ಇಂದು(ಆ.19) ಮತ್ತು ನಾಳೆ(ಆ.20) ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅದರಲ್ಲೂ ಮುಖ್ಯವಾಗಿ ಕರಾವಳಿ, ಮಲೆನಾಡು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಕರ್ನಾಟಕ ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಅತ್ಯಧಿಕ ಮಳೆಯಾಗುವ ಅಥವಾ ಒಂದೆರಡು ಸ್ಥಳಗಳಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ: ಹವಾಮಾನ ಇಲಾಖೆ
ಇನ್ನು ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಅತ್ಯಧಿಕ ಮಳೆಯಾಗಲಿದೆ ಮತ್ತು ಒಂದೆರಡು ಸ್ಥಳಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) August 19, 2025
ರಾಜ್ಯದಾದ್ಯಂತ ಜೋರಾದ ಗಾಳಿಯೊಂದಿಗೆ ಇಂದು ಮತ್ತು ನಾಳೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರದಿಂದ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆ, ಹಾಗೂ ಅಲ್ಲಲ್ಲಿ ಅತಿ ಭಾರಿ ಮಳೆ, ಇಂದು ಅಲ್ಲಲ್ಲಿ ಅತ್ಯಅಧಿಕ ಮಳೆ. pic.twitter.com/JdtcyJRf7P
ಬಾಗಲಕೋಟೆ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ನಿರಂತರ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಹೇಳಿದೆ.
ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ನಿರಂತರ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

https://shorturl.fm/FeDiB