ಹಾವೇರಿ | ಜಿಲ್ಲೆಯ ಜನರಿಗೆ ಕಂದಾಯ ಇಲಾಖೆ ಸೌಲಭ್ಯ ತಲುಪಿಸಿ: ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

Date:

Advertisements

“ಸರ್ಕಾರದ ಕಂದಾಯ ಇಲಾಖೆಯಲ್ಲಿನ ಯೋಜನೆಗಳ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸಮಾಡಬೇಕು” ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.

ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಇಂದು ಸೋಮವಾರ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. 

“ಜಿಲ್ಲೆಯ ಸಾರ್ವಜನಿಕರು ಸಮಸ್ಯೆಗಳನ್ನು ಹೇಳಿಕೊಂಡು ಬಂದಾಗ ಅವರ ಸಮಸ್ಯೆವನ್ನು ಆಲಿಸಿ ಪರಿಹರಿಸಿ. ಜನರು ಸರ್ಕಾರದ ಯೋಜನೆಗಳ ಕುರಿತು ಗೊಂದಲಕ್ಕೆ ಒಳಗಾದಲ್ಲಿ ಅದನ್ನು ಬಗೆಹರಿಸಿ ಯೋಜನೆಯ ಉಪಯುಕ್ತತೆಯನ್ನು ಅವರಿಗೆ ತಲುಪುವಂತೆ ಮಾಡಿ” ಎಂದರು.

Advertisements

“ಜಿಲ್ಲೆಯಲ್ಲಿ ಬಗರ್‌ ಹುಕುಂ ಅರ್ಜಿಗಳು ವಿಲೇ ಆಗದೇ ಉಳಿದಿದ್ದರೆ ಅವುಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು. ಗ್ರಾಮಾಡಳಿತ ಅಧಿಕಾರಿಗಳು ಇ ಆಫೀಸ್ ನಿರ್ವಹಣೆಯೊಂದಿಗೆ ತ್ವರಿತಗತಿಯಲ್ಲಿ ಕಡತಗಳನ್ನು ವಿಲೇವಾರಿ ಮಾಡಬೇಕು. ಕಂದಾಯ ಗ್ರಾಮ, ಪಾವತಿ ಆಂದೋಲನ, ಭೂ ಸುರಕ್ಷೆ ಮೊದಲಾದವುಗಳ” ಕುರಿತು ಸಭೆಯಲ್ಲಿ ಚರ್ಚಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆಗಳನ್ನು ನೀಡಿದರು.

“ಜಿಲ್ಲೆಯ ಸಾರ್ವಜನಿಕರು ಒಂದೇ ವಿಷಯವಾಗಿ ಪದೆ ಪದೆ ಕಚೇರಿಗೆ ಅಲೆಯುಂತೆ ಆಗಬಾರದು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ, ಮುಂದಿನ ಸಭೆಯಲ್ಲಿ ಪ್ರಗತಿ ವರದಿ ಸಲ್ಲಿಸುವಂತೆ ಸೂಚನೆ ನೀಡಿ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಲಕ್ಷ್ಮೇಶ್ವರ ರಸ್ತೆಯುದ್ಧಕ್ಕೂ ನೂರಾರು ತಗ್ಗು ಗುಂಡಿಗಳು: ರಸ್ತೆ ಅಭಿವೃದ್ಧಿಪಡಿಸಲು ಸಾರ್ವಜನಿಕರು ಒತ್ತಾಯ

ಸಭೆಯಲ್ಲಿ ತಹಶೀಲ್ದಾರ್ ಶ್ರೀಮತಿ ರೇಣುಕಮ್ಮ, ಉಪ ತಹಶೀಲ್ದಾರ. ಕಂದಾಯ ನೀರಿಕ್ಷಕರು ಮತ್ತು ಗ್ರಾಮಾಡಳಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X