ದಾವಣಗೆರೆ | ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬಳು ಗೃಹಿಣಿ ಬಲಿ

Date:

Advertisements

ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿದೆ.

ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳೆ ಕುಂದುವಾಡ ಗ್ರಾಮದ ಮಂಜುನಾಥ್ ಅವರ ಪತ್ನಿ ಮಹಾದೇವಿ (32) ಶರಣಾದ ದುರ್ದೈವಿಯಾಗಿದ್ದು, ಕಳೆದ ಎರಡು ವಾರಗಳಿಂದ ಜನಾ ಫೈನಾನ್ಸ್ ಸೇರಿದಂತೆ ಫೈನಾನ್ಸ್ ಗಳಿಗೆ ಕಂತು ಕಟ್ಟದ ಕಾರಣಕ್ಕೆ ಫೈನಾನ್ಸಿನ ಮಸೂಲಾತಿ ಸಿಬ್ಬಂದಿ ಮರುಪಾವತಿಗೆ ಕಿರುಕುಳ ಕೊಟ್ಟಿದ್ದರು. ಇದರಿಂದಾಗಿ ಗೃಹಿಣಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂಬಂಧಿಗಳು ಆರೋಪಿಸಿದ್ದಾರೆ.

“ಮಹಿಳೆಯ ಗಂಡ ಮಂಜುನಾಥ ಡೈರಿಯಲ್ಲಿ ಕೂಲಿ ಉದ್ಯೋಗಿಯಾಗಿದ್ದು, ಮೈಕ್ರೋ ಫೈನಾನ್ಸ್ ಗಳಾದ ಐಡಿಎಫ್ಸಿ ಧರ್ಮಸ್ಥಳ ಫೈನಾನ್ಸ್ ಸಗ್ರಹ ಫೈನಾನ್ಸ್, ಜನ ಫೈನಾನ್ಸ್ ಗಳಿಂದ ಪಡೆದಿದ್ದ ಸುಮಾರು 4.5 ಲಕ್ಷದಷ್ಟು ಸಾಲಕ್ಕೆ ಮಳೆಯ ಕಾರಣದಿಂದ ಹಣಕಾಸಿನ ಸಮಸ್ಯೆಯಿಂದಾಗಿ ವಾರದ ಕಂತನ್ನು ಮರುಪಾವತಿ ಮಾಡಿರಲಿಲ್ಲ ಎಂದು ತಿಳಿದು ಬಂದಿದೆ. ಇದರಿಂದ ಮೈಕ್ರೋಫೈನಾನ್ಸ್ ಸಿಬ್ಬಂದಿ ವಸೂಲಾತಿಗಾಗಿ ಪ್ರತಿನಿತ್ಯ ಮನೆ ಬಾಗಿಲಿಗೆ ಬಂದು ಮರುಪಾವತಿಗಾಗಿ ಗಲಾಟೆ, ದೌರ್ಜನ್ಯ ಮಾಡುತ್ತಿದ್ದರು” ಎಂದು ಕುಟುಂಬದ ಸಂಬಂಧಿ‌ ಮಹಾಂತೇಶ ಕುಂದುವಾಡ ಆರೋಪಿಸಿದ್ದಾರೆ.

Advertisements
ಆತ್ಮಹತ್ಯೆ

ಈ ಬಗ್ಗೆ ಈದಿನ ಡಾಟ್ ಕಾಮ್ ನೊಂದಿಗೆ ಮಾತನಾಡಿದ ಮೃತ ಗೃಹಣಿಯ ಗಂಡ ಮಂಜುನಾಥ “ಫೈನಾನ್ಸ್ ಗಳಿಂದ ಸಾಲ ಪಡೆದಿದ್ದು ಕೆಲಸ ಕಡಿಮೆ ಇದ್ದುದರಿಂದ ಕಟ್ಟಲು ಸಾಧ್ಯವಾಗಿಲ್ಲ. ಕೂಲಿಹಣ ಬರಲಿದ್ದು ಒಂದೆರಡು ದಿನಗಳಲ್ಲಿ ಕಟ್ಟುತ್ತೇವೆ ಎಂದು ಹೇಳಿದರೂ ಹಿಂಸೆ ನೀಡುತ್ತಿದ್ದರು. ಮಂಗಳವಾರ ಮಧ್ಯಾಹ್ನ ನನ್ನ ಹೆಂಡತಿ ಮನೆಯಲ್ಲಿ ಒಬ್ಬಳೇ ಇರುವಾಗ ಜನ ಫೈನಾನ್ಸಿನ ಸಿಬ್ಬಂದಿ ಒಬ್ಬ ಬಂದು ಸಾಲ ಕಟ್ಟುವಂತೆ ಗಲಾಟೆ ಮಾಡಿದ್ದಾನೆ. ನನ್ನ ಹೆಂಡತಿ ನೀವು ಈ ರೀತಿ ಹಿಂಸೆ ನೀಡಿದರೆ ನಾವು ಉರುಲು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಆದರೂ ಫೈನಾನ್ಸ್ ಸಿಬ್ಬಂದಿ ನೀವು ಆತ್ಮಹತ್ಯೆಯಾದರೂ ಮಾಡಿಕೊಳ್ಳಿ ಏನಾದರೂ ಮಾಡಿಕೊಳ್ಳಿ, ನಮ್ಮ ಸಾಲ ಮರುಪಾವತಿ ಮಾಡಿ ಎಂದು ಮಾನಸಿಕವಾಗಿ ಹಿಂಸೆ ನೀಡಿ ಮನೆ ಮುಂದೆ ಗಲಾಟೆ ಮಾಡಿದ್ದಾನೆ. ಇದರಿಂದ ಮಾನಸಿಕವಾಗಿ ನೊಂದ ನನ್ನ ಹೆಂಡತಿ ನೇಣಿಗೆ ಶರಣಾಗಿದ್ದಾಳೆ” ಎಂದು ಅಳಲನ್ನು ತೋಡಿಕೊಂಡರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರ ಅವರನ್ನು ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

