ಮೋದಿಗೆ 75 ವರ್ಷವಾದ ಬಳಿಕ ನಿತಿನ್ ಗಡ್ಕರಿ ಮುಂದಿನ ಪ್ರಧಾನಿಯಾಗಬೇಕು: ರೈತ ನಾಯಕ ಕಿಶೋರ್ ತಿವಾರಿ

Date:

Advertisements

ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ವಯಸ್ಸಾದ ನಂತರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮುಂದಿನ ಪ್ರಧಾನಿಯಾಗಬೇಕು ಎಂಬ ತಮ್ಮ ಬೇಡಿಕೆಯನ್ನು ವಿದರ್ಭ ಜನ ಆಂದೋಲನ ಸಮಿತಿಯ ಸ್ಥಾಪಕ, ಹಿರಿಯ ರೈತ ನಾಯಕ ಕಿಶೋರ್ ತಿವಾರಿ ಪುನರುಚ್ಚರಿಸಿದ್ದಾರೆ. ಈ ಸಂಬಂಧ ತಿವಾರಿ ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, “ಗಡ್ಕರಿ ಅಜಾತ ಶತ್ರು ಮತ್ತು ಎಲ್ಲರೂ ಅವರನ್ನು ಸ್ವೀಕರಿಸುತ್ತಾರೆ” ಎಂದಿದ್ದಾರೆ. ಇನ್ನು ಗಡ್ಕರಿ ಈಗಾಗಲೇ ಬಿಜೆಪಿಯ ಸೈದ್ಧಾಂತಿಕ ಸಂಘಟನೆ ಆರ್‌ಎಸ್‌ಎಸ್‌ ಆಪ್ತರು ಎಂದು ಪರಿಗಣಿಸಲಾಗುತ್ತದೆ. ಈ ಹಿಂದೆ ಬಿಜೆಪಿಗೆ ಆಪ್ತರು ಎನಿಸಿಕೊಂಡಿದ್ದ ತಿವಾರಿ ಬಳಿಕ ಅವಿಭಜಿತ ಶಿವಸೇನೆಗೆ ಸೇರಿಕೊಂಡರು.

ಇದನ್ನು ಓದಿದ್ದೀರಾ? ರಾಜ್ ಜೊತೆ ಮೈತ್ರಿ ಮಾಡಿಕೊಳ್ಳಬೇಡಿ: ಉದ್ಧವ್ ಠಾಕ್ರೆಗೆ ಪತ್ರ ಬರೆದ ರೈತ ನಾಯಕ ಕಿಶೋರ್ ತಿವಾರಿ

Advertisements

ಇದೀಗ ಗಡ್ಕರಿ ಶ್ಲಾಘನೆ ಮಾಡುತ್ತಾ ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ಅಷ್ಟಕ್ಕೂ ಗಡ್ಕರಿ ಪರ ತಿವಾರಿ ಮಾತನಾಡಿರುವುದು ಇದು ಎರಡನೇ ಬಾರಿಗೆ. 2018ರಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಸೋತಾಗಲೂ ಗಡ್ಕರಿ ಪ್ರಧಾನಿಯಾಗಬೇಕು ಎಂದು ಹೇಳಿದರು.

ಬಿಜೆಪಿ, ಆರ್‌ಎಸ್‌ಎಸ್‌ನಲ್ಲಿ 75 ವರ್ಷ ತುಂಬಿದ ಬಳಿಕ ರಾಜಕೀಯ ನಿವೃತ್ತಿ ಪಡೆಯಬೇಕು ಎಂಬ ಸಂಪ್ರದಾಯವನ್ನು ಮುನ್ನಡೆಸುತ್ತಾ ಬಂದಿದ್ದು ಪ್ರಧಾನಿ ನರೇಂದ್ರ ಮೋದಿ. ಅಡ್ವಾನಿ ಮೊದಲಾದ ಹಿರಿಯ ನಾಯಕರನ್ನು ಈ ವಯಸ್ಸಿನ ನೆಪಿವೊಡ್ಡಿ ಮೂಲೆಗುಂಪು ಮಾಡಿದ್ದು ಪ್ರಧಾನಿ ಮೋದಿ. ಈಗ ಮೋದಿ ಅವರಿಗೂ 75 ವರ್ಷ ವಯಸ್ಸಾಗಲಿದ್ದು, ಪ್ರಧಾನಿ ಸ್ಥಾನದಿಂದ ಕೆಳಗಿಳಿಯಬೇಕು ಎಂಬ ಕೂಗು ಕೇಳಿಬಂದಿದೆ. ಸೆಪ್ಟೆಂಬರ್ 11ರಂದು ಭಾಗವತ್ ಅವರಿಗೆ 75, ಸೆಪ್ಟೆಂಬರ್ 17ರಂದು ಮೋದಿ ಅವರಿಗೆ 75 ವರ್ಷ ಆಗಲಿದೆ.

“ದೇಶವು ಮೋದಿಗೆ 11 ವರ್ಷಗಳ ಕಾಲ ಕೆಲಸ ಮಾಡಲು ಉತ್ತಮ ಅವಕಾಶವನ್ನು ನೀಡಿದೆ ಮತ್ತು ಪ್ರಧಾನಿಯಾಗಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಸೇರಿದಂತೆ ಅನೇಕ ಪ್ರಭಾವಶಾಲಿ ಉಪಕ್ರಮಗಳನ್ನು ಕೈಗೊಂಡಿದ್ದಾರೆ. 2014ರಲ್ಲಿ ಗಡ್ಕರಿ ಅವರಿಗೆ ಪ್ರಧಾನಿಯಾಗುವ ಅವಕಾಶವಿತ್ತು ಆದರೆ ಆ ಅವಕಾಶವನ್ನು ಕಸಿದುಕೊಳ್ಳಲಾಗಿದೆ. ಈಗ ಅವರಿಗೆ ಅವಕಾಶ ನೀಡಬೇಕು” ಎಂದಿದ್ದಾರೆ.

“ಗಡ್ಕರಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕಠಿಣ ಪರಿಶ್ರಮಿ ಮತ್ತು ಅತ್ಯಂತ ಪರಿಣಾಮಕಾರಿ ಸಚಿವರೆಂದು ಹೆಸರುವಾಸಿ. 2029ರ ಲೋಕಸಭಾ ಚುನಾವಣೆಗೆ ಮೊದಲು ಉಳಿದ 4 ವರ್ಷಗಳ ಕಾಲ ದೇಶವನ್ನು ಮುನ್ನಡೆಸಲು ಗಡ್ಕರಿ ಅವರಿಗೆ ಅವಕಾಶ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X