾಥ್‌ ಅವರ ಮುತುವರ್ಜಿಯಿಂದ ಫುಡ್‌ ಕೋರ್ಟ್‌ ನಿರ್ಮಾಣ ಆರಂಭವಾಯಿತು. ನಾವು ಅಧಿಕಾರಕ್ಕೆ ಬಂದ ಮೇಲೆ ಕಾಮಗಾರಿ ಪರಿಶೀಲನೆ ನಡೆಸುತ್ತಿದ್ದೆವು. ಈಗ ನಿರ್ಮಾಣ ಪೂರ್ಣಗೊಂಡಿದ್ದು, ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಉದ್ಘಾಟಿಸಿದ್ದಾರೆ ಎಂದರು.

Advertisements

“ಎರಡು ಹಂತಗಳಲ್ಲಿ ಕಾಮಗಾರಿ ನಡೆದಿದೆ. ಮೊದಲ ಹಂತದಲ್ಲಿ ನಗರಸಭೆಯ ಸ್ವಂತ ಅನುದಾನವಾದ ₹ 13.50 ಲಕ್ಷದಲ್ಲಿ ಫುಡ್‌ ಕೋರ್ಟ್‌ಗೆ ಫುಟ್‌ಪಾತ್‌ ನಿರ್ಮಿಸುವ ಕೆಲಸ ನಡೆದಿದೆ. ಇನ್ನು 2024–25ನೇ ಸಾಲಿನಲ್ಲಿ ಸರ್ಕಾರ ಬಿಡುಗಡೆ ಮಾಡಿರುವ 15ನೇ ಹಣಕಾಸು ಆಯೋಗದ ಸಾಮಾನ್ಯ ಮೂಲ ಅನುದಾನ ₹ 33.81 ಕೋಟಿಯಲ್ಲಿ ಫುಡ್‌ ಕೋರ್ಟ್‌ನ ಶೆಲ್ಟರ್‌ ನಿರ್ಮಿಸಲಾಗಿದೆ. ನಗರಸಭೆ ಸಾಮಾನ್ಯ ಸಭೆಯದಲ್ಲಿ ತೀರ್ಮಾನದಂತೆ ಕೆಲಸ ನಡೆದಿದೆ. ಫುಡ್‌ ಕೋರ್ಟ್‌ ನಿರ್ಮಾಣಕ್ಕೆ ಸಿಎಸ್‌ಆರ್‌ ನಿಧಿ ಸೇರಿದಂತೆ ಬೇರೆ ಯಾವುದೇ ಅನುದಾನ ಬಳಸಿಕೊಂಡಿಲ್ಲ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ

“ಆ ಭಾಗದ ಬೀದಿ ಬದಿಯಲ್ಲಿ ಹಲವಾರು ಮಂದಿ ಬೀದಿ ಬದಿ ತಿನಿಸು ಅಂಗಡಿ ಇಟ್ಟುಕೊಂಡಿದ್ದರು. ಅವರಿಗೆ ಫುಡ್ ಕೋರ್ಟ್‌ನಲ್ಲಿ ಅವಕಾಶ ಮಾಡಿಕೊಡುವ ಭರವಸೆ ನೀಡಿದ್ದೇವೆ. ಅವರಿಗೆ ನ್ಯಾಯ ಒದಗಿಸಿಕೊಡುತ್ತೇವೆ. ಅವರ ಪಟ್ಟಿ ನಮ್ಮ ಬಳಿ ಇದೆ. ನಗರಸಭೆ ಸಮಿತಿ ಸಭೆಯಲ್ಲಿ ಚರ್ಚಿಸಿ ಶಾಸಕ ಕೊತ್ತೂರು ಮಂಜುನಾಥ್‌ ಹಾಗೂ ಪೌರಾಯುಕ್ತರ ಗಮನಕ್ಕೆ ತಂದು ತೀರ್ಮಾನ ಕೈಗೊಳ್ಳುತ್ತೇವೆ. ಫುಡ್‌ ಕೋರ್ಟ್‌ನಲ್ಲಿ 27 ಕೌಂಟರ್‌ಗಳಿದ್ದು, ತಿನಿಸು ಅಂಗಡಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಈ ಭಾಗದಲ್ಲಿ ಶಾಖಾಹಾರಕ್ಕೆ ಮಾತ್ರ ಅನುಮತಿ ನೀಡಲಾಗುವುದು. ಮಾಂಸಾಹಾರ ತಿನಿಸುಗಳ ಫುಡ್‌ ಕೋರ್ಟ್‌ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X