ಸರ್ಕಾರ ಸಾಲ ವಸೂಲಾತಿಗೆ ನಿಯಮ ರೂಪಿಸಿ ಕ್ರಮ ಕೈಗೊಂಡರೂ, ಮೈಕ್ರೋ ಫೈನಾನ್ಸ್ ಗಳು ಅದನ್ನು ಲೆಕ್ಕಿಸದೆ ದೌರ್ಜನ್ಯ ಮುಂದುವರೆಸಿವೆ. ನಿಯಮಗಳು ಕಾಗದಕ್ಕೆ ಮಾತ್ರ ಮೀಸಲಾಗಿವೆ.‌ ಎರಡು ತಿಂಗಳ ಹಿಂದೆ ಚನ್ನಗಿರಿಯಲ್ಲಿ ಸಾಲ‌ಮಾಡಿದ ಕಾರಣಕ್ಕೆ, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗಂಡನೊಬ್ಬ ಹೆಂಡತಿಯ ಮೂಗು ಕೊಯ್ದು ಘಟನೆ ನಡೆದಿದ್ದು, ಗೃಹಿಣಿಯ ಮೂಗು ಬಲಿಯಾಗಿತ್ತು. ಐದಾರು ತಿಂಗಳ ಹಿಂದೆ ಖಾಸಗಿ ಫೈನಾನ್ಸ್ ಗಳ ಹಾವಳಿಗೆ ಮನನೊಂದು ಹೊನ್ನಾಳಿಯಲ್ಲಿ ತುಂಗಭದ್ರಾ ನದಿಗೆ ಹಾರಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ದಾವಣಗೆರೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಲಿಯಾಗುವ ಹೆಣ್ಣು ಮಕ್ಕಳ ಸಂಖ್ಯೆ ಮುಂದುವರೆಯುತ್ತಲೇ ಇದೆ. ಕಡಿವಾಣ ಹಾಕುವವರು ಮಾತ್ರ ತಮಗೆ ಸಂಬಂಧವೇ ಇಲ್ಲದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ.‌

ಆತ್ಮಹತ್ಯೆ ಪರಿಹಾರವಲ್ಲ 12
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಬಸವ ಸಂಸ್ಕೃತಿ ಅಭಿಯಾನ, ಸೆ.1ರಿಂದ ಆರಂಭ

ಲಿಂಗಾಯತ ಮಠಾಧೀಶರ ಒಕ್ಕೂಟವು ಸೆ.1ರಿಂದ ಅ.1ರವರೆಗೆ ರಾಜ್ಯದಲ್ಲಿ ನಡೆಸಲಿರುವ ಬಸವ ಸಂಸ್ಕೃತಿ...

ಧರ್ಮಸ್ಥಳ | ಅನನ್ಯಾ ಭಟ್ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

ಧರ್ಮಸ್ಥಳ ಗ್ರಾಮದಲ್ಲಿ ಅಕ್ರಮವಾಗಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಆರೋಪ ಪ್ರಕರಣ...

ಚಿಕ್ಕಮಗಳೂರು l ಎಸ್ಐಟಿ ತನಿಖೆ: ಬಿಜೆಪಿ, ಕಾಂಗ್ರೆಸ್ ಶಾಸಕರ ಶಾಸಕತ್ವ ರದ್ದುಗೊಳಿಸಬೇಕು; ದಸಂಸ ಆಗ್ರಹ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್ ಐಟಿ ತನಿಖೆಯನ್ನು ದಿಕ್ಕು ತಪ್ಪಿಸಲು ಹೊರಟಿರುವ ಬಿಜೆಪಿ...

Download Eedina App Android / iOS

X