ಹುಬ್ಬಳ್ಳಿ | ಗೃಹಿಣಿ ಅಸಹಜ ಸಾವು: ಕೊಲೆ ಶಂಕೆ

Date:

Advertisements

ಇತ್ತೀಚಿಗಷ್ಟೇ ವಿವಾಹವಾಗಿದ್ದ ಗೃಹಿಣಿಯೊಬ್ಬರ ಅಸಹಜ ಸಾವು ಸಂಭವಿಸಿರುವ ಘಟನೆ ಹುಬ್ಬಳ್ಳಿ ನಗರದ ನಂದಗೋಕುಲ ಬಡಾವಣೆಯಲ್ಲಿ ನಡೆದಿದೆ.

ಮೃತ ಗೃಹಿಣಿ ಜಯಶ್ರೀ ಬಡಿಗೇರ್(31) ಎಂಬುವವರು ಶಿವಾನಂದ್ ಜತೆಗೆ ಮೇ 21ರಂದು ಮದುವೆಯಾಗಿದ್ದರು. 13 ವರ್ಷದ ಪ್ರೀತಿಯನ್ನು ಮುಚ್ಚಿಟ್ಟು ಜಯಶ್ರೀಯನ್ನು ವಿವಾಹವಾಗಿದ್ದ ಎನ್ನಲಾಗಿದ್ದು, ಈ ಬಗ್ಗೆ ಮದುವೆ ನಂತರ ಜಯಶ್ರೀಗೆ ಓರ್ವ ಯುವತಿ ಮಾಹಿತಿ ನೀಡಿದ್ದಾಳೆ. ಇದರಿಂದ ಆಘಾತಗೊಂಡ ಜಯಶ್ರೀ ಎಲ್ಲವನ್ನು ಮರೆತು ಗಂಡನೊಂದಿಗೆ ಇರಲು ಮುಂದಾಗಿದ್ದರು.

ಇದೇ ವಿಷಯದಿಂದ ದಂಪತಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಶಿವಾನಂದ್ ತನ್ನ ಪತ್ನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದನೆಂದು ಜಯಶ್ರೀ ಅವರ ಕುಟುಂಬಸ್ಥರು ದೂರಿದ್ದಾರೆ. “ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದು, ಬೆಳಗಾಗುವುದರಲ್ಲಿ ಜಯಶ್ರೀ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆಯಲ್ಲ, ತಮ್ಮ ಮಗಳನ್ನು ಶಿವಾನಂದ ಕೊಲೆ ಮಾಡಿ ನೇಣಿಗೆ ಹಾಕಿದ್ದಾನೆ” ಎಂದು ಜಯಶ್ರೀ ಪೋಷಕರು ಆರೋಪಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಸಿಂದಗಿ | ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕ್‌ಗೆ ಹೋಗುವ ದಾರಿ ಕೆಸರುಮಯ

ಈ ಕುರಿತು ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಮೃತ ಮಹಿಳೆಯ ಕುಟುಂಬದ ಆರೋಪಗಳನ್ನು ಆಧರಿಸಿ, ಶಿವಾನಂದ್‌ನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪೊಲೀಸರು ಶವಪರೀಕ್ಷೆ ವರದಿ ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ತನಿಖೆಯನ್ನು ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X