ಬೆಂಗಳೂರು | ಹೂಡಿ ಕೆರೆಯ ಬಳಿ 1.74 ಗುಂಟೆ ಒತ್ತುವರಿ: ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದ ಬಿಬಿಎಂಪಿ

Date:

Advertisements

ಬೆಂಗಳೂರು ಪೂರ್ವ ತಾಲೂಕು ಮಹದೇವಪುರ ವಲಯದ ಹೂಡಿ ಗ್ರಾಮದ ಸರ್ವೆ ನಂ 79 ರಲ್ಲಿರುವ ಹೂಡಿ ಕೆರೆಯು ಒಟ್ಟು 15 ಎಕರೆ 10 ಗುಂಟೆ ಪ್ರದೇಶವಿದ್ದು, ಈ ಪೈಕಿ 14.5 ಗುಂಟೆ ಖಾಸಗಿ ಒತ್ತುವರಿಯಾಗಿತ್ತು. ಈ ಕೆರೆಯ ಒತ್ತುವರಿಗಳನ್ನು ಕಂದಾಯ ಇಲಾಖೆ ವತಿಯಿಂದ ಗುರುತಿಸಿ ಸರ್ವೆ ನಕ್ಷೆಯನ್ನು ನೀಡಿತ್ತು. ಸದರಿ ಒತ್ತುವರಿದಾರರಿಗೆ ನೋಟಿಸ್ ನೀಡಿದ ಬಿಬಿಎಂಪಿ, ಒತ್ತುವರಿ ತೆರವು ಆದೇಶದ ಬಳಿಕ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಗಿದೆ.

ಮಹದೇವಪುರ ವಲಯ ಆಯುಕ್ತರಾದ ಕೆ.ಎನ್ ರಮೇಶ್ ರವರ ನಿರ್ದೇಶನದಂತೆ ಇಂದು ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಂದಾಯ ಇಲಾಖೆಯ ಸರ್ವೆಯರ್ ರವರ ಸಮಕ್ಷಮದಲ್ಲಿ ಸುಮಾರು 1.75 ಗುಂಟೆ ಪ್ರದೇಶವನ್ನು ತೆರವುಗೊಳಿಸಲಾಗಿದೆ.

ಇದನ್ನು ಓದಿದ್ದೀರಾ? ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌’ನಲ್ಲಿ ಸ್ಥಾನ ಪಡೆದ ಕರ್ನಾಟಕ ಸರ್ಕಾರದ ‘ಶಕ್ತಿ ಯೋಜನೆ’

Advertisements

ಒತ್ತುವರಿ ಸ್ಥಳದಲ್ಲಿ ಶೆಡ್, ಖಾಲಿ ಪ್ರದೇಶ ಮತ್ತು ಕಾಂಪೌಂಡ್ ಗೋಡೆ ಇದ್ದು, ಆ ಒತ್ತುವರಿಯನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿರುತ್ತದೆ. ಉಳಿದ ಒತ್ತುವರಿದಾರರಿಗೆ ನೋಟಿಸ್ ಹಾಗೂ ಒತ್ತುವರಿ ತೆರವು ಆದೇಶ ಜಾರಿಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X