ಶೇಕಡ 70ರಷ್ಟು ಭಾರತೀಯರಲ್ಲಿ ಆರೋಗ್ಯ ವಿಮೆಯಿಲ್ಲ: ಲ್ಯಾನ್ಸೆಟ್ ಅಧ್ಯಯನ ವರದಿ

Date:

Advertisements

ಆರೋಗ್ಯ ವಿಮಾ ರಕ್ಷಣೆಯನ್ನು ವಿಸ್ತರಿಸುವಲ್ಲಿ ಭಾರತವು ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಆರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಎರಡನೇ ಸ್ಥಾನದಲ್ಲಿ ಭಾರತವಿದೆ. ಮೊದಲ ಸ್ಥಾನದಲ್ಲಿ ಇಂಡೋನೇಷ್ಯಾ ಇದೆ ಎಂದು ಲ್ಯಾನ್ಸೆಟ್‌ನಲ್ಲಿ ಪ್ರಕಟವಾದ ಇತ್ತೀಚಿನ ಅಧ್ಯಯನವು ತಿಳಿಸಿದೆ. ಆದರೆ ಶೇಕಡ 70ರಷ್ಟು ಭಾರತೀಯರಲ್ಲಿ ಆರೋಗ್ಯ ವಿಮೆಯಿಲ್ಲ ಎಂದೂ ಹೇಳಿದೆ.

ದಿ ಲ್ಯಾನ್ಸೆಟ್ ಅಧ್ಯಯನದ ಪ್ರಕಾರ, ದೇಶದಲ್ಲಿ 15–49 ವರ್ಷ ವಯಸ್ಸಿನ 29.8% ಮಹಿಳೆಯರು ಮತ್ತು 33.3% ಪುರುಷರು ವಿವಿಧ ರೀತಿಯ ಆರೋಗ್ಯ ವಿಮೆಯನ್ನು ಹೊಂದಿದ್ದಾರೆ. ಆದರೆ ಒಂದು ದೊಡ್ಡ ಭಾಗವು ವಿಮೆಯಿಲ್ಲದೆ ಉಳಿದಿದೆ ಎಂದು ಅಧ್ಯಯನ ವರದಿ ಒತ್ತಿಹೇಳುತ್ತದೆ.

ಇದನ್ನು ಓದಿದ್ದೀರಾ? ಆರೋಗ್ಯ ವಿಮೆ, ಜೀವ ವಿಮೆ ಮೇಲಿನ ಜಿಎಸ್‌ಟಿ ತೆರವಿಗೆ ಒತ್ತಾಯಿಸಿ ‘ಇಂಡಿಯಾ’ ಪ್ರತಿಭಟನೆ

Advertisements

‘ಆಗ್ನೇಯ ಏಷ್ಯಾ ಪ್ರದೇಶದ (2015–2022) ಆರು ದೇಶಗಳಲ್ಲಿ ಪುರುಷರು ಮತ್ತು ಮಹಿಳೆಯರಲ್ಲಿ ಆರೋಗ್ಯ ವಿಮಾ ರಕ್ಷಣೆ’ ಎಂಬ ಅಧ್ಯಯನವು ಭಾರತದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-NFHS (2019–21) ಡೇಟಾವನ್ನು ವಿಶ್ಲೇಷಿಸಿದೆ. ಬಾಂಗ್ಲಾದೇಶ, ಇಂಡೋನೇಷ್ಯಾ, ಮ್ಯಾನ್ಮಾರ್, ಮಾಲ್ಡೀವ್ಸ್ ಮತ್ತು ನೇಪಾಳ – ಆರು ಆಗ್ನೇಯ ಏಷ್ಯಾದ ದೇಶಗಳ ಆರೋಗ್ಯ ಡೇಟಾವನ್ನು ವಿಶ್ಲೇಷಿಸಲಾಗಿದೆ.

ವರದಿ ಪ್ರಕಾರ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ (RSBY) ಮತ್ತು ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ನಂತಹ ಉಪಕ್ರಮಗಳು ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಆರ್ಥಿಕ ರಕ್ಷಣೆಯನ್ನು ಸುಧಾರಿಸುವಲ್ಲಿ ಪಾತ್ರ ವಹಿಸಿದೆ. ಆದರೆ ದೇಶದಲ್ಲಿ ಆರೋಗ್ಯ ರಕ್ಷಣೆಗೆ ಆರ್ಥಿಕ ದುರ್ಬಲತೆ ಮುಂದುವರೆದಿದೆ. ಇನ್ನು ಮಧ್ಯಮ ವರ್ಗಕ್ಕೂ ಈ ಆರೋಗ್ಯ ವಿಮೆ ಸೌಲಭ್ಯವಿಲ್ಲ. ಇನ್ನು ಸರ್ಕಾರಿ ಯೋಜನೆಗೆ ಒಳಪಡದವರು ಖಾಸಗಿ ವಿಮೆಯನ್ನು ಪಡೆಯಲು ಸಾಧ್ಯವಾಗದ ಆರ್ಥಿಕ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿದೆ.

ಆರೋಗ್ಯ ವಿಮೆ ವಿಚಾರದಲ್ಲೂ ಲಿಂಗ ಅಸಮಾನತೆ ಮುಂದುವರೆದಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಭಿಗಳು ಆಗದಿರುವುದೇ ಮಹಿಳೆಯರು ಹೆಚ್ಚು ವಿಮೆ ಪಡೆಯದಿರಲು ಕಾರಣವಾಗಿರಬಹುದು ಎಂದು ಅಧ್ಯಯನ ಹೇಳುತ್ತದೆ.

ಹಾಗೆಯೇ ಆರೋಗ್ಯ ವಿಮೆಯನ್ನು ಕೈಗೆಟುಕುವಂತೆ ಮಾಡಲು ಖಾಸಗಿ ಆರೋಗ್ಯ ವಿಮಾ ಪ್ರೀಮಿಯಂಗಳ ಮೇಲಿನ ಶೇಕಡ 18ರಷ್ಟು ಜಿಎಸ್‌ಟಿಯನ್ನು ಕಡಿಮೆ ಮಾಡುವಂತಹ ತೆರಿಗೆ ನೀತಿ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಶೋಧಕರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X