ಮುಂಬೈನ ಮೊಸರು ಕುಡಿಕೆ ಉತ್ಸವದಲ್ಲಿ ದುರಂತ; ಇಬ್ಬರು ಸಾವು, 100 ಕ್ಕೂ ಹೆಚ್ಚು ಮಂದಿಗೆ ಗಾಯ

Date:

Advertisements

ಭಾರೀ ಮಳೆಯ ನಡುವೆಯೂ ಮುಂಬೈನಲ್ಲಿ ಗೋಕುಲಾಷ್ಟಮಿ ಸಂಭ್ರಮದ ಭಾಗವಾಗಿ ನಡೆದ ಸಾಂಪ್ರದಾಯಿಕ ಮೊಸರು ಕುಡಿಕೆ ಉತ್ಸವವನ್ನು ವಿವಿಧೆಡೆ ಆಚರಿಸಲಾಯಿತು. ಆದರೆ, ಈ ಉತ್ಸವದಲ್ಲಿ ನಡೆದ ಪ್ರತ್ಯೇಕ ದುರಂತಗಳಲ್ಲಿ ಇಬ್ಬರು ಮೃತಪಟ್ಟು, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

39 ವರ್ಷದ ಯುವಕ ಮತ್ತು 14 ವರ್ಷದ ಬಾಲಕ ಮೃತಪಟ್ಟಿದ್ದಾರೆ. ಮಾನವ ಪಿರಮಿಡ್ ರಚನೆಯ ಸಂದರ್ಭದಲ್ಲಿ ಈ ದುರ್ಘಟನೆಗಳು ನಡೆದಿದೆ. ಒಂದು ಘಟನೆಯಲ್ಲಿ, ಟೆಂಪೊದಲ್ಲಿ ಕುಳಿತಿದ್ದ ಬಾಲಕ ಕುಸಿದು ಬಿದ್ದು ಜೀವ ಕಳೆದುಕೊಂಡಿದ್ದಾನೆ. ಮತ್ತೊಂದು ಘಟನೆಯಲ್ಲಿ, ಯುವಕನೊಬ್ಬ ಸ್ನೇಹಿತನ ಮನೆಯ ಬಾಲ್ಕನಿಯಿಂದ ಹಗ್ಗದ ಮೂಲಕ ಕಟ್ಟಿದ್ದ ಮೊಸರು ಕುಡಿಕೆಯನ್ನು ಒಡೆಯಲು ಯತ್ನಿಸುವಾಗ ಜಾರಿ ಬಿದ್ದು ಮೃತಪಟ್ಟಿದ್ದಾನೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪುಕೋಟೆಯಲ್ಲಿ ನಿಂತು ಮೋದಿ ಆರ್‌ಎಸ್‌ಎಸ್‌ಅನ್ನು ಹೊಗಳುವ ದರ್ದು ಏನು?

Advertisements

ಮಹಾನಗರ ಪಾಲಿಕೆ ಮತ್ತು ಸರ್ಕಾರಿ ಆಸ್ಪತ್ರೆಗಳಿಂದ ರಾತ್ರಿ 9 ಗಂಟೆವರೆಗೆ ಲಭ್ಯವಾದ ಮಾಹಿತಿಯ ಪ್ರಕಾರ, ಥಾಣೆಯಲ್ಲಿ 17, ನವಿ ಮುಂಬೈನಲ್ಲಿ 6 ಮತ್ತು ಕಲ್ಯಾಣ್-ಉಲ್ಲಾಸ್‌ನಗರದಲ್ಲಿ 5 ಜನ ಗಾಯಗೊಂಡಿದ್ದಾರೆ. ಒಟ್ಟು ಗಾಯಾಳುಗಳ ಸಂಖ್ಯೆ 123ಕ್ಕೆ ಏರಿದೆ. ಗಾಯಗೊಂಡವರಲ್ಲಿ 9 ವರ್ಷದ ಬಾಲಕ ಸೇರಿದಂತೆ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಈ ವರ್ಷದ ಉತ್ಸವದ ವಿಶೇಷತೆಯೆಂದರೆ, ಜೋಗೇಶ್ವರಿಯ ಕೊಂಕಣ ನಗರ ಗೋವಿಂದ ತಂಡವು ಥಾಣೆಯಲ್ಲಿ ಸಚಿವ ಪ್ರತಾಪ್ ಸರನಾಯಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 10 ಸ್ತರಗಳ ಮಾನವ ಪಿರಮಿಡ್ ರಚಿಸಿ ಇತಿಹಾಸ ನಿರ್ಮಿಸಿತು. ಇದು ಮೊದಲ ಬಾರಿಗೆ ಒಂದೇ ಕಾರ್ಯಕ್ರಮದಲ್ಲಿ ಮೂರು ಬಾರಿ 10 ಸ್ತರಗಳ ಪಿರಮಿಡ್ ರಚನೆಯಾದ ಸಾಧನೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X