ಕೋಲಾರ | ವೇಮಗಲ್ ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದು ಬೀಗಿದ ಮೈತ್ರಿ

Date:

Advertisements

ತೀವ್ರ ಕುತೂಹಲ ಮೂಡಿಸಿದ್ದ ಕೋಲಾರದ ವೇಮಗಲ್ ಕುರುಗಲ್ ಪಟ್ಟಣ ಪಂಚಾಯತಿ ಚುನಾವಣಾ ಫಲಿತಾಂಶ ಇಂದು ಹೊರಬಿದ್ದಿದೆ. ಕಾಂಗ್ರೆಸ್ 6, ಬಿಜೆಪಿ 6, ಜೆಡಿಎಸ್ 4 ಹಾಗೂ ಪಕ್ಷೇತರವಾಗಿ ಒಬ್ಬರು ಅಭ್ಯರ್ಥಿ ಜಯಗಳಿಸಿದ್ದಾರೆ.

ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಕಣಕ್ಕಿಳಿದಿತ್ತು. ಆದರೆ, ಕಾಂಗ್ರೆಸ್ ಪಕ್ಷ ವೇಮಗಲ್ ಕುರುಗಲ್ ಭಾಗದಲ್ಲಿ ಪ್ರಭಾವವಾಗಿದ್ದ ಮೈತ್ರಿ ವಿರುದ್ಧ ಬಿರುಸಿನ ಪ್ರಚಾರ ಮಾಡಿತ್ತು ಹಾಗೂ ಹಲವಾರು ಮೈತ್ರಿ ಮುಖಂಡರನ್ನು ಸಹ ಸೆಳೆದರು ಸಹ 17 ಸ್ಥಾನಗಳಲ್ಲಿ ಆರು ಸ್ಥಾನವನ್ನು ಪಡೆದಿದೆ. ವೇಮಗಲ್ ಕುರುಗಲ್ ಭಾಗದಲ್ಲಿ ಮಾಜಿ ಶಾಸಕ ವರ್ತೂರು ಪ್ರಕಾಶ್ ರವರ ಪ್ರಭಾವ ಹೆಚ್ಚಿರುವ ಕಾರಣದಿಂದ ಮೈತ್ರಿ ಅಭ್ಯರ್ಥಿಗಳಿಗೆ ಅನುಕೂಲವಾಗಿದೆ ಎನ್ನಲಾಗಿದೆ.

ಕೋಲಾರ ಗ್ರಾಮಾಂತರ ಭಾಗದಲ್ಲಿ ಕಾಂಗ್ರೆಸ್ 6 ಸ್ಥಾನ ಪಡೆದು ಮತ ಪ್ರಮಾಣವನ್ನು ಕಳೆದ ಬಾರಿ ಚುಣಾವಣೆಗಿಂತ ಹೆಚ್ಚಿಗೆ ಪಡೆದಿದೆ.

Advertisements
IMG 20250820 WA0047

1ನೇ ವಾರ್ಡ್ ಚನ್ನಪ್ಪನಹಳ್ಳಿ- ಕುರುಬರಹಳ್ಳಿ ಕಾಂಗ್ರೆಸ್‌, 2 ಬೆಟ್ಟಹೊಸಪುರ- ಮಂಜಲಿ ಮೈತ್ರಿ, 3 ನೇ ವಾರ್ಡ್ ಕಲ್ವ-ಚಿಕ್ಕವಲ್ಲಬ್ಬಿ ಜೆಡಿಎಸ್, 4 ನೇ ವಾರ್ಡ್ ಮಲಿಯಪ್ಪನಹಳ್ಳಿ ಜೆಡಿಎಸ್, 5 ನೇ ವಾರ್ಡ್ ಜೆಡಿಎಸ್ ಮೈತ್ರಿ, 6 ನೇ ವಾರ್ಡ್ ಬಿಜೆಪಿ ಮೈತ್ರಿ, 7 ನೇ ವಾರ್ಡ್ ಕಾಂಗ್ರೆಸ್ ಗೆಲುವು, ಕುರುಗಲ್ – 8 ನೇ ವಾರ್ಡ್ ಮೈತ್ರಿ, ಕುರುಗಲ್ ಎ 9 ನೇ ವಾರ್ಡ್ -1 ಬಿಜೆಪಿ, 10 ನೇ ವಾರ್ಡ್ ಹಾರ್ಜೇನಹಳ್ಳಿ ಕಾಂಗ್ರೆಸ್, 11 ನೇ ವಾರ್ಡ್ ಪೇರ್ಜೆನಹಳ್ಳಿ- ಪುರಹಳ್ಳಿ ಕಾಂಗ್ರೆಸ್‌, 12 ಐಬಿ- ಸಿಂಗೇಹಳ್ಳಿ ವಾರ್ಡ್ ಮೈತ್ರಿ ಬಿಜೆಪಿ, ವೇಮಗಲ್ – ಎ 1 ಪಕ್ಷೇತರ ಅಭ್ಯರ್ಥಿ ಶಿಲ್ಪಾ ಶಿವಶಂಕರ್, ವೇಮಗಲ್ ಎ -2 ಮೈತ್ರಿ ಬಿಜೆಪಿ, ವೇಮಗಲ್ – ಬಿ 2 ಬೆಜೆಪಿ, 15 ನೇ ವಾರ್ಡ್ ಕಾಂಗ್ರೆಸ್, 17 ನೇ ವಾರ್ಡ್ ವೇಮಗಲ್ ಸಿ ಬ್ಲಾಕ್ ನಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿವೆ.

ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ವೇಮಗಲ್ ಕುರುಗಲ್ ಭಾಗದ ಜನರು ಮೈತ್ರಿ ಅಭ್ಯರ್ಥಿಗಳಿಗೆ ಬೆಂಬಲಿಸಿದ್ದಾರೆ, ಎಂದು ಹೇಳಿದ ಕೋಲಾರ ಜೆಡಿಎಸ್ ಮುಖಂಡ CMR ಶ್ರೀನಾಥ್ ಪ್ರತಿಕ್ರಿಯಿಸಿದ್ದಾರೆ.

IMG 20250820 WA0050

ಇದನ್ನೂ ಓದಿ: ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ

ವೇಮಗಲ್ ಕುರುಗಲ್ ಪಟ್ಟಣ ಪಂಚಾಯಿತಿಯಲ್ಲಿ ಚುನಾವಣೆ ನಡೆದು ಮೈತ್ರಿ ಗೆ ಜನರು ಬೆಂಬಲ ನೀಡಿದ್ದಾರೆ ನಮಗೆ ಜನ ಸೇವೆ ಮಾಡಕ್ಕೆ ಅವಕಾಶ ನೀಡಿದ್ದು ಎಲ್ಲರಿಗೂ ಅಭಿನಂದನೆಗಳು ಸಲ್ಲಿಸುತ್ತೇನೆ ಹಾಗೂ ವೇಮಗಲ್ ಕುರುಗಲ್ ಪಟ್ಟಣ ಪಂಚಾಯಿತಿಯನ್ನು ಅಭಿವೃದ್ಧಿ ಮಾಡುತ್ತೇವೆ ಎಂದು ಕೋಲಾರ ಮಾಜಿ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.

ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೋಲಿಸರು ಸೂಕ್ತ ಬಂದೋಬಸ್ತ್ ಮಾಡಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X