ಬೀದರ್ | ವ್ಯಾಪಕ ಮಳೆ :‌ ಔರಾದ್‌ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ರಜೆ

Date:

Advertisements

ಔರಾದ್‌ (ಬಾ) ತಾಲೂಕಿನಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಔರಾದ್‌ ತಾಲೂಕಿನ ಅಂಗನವಾಡಿ ಕೇಂದ್ರ ಸೇರಿದಂತೆ ಶಾಲಾ-ಕಾಲೇಜುಗಳಿಗೆ ಇಂದು (ಆ.18) ರಂದು ಒಂದು ದಿನ ರಜೆಯನ್ನು ಘೋಷಿಸಿ ಔರಾದ್‌ ತಹಸೀಲ್ದಾರ್‌ ಮಹೇಶ ಪಾಟೀಲ್‌ ಅವರು ಆದೇಶ ಹೊರಡಿಸಿದ್ದಾರೆ.

ತೀವ್ರವಾಗಿ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಔರಾದ್‌ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸದರಿ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಎಂದು ಸೋಮವಾರ ಬೆಳಿಗ್ಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

Advertisements

ಕಮಲನಗರ ತಾಲೂಕಿನ ಶಾಲೆಗಳಿಗೆ ರಜೆ : ಬಿಇಒ

ʼಎರಡ್ಮೂರು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಿಂದ ಔರಾದ್‌ ತಹಸೀಲ್ದಾರ್‌ ಅವರು ಔರಾದ್ ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಇಂದು (ಸೋಮವಾರ) ರಜೆ ಘೋಷಿಸಿದ್ದಾರೆ. ಕಮಲನಗರ ತಾಲೂಕಿನಲ್ಲಿಯೂ ಮಳೆಯ ಪ್ರಮಾಣ ಹೆಚ್ಚಿದ್ದು, ಇಲ್ಲಿನ ಶಾಲೆಗಳಿಗೆ ರಜೆ ಘೋಷಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದ್ದೇನೆʼ ಎಂದು ಕಮಲನಗರ ತಹಸೀಲ್ದಾರ್‌ ಅಮಿತ್‌ ಕುಲಕರ್ಣಿ ಈದಿನಕ್ಕೆ ತಿಳಿಸಿದ್ದಾರೆ.

ʼಔರಾದ್-ಕಮಲನಗರ ತಾಲೂಕು ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ.ರಂಗೇಶ ಅವರು ಮಾತನಾಡಿ, ʼಔರಾದ್‌ ಸೇರಿದಂತೆ ಕಮಲನಗರ ತಾಲೂಕಿನ ಶಾಲೆಗಳಿಗೂ ರಜೆ ನೀಡುವಂತೆ ಈಗಾಗಲೇ ಮೌಖಿಕವಾಗಿ ಆದೇಶ ಮಾಡಲಾಗಿದೆʼ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ : ಬೀದರ್‌ | ಮಳೆಗೆ ಜಮೀನು ಜಲಾವೃತ : ಬೆಳೆ ಹಾನಿ ಆತಂಕದಲ್ಲಿ ರೈತರು

ಸೋಮವಾರ ಬೆಳಿಗ್ಗೆ ಎಂದಿನಂತೆ ಶಾಲಾ-ಕಾಲೇಜುಗಳಿಗೆ ತೆರಳಿದ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಬಗ್ಗೆ ತಡವಾಗಿ ಮಾಹಿತಿ ಬಂದ ಕಾರಣ ಮರಳಿ ಮನೆಗೆ ಬರಬೇಕಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X