ಚಿಕ್ಕಮಗಳೂರು l ಮಲೆನಾಡಿನಲ್ಲಿ ಮಳೆಯ ಆರ್ಭಟ: ಉಕ್ಕಿ ಹರಿಯುತ್ತಿರುವ ತುಂಗಾ ನದಿ

Date:

Advertisements

ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿದ ಪರಿಣಾಮ ಕೆಲವು ಭಾಗಗಳಲ್ಲಿ ನೆರೆ ಬಂದಿದೆ. ಹಾಗೆಯೇ, ಮಳೆಯಿಂದ ಶೃಂಗೇರಿ ತಾಲೂಕಿನ ಗಾಂಧಿ ಮೈದಾನ, ನೆಮ್ಮಾರ್, ಕೆರೆಕಟ್ಟೆ, ಕುರಬಕೇರಿ, ಭಾರತೀತೀರ್ಥ ರಸ್ತೆ, ವಿದ್ಯಾರಣ್ಯಪುರ ರಸ್ತೆ, ಕಿಕ್ರೆ ಹಳ್ಳ ಸೇತುವೆ ಮೇಲೆ, ಕೆರೆಕಟ್ಟೆಯ ಗುಲುಗುಂಜಿ ಮನೆ ರಸ್ತೆ ನೀರಿನಿಂದ ತುಂಬಿ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ.

Screenshot 2025 08 18 10 13 43 23 40deb401b9ffe8e1df2f1cc5ba480b12

ತಾಲ್ಲೂಕಿನ 49 ಗ್ರಾಮಗಳಲ್ಲಿ ಶಿರ್ಲು, ಹಾದಿ, ಕೆರೆ, ಸುಂಕದಮಕ್ಕಿ, ನಿಲಂದೂರು, ಕುಂಬ್ರಗೋಡು, ಕೂಗೋಡು ಮೊದಲಾದ ಗ್ರಾಮಗಳು ಪಟ್ಟಣದಿಂದ 25 ರಿಂದ 30 ಕಿಲೋಮೀಟರ್ ದೂರವಿದ್ದು, ಇಲ್ಲಿನ ರಸ್ತೆಗಳು ಹದಗೆಟ್ಟಿರುವುದರಿಂದ ಅನಾರೋಗ್ಯ, ಅಪಘಾತ ಸಂಭವಿಸಿದರೆ ಆಸ್ಪತ್ರೆಗೆ ಬರಲು ಅಲ್ಲಿನ ಜನ ಹರಸಾಹಸ ಪಡಬೇಕಿದೆ.

Screenshot 2025 08 18 10 28 27 82 7352322957d4404136654ef4adb64504
ಶೃಂಗೇರಿಯಲ್ಲಿ ರಸ್ತೆಗೆ ಉಕ್ಕಿ ಹರಿಯುತ್ತಿರುವ ತುಂಗಾ ನದಿ

ಶೃಂಗೇರಿಯಲ್ಲಿ 132 ಮಿ.ಮೀ, ಕಿಗ್ಗಾದಲ್ಲಿ 152.8 ಮಿ.ಮೀ, ಕೆರೆಕಟ್ಟೆ 154 ಮಿ.ಮೀ ಮಳೆಯಾಗಿದೆ. 2 3,475 ಒಟ್ಟು 3,475 ಮಿ.ಮೀ ಮಳೆಯಾಗಿದೆ. ಈ ಭೀಕರ ಮಳೆಯಿಂದ ಶೃಂಗೇರಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರ ನೆಮ್ಮಾರಲ್ಲಿ ರಸ್ತೆ ಜಲಾವೃತಗೊಂಡು ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಶೃಂಗೇರಿಯ ಭಾರತೀತೀರ್ಥ ರಸ್ತೆ ನೀರಿನಿಂದ ಆವೃತಗೊಂಡಿದೆ. ಕುರುಬಕೇರಿ ರಸ್ತೆ ನೀರಿನಿಂದ ಆವೃತಗೊಂಡು ರಸ್ತೆಯ 2 ಕಡೆ ನೀರಿನಿಂದ ತುಂಬಿದ್ದು ಮಧ್ಯೆ ದ್ವೀಪದಂತಾಗಿದೆ.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮಲೆನಾಡಿನಲ್ಲಿ ಕಾಡಾನೆ ಹಾವಳಿ: ಜನರಲ್ಲಿ ಭಯದ ವಾತಾವರಣ

ಅತಿಯಾದ ಮಳೆಯ ಕಾರಣ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶಾಲಾ ಸೋಮವಾರ(ಆ.18) ರಜಾ ಘೋಷಿಸಲಾಗಿದೆ. ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಸಾರ್ವಜನಿಕರು ಹೆಚ್ಚರದಿಂದ ಇರಬೇಕಾಗುತ್ತದೆ. ಹಾಗೆಯೇ, ವಾಹನ ಸವಾರರು ಸುರಕ್ಷತೆಯಿಂದ ಪ್ರಯಾಣ ಮಾಡಬೇಕಿದೆ.

Screenshot 2025 08 18 10 30 35 09 7352322957d4404136654ef4adb64504
ಕುಂಚೆಬೈಲು ಜಾಗದಾಳು ಸೇತುವೆ ಮೇಲೆ ನೀರು

ಮಳೆಯಿಂದ ಕೆಲವು ಪ್ರದೇಶಗಳಲ್ಲಿ ಮರ ಧರೆಗೆ ಉರುಳುವುದು, ಮನೆ ಕುಸಿಯುವುದು, ರಸ್ತೆ ಕುಸಿತ ಹಾಗೂ ಅನೇಕ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಯಾರು ಆತಂಕ ಪಡಬಾರದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

WhatsApp Image 2024 10 24 at 12.02.30
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X