ಚಿಂತಾಮಣಿ | ಮುರುಗಮಲ್ಲ ದವಾ-ದುವಾ ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲ; ವಾರಕ್ಕೆ ಒಂದೇ ದಿನ ಚಿಕಿತ್ಸೆ ಭಾಗ್ಯ

Date:

Advertisements

*2 ಕೋಟಿ ವೆಚ್ಚದಲ್ಲಿ ಆರಂಭಗೊಂಡ ಆಸ್ಪತ್ರೆಯಲ್ಲಿ ಖಾಯಂ ವೈದ್ಯರೇ ಇಲ್ಲ!*

ಚಿಕ್ಕಬಳ್ಳಾಪುರದ ಪುಣ್ಯಕ್ಷೇತ್ರ ಚಿಂತಾಮಣಿಯಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಹೊಚ್ಚ ಹೊಸ ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲದೆ ವಾರಕ್ಕೆ ಒಂದು ದಿನ ಮಾತ್ರ ಚಿಕಿತ್ಸೆ ಸಿಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಮುರುಗಮಲ್ಲ ಗ್ರಾಮದ ಹಜರತ್ ಅಮ್ಮಜಾನ್ ಬಾವಾಜಾನ್ ದರ್ಗಾ ಸಮೀಪವೆ ಒಂದು ವರ್ಷದ ಹಿಂದೆ ದವಾ – ದುವಾ ಎಂಬ ಆಸ್ಪತ್ರೆ ನಿರ್ಮಾಣವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ ಸಿ ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿದಂತೆ ಹಲವು ನಾಯಕರು ಉದ್ಘಾಟನೆ ಮಾಡಿದ್ದರು. ಆದರೆ ಈ ಆಸ್ಪತ್ರೆಯಲ್ಲಿ ವಾರಕ್ಕೆ ಒಂದೇ ದಿನ ಚಿಕಿತ್ಸೆ ಭಾಗ್ಯ ಲಭ್ಯವಾಗುವುದು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Advertisements

ಸದರಿ ಗ್ರಾಮದ ದರ್ಗಾಗೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವುದಲ್ಲದೆ ಮಾನಸಿಕ ಅಸ್ವಸ್ಥರ ಸಂಖ್ಯೆಯೂ ಸಹ ಇಲ್ಲಿ ಹೆಚ್ಚಾಗಿದೆ. ಅವರಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಬೇಕೆಂಬುದು ಸರ್ಕಾರದ ಉದ್ದೇಶವಾಗಿತ್ತು ಆದರೆ ಸರ್ಕಾರದ ಉದ್ದೇಶ ನೀರು ಪಾಲಾಗಿದೆ. ಸುಮಾರು ಎರಡು ಕೋಟಿ ಹಣ ಖರ್ಚು ಮಾಡಿ ಆಸ್ಪತ್ರೆ ಆರಂಭ ಮಾಡಲಾಗಿದ್ದು ಆಸ್ಪತ್ರೆಯಲ್ಲಿ ಖಾಯಂ ವೈದ್ಯರನ್ನೇ ಇದುವರೆಗೂ ಸರ್ಕಾರ ನೇಮಕ ಮಾಡದೇ ಇರುವುದು ಬೇಸರದ ಸಂಗತಿಯಾಗಿದೆ. ಆಸ್ಪತ್ರೆ ವಾರಕ್ಕೆ ಒಂದೇ ದಿನ ಅದು ಬುದುವಾರ ಮಾತ್ರ ಓಪನ್ ಮಾಡಲಾಗುತ್ತದೆ, ಸದರಿ ಗ್ರಾಮದ ಸರ್ಕಾರಿ ಆಸ್ಪತ್ರೆ ವೈದ್ಯರೇ ಅಲ್ಲಿ ನಿರ್ವಹಣೆ ಮಾಡುತ್ತಾರೆ ಆದರೆ ಚೀಟಿಯಲ್ಲಿ ರೋಗಿಯ ಹೆಸರನ್ನು ಬರೆದು ಬೇರೆಡೆಗೆ ರೆಫರ್ ಮಾಡುವುದು ಇವರ ಕೆಲಸ ಅಷ್ಟೇ.

ಇದನ್ನೂ ಓದಿ: ಚಿಂತಾಮಣಿ | ಬಡ್ಡಿ ಹಣದ ವಿಚಾರಕ್ಕೆ ಹಲ್ಲೆ: ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ; ಆಸ್ಪತ್ರೆಗೆ ದಾಖಲು

ಆಸ್ಪತ್ರೆಯ ಒಳಗೆ ಇರುವ ಬೆಡ್ ಮತ್ತು ಇತರೆ ಯಂತ್ರೋಪಕರಣಗಳ ಕವರ್ ಸಹ ಇದುವವರೆಗೂ ತೆಗೆದೆ ಇಲ್ಲ, ಇಲ್ಲಿ ಮಾನಸಿಕ ಅಸ್ವಸ್ತರು ಭೇಟಿ ನೀಡಿದರೆ ಈ ದರ್ಗಾದಲ್ಲಿ ಗುಣಪಡುತ್ತದೆ ಎಂಬ ನಂಬಿಕೆ ಇರುವ ಕಾರಣ ಇಲ್ಲಿಗೆ ಅಪಾರ ಸಂಖ್ಯೆಯಲ್ಲಿ ಮಾನಸಿಕ ಅಸ್ವಸ್ಥರು ಸಹ ಬರುತ್ತಿರುತ್ತಾರೆ. ಈ ಕೂಡಲೇ ಸರ್ಕಾರ ಗಮನವಹಿಸಿ ಆಸ್ಪತ್ರೆಗೆ ಖಾಯಂ ವೈದ್ಯರನ್ನು ನೇಮಿಸಿ ಆಸ್ಪತ್ರೆಯ ನಿರ್ವಹಣೆ ಮಾಡಬೇಕೆಂದು ದರ್ಗಾಗೆ ಬರುವ ಭಕ್ತರು ಮನವಿ ಮಾಡುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X