ಶಿವಮೊಗ್ಗ | ಭಾರಿ ಮಳೆ : ಕೋರ್ಪಳ್ಳಯ್ಯನ ಮಂಟಪ್ಪ ಮುಳುಗಡೆ

Date:

Advertisements

ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿಯಲ್ಲಿ ಒಳಹರಿವು ವಿಪರೀತ ಹೆಚ್ಚಿದೆ. ಶೃಂಗೇರಿಯಲ್ಲಿಯೇ ತುಂಗಾನದಿಯು ಅಬ್ಬರಿಸಿ ಹರಿಯುತ್ತಿದ್ದು, ತಿರ್ಥಹಳ್ಳಿಯಲ್ಲಿ ತುಂಗೆಯ ಆರ್ಭಟ ಇನ್ನೂ ಜೋರಾಗಿದೆ. ಇಲ್ಲಿನ ರಾಮೇಶ್ವರ ಮಂಟಪ ಬಹುತೇಕ ಮುಳುಗಡೆಯಾಗಿದೆ.

ಗಾಜನೂರಿನಲ್ಲಿರುವ ತುಂಗಾ ಜಲಾಶಯಕ್ಕೆ ಜಲರಾಶಿಯೇ ಹರಿದು ಬರುತ್ತಿದೆ. ಇವತ್ತು ಲಭ್ಯ ಮಾಹಿತಿ ಪ್ರಕಾರ, ಗಾಜನೂರು ಜಲಾಶಯಕ್ಕೆ ಇವತ್ತು ಜಲಾಶಯಕ್ಕೆ ಒಟ್ಟು 73,415 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ಒಟ್ಟು 76,656 ಕ್ಯೂಸೆಕ್‌ ನೀರು ನದಿಗೆ ಬಿಡಲಾಗುತ್ತಿದೆ.

ಇದರ ಪರಿಣಾಮವಾಗಿ ಶಿವಮೊಗ್ಗ ನಗರ ಭಾಗದಲ್ಲಿಯೇ ತುಂಗೆ ತನ್ನ ವ್ಯಾಪ್ತಿಯ ವಿಶಾಲತೆಯನ್ನು ಪ್ರದರ್ಶನ ಮಾಡುತ್ತಿದ್ದಾಳೆ. ಕೆಂಬಣ್ಣದ ಸೀರೆಯುಟ್ಟು ಮೆರವಣಿಗೆ ಹೊರಟಂತೆ ಕಾಣುತ್ತಿರರುವ ತುಂಗಾ ನದಿ ಅಪಾಯದ ರೌದ್ರವತೆಯನ್ನು ನೋಡುಗರ ಮನಸಿನಲ್ಲಿಯೇ ಸೃಷ್ಟಿಸುತ್ತಿದ್ದಾಳೆ.

Advertisements

ತುಂಗಾ ನದಿಯ ಅಪಾಯದ ತೀವ್ರತೆಯನ್ನು ಲೆಕ್ಕ ಹಾಕುವ ಹಿಂದಿನ ಪದ್ದತಿಯಂತೆ ನೋಡುವುದಾದರೆ, ಶಿವಮೊಗ್ಗದ ಕೋರ್ಪಳ್ಳಯ್ಯನ ಮಂಟಪ್ಪ ಮುಳುಗಿದೆ. ಇದನ್ನು ನೋಡಲು ಮಂಟಪದ ಬಳಿಗೆ ಜನರು ಬಂದು ಹೋಗುತ್ತಿದ್ದಾರೆ. ಜಿಟಿ ಮಳೆಯ ನಡುವೆ ತುಂಗಾನದಿ ಮೈದುಂಬಿ ಹರಿವುದನ್ನು ಕಂಡು ಜನರು ರೋಮಾಂಚನಗೊಳ್ಳುತ್ತಿದ್ದಾರೆ.

ಇನ್ನೊಂದೆಡೆ ಇವತ್ತು ಸಹ ಮಳೆ ಮುಂದುವರಿದರೆ ತಗ್ಗುಪ್ರದೇಶಗಳಲ್ಲಿ ಪ್ರವಾಹ ಭೀತಿಯ ಆತಂಕವೂ ಇದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X