ಧಾರವಾಡ | ಥಿನ್ನರ್ ಬಾಟಲಿಗೆ ಬೆಂಕಿಬಿದ್ದು 4 ವರ್ಷದ ಬಾಲಕ ಸಾವು; ತಂದೆಯ ಸ್ಥಿತಿ ಚಿಂತಾಜನಕ

Date:

Advertisements

ಥಿನ್ನರ್ ಬಾಟಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ತಂದೆ ಮತ್ತು ಮಗ ಬೆಂಕಿಯಲ್ಲಿ ಸಿಲುಕಿಕೊಂಡು 4 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಧಾರವಾಡದ ಸಂತೋಷ ನಗರದಲ್ಲಿ ನಿನ್ನೆ (ಆ.15) ನಡೆದಿದೆ.

ಮೃತ ಬಾಲಕ ಅಗಸ್ತ್ಯ ಮಾಶ್ಯಾಳ್‌ನ ತಂದೆ ಚಂದ್ರಕಾಂತ್ ಅವರಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿದ್ದಾರೆ.

ಅಗಸ್ತ್ಯನ ತಾಯಿ ಬಾಣಂತಿ ಇರುವುದರಿಂದ ಬಿಸಿ ತಾಗಿಸಲು ಅಗ್ಗಿಷ್ಟಿಕೆಯನ್ನು ಬಳಸಲಾಗುತ್ತಿದ್ದು, ಅಗ್ಗಿಷ್ಟಿಕೆಗೆ ಬೆಂಕಿ ಹಚ್ಚಲು ಬಾಲಕನ ಅಜ್ಜಿ ಪ್ರಯತ್ನಿಸುತ್ತಿದ್ದರು. ನಿರಂತರ ಮಳೆಯಿಂದ ಅಗ್ಗಿಷ್ಟಿಕೆಯಲ್ಲಿದ್ದ ಕಟ್ಟಿಗೆ ಹಸಿಯಾಗಿ ಬೆಂಕಿ ಹತ್ತುತ್ತಿರಲಿಲ್ಲ. ಆಗ ಚಂದ್ರಕಾಂತ್, ಸ್ವಲ್ಪ ಥಿನ್ನರ್ ಹಾಕುವಂತೆ ಹೇಳಿದ್ದಾರೆ. ಥಿನ್ನರ್ ಹಾಕುತ್ತಿದ್ದಂತೆ ಬೆಂಕಿ ಜೋರಾಗಿ ಥಿನ್ನರ್ ಬಾಟಲ್​ಗೂ ಹೊತ್ತಿಕೊಂಡಿದೆ.

Advertisements

ದಿಢೀರನೆ ಥಿನ್ನರ್ ಬಾಟಲ್ ಅನ್ನು ಹೊರಗೆ ಎಸೆಯಲು ಅಗಸ್ತ್ಯನ ಅಜ್ಜಿ ಪ್ರಯತ್ನಿಸಿದಾಗ, ಬಾಟಲ್​ ತಪ್ಪಿ, ಚಂದ್ರಕಾಂತ್ ಮತ್ತು ಅಗಸ್ತ್ಯ ಇದ್ದ ಕೋಣೆಯೊಳಗೆ ಹೋಗಿದೆ. ಏಕಾಏಕಿ ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡು ಚಂದ್ರಕಾಂತ್ ಮತ್ತು ಆಗಸ್ತ್ಯ ಕೋಣೆಯಲ್ಲೇ ಸಿಲುಕಿಕೊಂಡಿದ್ದಾರೆ. ಕೋಣೆಯಲ್ಲಿದ್ದ ಚಂದ್ರಕಾಂತ್ ಮತ್ತು ಅಗಸ್ತ್ಯನನ್ನು ರಕ್ಷಿಸಿ ಹೊರಗೆ ಕರೆದುಕೊಂಡು ಬರುವಷ್ಟರಲ್ಲಿ ಇಬ್ಬರಿಗೂ ಸಾಕಷ್ಟು ಸುಟ್ಟಗಾಯಗಳಾಗಿದ್ದವು. ಇಬ್ಬರನ್ನೂ ಕೂಡಲೇ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿದರೂ ಕೂಡ, ಬಾಲಕ ಅಗಸ್ತ್ಯ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಧಾರವಾಡ | ನಿಜ ಜೀವನದಲ್ಲಿ ʼತಲೆದಂಡʼ ನಾಟಕದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಿಸಿ ದಿವ್ಯ ಪ್ರಭು

ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಮಳೆ ಅಬ್ಬರ : ಮೂರು ದಿನಗಳಲ್ಲಿ 138 ಮನೆಗಳಿಗೆ ಹಾನಿ, 7,775 ಹೆಕ್ಟೇರ್‌ ಬೆಳೆ ನಾಶ!

ಬೀದರ್‌ ಜಿಲ್ಲಾದ್ಯಂತ ಕಳೆದ ಮೂರು ದಿನಗಳಲ್ಲಿ ಮಳೆ ಅಬ್ಬರದಿಂದ ಜಿಲ್ಲೆಯಾದ್ಯಂತ 138...

ಮಂಗಳೂರು | ಭೂಮಾಲೀಕತ್ವದ ಇತಿಹಾಸ ತಿಳಿದುಕೊಳ್ಳಲು ಜಿಲ್ಲಾಧಿಕಾರಿ ಕರೆ

ಲಕ್ಷಾಂತರ ಮಂದಿ ಭೂರಹಿತರು ಭೂಮಾಲೀಕರಾಗಲು ಕಾರಣರಾದ ಭೂಸುಧಾರಣೆ ಕಾನೂನು ಮತ್ತು ಅಂದಿನ...

ಬೆಳ್ತಂಗಡಿ: ಎಸ್‌ಐಟಿಗೆ ಸಮಗ್ರ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು: ಸಮಾನ ಮನಸ್ಕ ಸಂಘಟನೆ

ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಹೆಣಗಳನ್ನು ನನ್ನಿಂದ ಬಲವಂತವಾಗಿ ಹೂತು ಹಾಕಿಸಲಾಗಿದೆ...

ಚಾಮರಾಜನಗರ | ರಾಜ್ಯದ ಅಭಿವೃದ್ಧಿ, ಆಡಳಿತ ಸುಧಾರಣೆಗೆ ದೇವರಾಜ ಅರಸು ಕೊಡುಗೆ ಅಪಾರ

ಚಾಮರಾಜನಗರದ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...

Download Eedina App Android / iOS

X