ಶಿವಮೊಗ್ಗ | ಲಾಡ್ಜ್-ಹೋಂ ಸ್ಟೇಗಳಿಗೆ ಪೊಲೀಸರ ಭೇಟಿ , ಪರಿಶೀಲನೆ

Date:

Advertisements

ಶಿವಮೊಗ್ಗ, ಜಿಲ್ಲಾ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿಕಾರಿಯಪ್ಪ ಎಸ್. ರಮೇಶ್ ಕುಮಾರ್, ರವರ ಮಾರ್ಗದರ್ಶನದಲ್ಲಿ, ಜಿಲ್ಲೆಯ ವಿವಿಧ ಪೊಲೀಸ್ ಉಪ ವಿಭಾಗಗಳ ಪೊಲೀಸ್ ಉಪಾಧೀಕ್ಷಕರವರ ಮೇಲ್ವಿಚಾರಣೆಯಲ್ಲಿ, ಶಿವಮೊಗ್ಗ ಜಿಲ್ಲೆಯದ್ಯಂತ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರವರ ನೇತೃತ್ವದಲ್ಲಿ ಸಿಬ್ಬಂಧಿಗಳ ತಂಡವು ಆಯಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿರುವ ಲಾಡ್ಜ್, ಪೇಯಿಂಗ್ ಗೆಸ್ಟ್ ಮತ್ತು ಹೋಂ ಸ್ಟೇಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

1002087231

ತಪಾಸಣೆಯ ಸಂದರ್ಭದಲ್ಲಿ ಲಾಡ್ಜ್, ಪಿ.ಜಿ. ಮತ್ತು ಹೋಂ ಸ್ಟೇಗಳಿಗೆ ಬಂದು ತಂಗಿರುವ ಗ್ರಾಹಕರ ಮಾಹಿತಿಯನ್ನು ರಿಜಿಸ್ಟರ್‌ನಲ್ಲಿ ನಮೂದು ಮಾಡಿರುವುದನ್ನು ಮತ್ತು ಲಾಡ್ಜ್ ಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿರುವ ಬಗ್ಗೆ ಹಾಗೂ ಅವುಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಸುತ್ತಿರುವ ಬಗ್ಗೆ ಹಾಗೂ ವಿಶೇಷವಾಗಿ ಕಳೆದ 15 ದಿನಗಳಲ್ಲಿ ಬಂದು ತಂಗಿದ್ದ ಗ್ರಾಹಕರ ಮಾಹಿತಿಯನ್ನು ಪರಿಶೀಲನೆ ಮಾಡಿದ್ದಾರೆ.

ಆನಂತರ ಲಾಡ್ಜ್, ಪಿಜಿ ಮತ್ತು ಹೋಂ ಸ್ಟೇಗಳ ವ್ಯವಸ್ಥಾಪಕರಿಗೆ ತಂಗಲು ಬರುವ ಗ್ರಾಹಕರುಗಳ ಹೆಸರು, ವಿಳಾಸ ಹಾಗೂ ಮೊಬೈಲ್ ನಂಬರ್ ಸೇರಿದತೆ ಸಂಪೂರ್ಣ ಮಾಹಿತಿಯನ್ನು ಪಡೆದು ರಿಜಿಸ್ಟರ್ ನಲ್ಲಿ ನಮೂದು ಮಾಡಲು, ಗ್ರಾಹಕರು ನೀಡುವ ಮೊಬೈಲ್ ಸಂಖ್ಯೆಯನ್ನು ಪರಿಶೀಲಿಸಿ ಅವರದ್ದೇ ಮೊಬೈಲ್ ನಂಬರ್ ಎಂದು ಖಚಿತ ಪಡಿಸಿಕೊಳ್ಳಲು, ಗ್ರಾಹಕರ ಐಡಿ ಕಾರ್ಡ್ ನ ಜೆರಾಕ್ಸ್ ಪ್ರತಿಯನ್ನು ಪಡೆಯಲು, ಲಾಡ್ಜ್ ಗೆ ಬರುವ ಗ್ರಾಹಕರ ತಂಗುವ ಉದ್ದೇಶವನ್ನು ಕೇಳಿ ಪಡೆದು ರಿಜಿಸ್ಟರ್ ನಲ್ಲಿ ನೋಂದಾಯಿಸಲು ಸೂಚನೆ ನೀಡಿದ್ದಾರೆ.

Advertisements
1002082464

ಒಂದುವೇಳೆ ಗ್ರಾಹಕರ ಬಗ್ಗೆ ಯಾವುದೇ ಅನುಮಾನ ಕಂಡು ಬಂದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X