ಮಂಡ್ಯ | ಗುಡಿ, ಮಸೀದಿ, ಚರ್ಚುಗಳ ಪ್ರಭಾವದಿಂದ ದೂರವಿರಬೇಕಾಗಿದೆ: ನ್ಯಾ. ಬಿ ಟಿ ವಿಶ್ವನಾಥ್

Date:

Advertisements

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ದೇಶದ ಮಕ್ಕಳನ್ನು ನಾವು ಗುಡಿ, ಮಸೀದಿ, ಚರ್ಚುಗಳ ಪ್ರಭಾವದಿಂದ ದೂರವಿಡಬೇಕಾಗಿದೆ. ಮನೆಯೇ ಮಂದಿರ, ತಂದೆ–ತಾಯಿಯರೇ ದೇವರು ಎಂಬುದನ್ನು ಹೇಳಿ ಕೊಡಬೇಕಾಗಿದೆ. ಹಾಗಾದಾಗ ಮಾತ್ರ ನಾವು ಈ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಿಕೊಳ್ಳಬಹುದು ಎಂದು ಅಖಿಲ ಭಾರತ ವಕೀಲರ ಒಕ್ಕೂಟದ ಮಂಡ್ಯ ಜಿಲ್ಲಾಧ್ಯಕ್ಷ ಹಾಗೂ ನ್ಯಾಯವಾದಿ ಬಿ ಟಿ ವಿಶ್ವನಾಥ್ ಅಭಿಪ್ರಾಯಪಟ್ಟರು.

ಕರ್ನಾಟಕ ಸಂವಿಧಾನ ಸಂರಕ್ಷಣಾ ಸಮಿತಿ, ಎದ್ದೇಳು ಕರ್ನಾಟಕ, ಜನಶಕ್ತಿ ಮತ್ತು ಮಂಡ್ಯ ಜಿಲ್ಲೆಯ ಎಲ್ಲ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ಮಂಡ್ಯ ನಗರದ ಜನಶಕ್ತಿ ಕಚೇರಿಯ ಸಭಾ ಭವನದಲ್ಲಿ ಆಚರಿಸಿದ ಸ್ವಾತಂತ್ರೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ದೇವರು ಧರ್ಮಗಳ ಗುತ್ತಿಗೆ ಪಡೆದ ಏಜೆಂಟರುಗಳು ದೇವಮಾನವರು, ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳನ್ನೇ ನೋಡಿ ಅವರು ಹೇಗೆ ಸಮಾನಾಂತರ ಸಂವಿಧಾನಗಳಾಗಿ ರಾಜಕೀಯ ಪಕ್ಷಗಳನ್ನು ಹೆದರಿಸುತ್ತಿವೆ, ಅತ್ಯಾಚಾರ ಕೊಲೆಗಳನ್ನು ಮಾಡಿ ದಕ್ಕಿಸಿಕೊಳ್ಳುತ್ತಿವೆ. ಸಂವಿಧಾನದ ಆಶಯಗಳನ್ನು ಸೋಲಿಸುತ್ತಿವೆ. ಇನ್ನಾದರೂ ಗುಡಿ, ಮಸೀದಿ, ಚರ್ಚುಗಳ ಪ್ರಭಾವದಿಂದ ಮಕ್ಕಳನ್ನು ದೂರವಿಡಿ” ಎಂದರು.

Advertisements

“ದೇವರು ಧರ್ಮದ ಅಫೀಮಿಗೆ ಒಳಗಾದ ಈ ದೇಶದ ರಾಜರುಗಳು ದೇಶದ ಬಹುಸಂಖ್ಯಾತ ಕ್ಷುದ್ರರೂ ಮತ್ತು ದಲಿತರಿಗೆ ಭೂಮಿ ಹಕ್ಕು ಮತ್ತು ಶಸ್ತ್ರಗಳನ್ನು ಹಿಡಿಯುವ ಹಕ್ಕಿನಿಂದ ವಂಚಿಸಿದ್ದರಿಂದಲೇ ಈ ದೇಶ ಸಾವಿರಾರು ವರ್ಷ ವಿದೇಶಿ ಅತಿಕ್ರಮಣಕ್ಕೆ ದಾಸ್ಯಕ್ಕೆ ಒಳಗಾಗುವಂತಾಯಿತು” ಎಂದು ಹೇಳಿದರು.

“ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಯಬೇಕೆಂದರೆ ಮೊದಲು ಚುನಾವಣೆಗಳು ಪಾರದರ್ಶಕವಾಗಬೇಕು. ಮನೆಯ ಅಳಿಯನನ್ನಾಗಿ ಲಫಂಗನೊಬ್ಬನನ್ನು ಆರಿಸದ ನಾವು ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಕಾವಲುಗಾರರನ್ನಾಗಿ ಕ್ರಿಮಿನಲ್‌ಗಳು, ಉದ್ಯಮಿಗಳ ಚೇಲಾಗಳು ದೇವರು ಧರ್ಮಗಳ ಹೆಸರಿನಲ್ಲಿ ದೇಶ ಲೂಟಿ ಮಾಡುವ ಅಯೋಗ್ಯರ ಪಾದನೆಕ್ಕುವವರನ್ನು ಅವರು ನೀಡುವ ಗುಂಡು ತುಂಡು ಸೀರೆ ಮೂಗುಬಟ್ಟುಗಳಿಗಾಗಿ ಆರಿಸುವುದರಿಂದ ಆಗುವ ಅನಾಹುತಗಳನ್ನು ದೇಶ ಅನುಭವಿಸುತ್ತಿರುವುದನ್ನು ನೀವೆಲ್ಲರೂ ನೋಡುತ್ತಿದ್ದೀರಿ” ಎಂದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | 261 ದೇಸಿ ಸಾಂಪ್ರದಾಯಿಕ ಬೆಳೆ, ತಳಿಗಳ ಸಂರಕ್ಷಣೆ

“ಜನರಿಂದ ಆಯ್ಕೆಯಾದ ಸರ್ಕಾರಗಳು ಸಂವಿಧಾನದ ಆರ್ಟಿಕಲ್ 51(ಎ) ಎಚ್ ರ ಆಶಯದಂತೆ ಆಡಳಿತದಲ್ಲಿ ವೈಚಾರಿಕತೆಯನ್ನು ಅಳವಡಿಸಿಕೊಳ್ಳುತ್ತಿಲ್ಲ” ಎಂದು ವಿಷಾದಿಸಿದರು.

ಜನಶಕ್ತಿಯ ಸಿದ್ದರಾಜು ಪ್ರಸ್ತಾವಿಕ ಮಾತುಗಳನ್ನಾಡಿದರು. ವಕೀಲ ಕಿಶೋರ್ ಸಂವಿಧಾನದ ಆಶಯಗಳನ್ನು ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ರೈತ ಸಂಘದ ಕೆಂಪೂಗೌಡ, ವಿಶ್ರಾಂತ ಅಧ್ಯಾಪಕ ಜಿ‌ ಟಿ ವೀರಪ್ಪ, ಜಾಗೃತ ಕರ್ನಾಟಕದ ಮುಖಂಡ ಸಂತೋಷ್ ಜಿ, ಮಂಡ್ಯ ಮತ್ತು ಇತರ ತಾಲೂಕುಗಳ ಶ್ರಮಿಕ ನಗರದ ನಿವಾಸಿಗಳು ಈ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X