ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆಯ ಮತ ಎಣಿಕೆ: ಸ್ಥಳೀಯರಲ್ಲಿ ಕುತೂಹಲ

Date:

Advertisements

ಕೋಲಾರ ತಾಲೂಕಿನ ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಆಗಸ್ಟ್‌ 20ರ ಬುಧವಾರ ಬೆಳಿಗ್ಗೆ 8ರಿಂದ ಆರಂಭಗೊಂಡಿದ್ದು, 10ರ ವೇಳೆಗೆ ಪೂರ್ಣ ಫಲಿತಾಂಶ ಹೊರಬೀಳಲದೆ.

ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಎಎಪಿ, ಪಕ್ಷೇತರರು ಸೇರಿದಂತೆ ಒಟ್ಟು 51 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಮತ ಎಣಿಕೆ ನಡೆಯುವ ಕೋಲಾರದ ಬಾಲಕಿಯರ ಪಿಯು ಕಾಲೇಜು ಕೇಂದ್ರಕ್ಕೆ ತಹಶೀಲ್ದಾರ್ ನಯನ ಭೇಟಿ ನೀಡಿ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ.

ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಗಾಗಿ ಎರಡು ಟೇಬಲ್ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 20 ಮಂದಿ ಚುನಾವಣಾ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದಾರೆ.

Advertisements

ಎಲೆಕ್ಟ್ರಾನಿಕ್ ಮತಯಂತ್ರಗಳಾಗಿರುವುದರಿಂದ ಫಲಿತಾಂಶ ಅತಿ ಶೀಘ್ರ ಹೊರಬೀಳಲಿದ್ದು, ಒಂದು ವಾರ್ಡ್ ಆದ ನಂತರ ಒಂದು ವಾರ್ಡಿನ ಮತ ಎಣಿಕೆ ನಡೆಯುತ್ತಲಿದೆ.

ಈ ಸುದ್ದಿ ಓದಿದ್ದೀರಾ? ಕೆ ಆರ್‌ ಪೇಟೆ | ಇ-ಸ್ವತ್ತು, ಮನರೇಗಾ ಯೋಜನೆಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಕ್ರಮಕ್ಕೆ ಕರವೇ ಆಗ್ರಹ

ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಎಣಿಕೆ ಸಂದರ್ಭದಲ್ಲಿ ಈ ಭಾಗದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.

ಈ ನಡುವೆ ತಹಶೀಲ್ದಾರ್ ನಯನ, ವೃತ್ತ ನಿರೀಕ್ಷಕ ಲೋಕೇಶ್, ಕಸಬಾ ಕಂದಾಯ ನಿರೀಕ್ಷಕ ರಾಜೇಂದ್ರ ಪ್ರಸಾದ್ ಮತ್ತಿತರರು ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ ಸಿದ್ದತೆಗಳ ಪರಿಶೀಲನೆ ನಡೆಸಿದರಲ್ಲದೇ ಮತ ಯಂತ್ರಗಳನ್ನು ಭದ್ರಪಡಿಸಿರುವ ಸ್ಟಾಂಗ್ ರೂಂ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X