ಬೀದರ್‌ | ಆಗಸ್ಟ್ 21ರಂದು ಬೃಹತ್ ಉದ್ಯೋಗ ಮೇಳ: ಸಚಿವ ಈಶ್ವರ ಖಂಡ್ರೆ

Date:

Advertisements
  • ಅಗಸ್ಟ್ 21 ರಂದು ಭಾಲ್ಕಿಯ ಬಿಕೆಐಟಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ
  • ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಉದ್ಯೋಗ ಆಕಾಂಕ್ಷಿಗಳು ಸದಪಯೋಗ ಪಡೆದುಕೊಳ್ಳುವಂತೆ ಸಲಹೆ

ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಭೀಮಣ್ಣಾ ಖಂಡ್ರೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಯುಕ್ತಾಶ್ರದಲ್ಲಿ ಅಗಸ್ಟ್ 21 ರಂದು ಭಾಲ್ಕಿಯ ಬಿಕೆಐಟಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.

ಬೀದರ್ ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ‌ದರು. “ಜಿಲ್ಲೆಯಲ್ಲಿ ಅನೇಕ ಯುವಕರು ನಿರೂದ್ಯೋಗಿಗಳಾಗಿ ಅಲೆದಾಡುವುದನ್ನು ಈ ಉದ್ಯೋಗ ಮೇಳದಿಂದ ತಪ್ಪಿಸಬಹುದು ಮತ್ತು ಹೆಚ್ಚಿನ ವಿದ್ಯಾರ್ಥಿಗಳಿಗೆ ಈ ಮೇಳದಿಂದ ಉದ್ಯೋಗ ಅವಕಾಶಗಳು ದೊರೆಯಲಿವೆ” ಎಂದು ಹೇಳಿದರು.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಬಿಎ, ಬಿಕಾಂ, ಬಿಎಸ್ಸಿ, ಐಟಿಐ, ಡಿಪ್ಲೋಮಾ ಪದವಿಗಳನ್ನು ಪಡೆದವರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದ್ದು. ಆಸಕ್ತ ಅಭ್ಯರ್ಥಿಗಳು ಮುಂಚಿತವಾಗಿ ಗ್ರಾಮೀಣ ಅಭ್ಯರ್ಥಿಗಳಾಗಿದ್ದರೆ ತಮ್ಮ ಹತ್ತಿರದ ಗ್ರಾಮ ಪಂಚಾಯತಿ ಮತ್ತು ನಗರ ಪ್ರದೇಶದ ಅಭ್ಯರ್ಥಿಗಳಾಗಿದ್ದರೆ ನಗರಸಭೆಯಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು. ಉದ್ಯೋಗ ಮೇಳದಲ್ಲಿ 20 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು. ಬೀದರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಸೇರಿದಂತೆ ಐದು ಸಾವಿರ ವಿದ್ಯಾರ್ಥಿಗಳು ಈ ಮೇಳದಲ್ಲಿ ಭಾಗವಹಿಸುವಂತೆ ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯ ವಿವಿಧ ತಾಲ್ಲೂಕಿನಿಂದ ಬರುವ ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆಗಳನ್ನು ಮಾಡಲಾಗುವುದು. ಈ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲಾ-ಕಾಲೇಜುಗಳಲ್ಲಿ ಉದ್ಯೋಗ ಮೇಳದ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು ಎಂದು ತಿಳಿಸಿದ್ದರು.

Advertisements

ಈ ಉದ್ಯೋಗ ಮೇಳದ ಸದಪಯೋಗವನ್ನು ಜಿಲ್ಲೆಯ ಎಲ್ಲಾ ಉದ್ಯೋಗ ಆಕಾಂಕ್ಷಿಗಳು ಪಡೆದುಕೊಳ್ಳಬೇಕು.
ಅಗಸ್ಟ್ 21 ರಂದು ನಡೆಯುವ ಉದ್ಯೋಗ ಮೇಳವು ವ್ಯವಸ್ಥಿತವಾಗಿ ನಡೆಯಲು ನೂಡಲ್ ಅಧಿಕಾರಿಗಳನ್ನು ನೇಮಿಸಬೇಕು ಮತ್ತು ಇದರಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ವಿವಿಧ ಕಂಪನಿಗಳ ಮಾಹಿತಿಯನ್ನು ಸ್ಪಸ್ಟವಾಗಿ ಅಭ್ಯರ್ಥಿಗಳಿಗೆ ತಿಳಿಯುವಂತೆ ಬ್ಯಾನರ್‌ಗಳನ್ನು ಬರೆಸಿ ಅಳವಡಿಸಬೇಕು ಹಾಗೂ ಜಿಲ್ಲೆಯಾದ್ಯಂತ ಮೇಳದ ಮಾಹಿತಿ ಕುರಿತ ಕರಪತ್ರಗಳನ್ನು ಮುದ್ರಸಿ ಹೆಚ್ಚಿನ ಪ್ರಚಾರ ನೀಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಒಳಜಗಳ | ಪ್ರಭು ಚೌಹಾಣ್ ವಿರುದ್ಧ 100 ಕೋಟಿ ಮಾನಹಾನಿ ಕೇಸ್ : ಸಚಿವ ಭಗವಂತ ಖೂಬಾ


ಈ ಸಭೆಯಲ್ಲಿ ಪೌರಾಡಳಿ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಸೂರ್ಯಕಾಂತ ಬಿರಾದಾರ, ಜಿಲ್ಲಾ ಕೈಗಾರಿಕ ಇಲಾಖೆಯ ಉಪ ನಿರ್ದೇಶಕರಾದ ಸುರೇಖಾ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸೇರಿದಂತೆ ಸಂಬಂಧಿಸಿದ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Download Eedina App Android / iOS

X