ಶಿವಮೊಗ್ಗ | ರೆಸಾರ್ಟ್‌ ಮೇಲೆ ದಾಳಿ; ಮದ್ಯದ ಬಾಟಲಿ, ಪ್ರಾಣಿಗಳ ಕೊಂಬು, ಬಂದೂಕು ವಶ

Date:

Advertisements

ಅಕ್ರಮ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ರೆಸಾರ್ಟ್ ಒಂದರ ಮೇಲೆ ಕಳೆದ ರಾತ್ರಿ ಪೊಲೀಸರು ದಿಢೀರ್ ದಾಳಿ ನಡೆಸಿದ ವೇಳೆ ಮದ್ಯದ ಬಾಟಲಿಗಳು, ಪ್ರಾಣಿಗಳ ಕೊಂಬು, ಬಂದೂಕು ಪತ್ತೆಯಾಗಿವೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಿಹಂಗಮನ ರೆಸಾರ್ಟ್ ಮೇಲೆ ಶನಿವಾರ ರಾತ್ರಿ ಪೊಲೀಸರು ಹಠಾತ್ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 1 ಲಕ್ಷ ರೂ. ಮೌಲ್ಯದ ಒಂದು ಡಬಲ್ ಬ್ಯಾರಲ್ ಬಂದೂಕು, ಅಂದಾಜು 25 ಸಾವಿರ ರೂ. ಮೌಲ್ಯದ 310 ಜೀವಂತ ಗುಂಡುಗಳು, ಒಂದು ಕತ್ತಿ, ಒಂದು ಚಾಕು, ಮೂರು ಕಾಡುಕೋಣದ ಕೊಂಬಿನ ಟ್ರೋಫಿ, ಆರು ಜಿಂಕೆ ಕೊಂಬಿನ ಟ್ರೋಫಿ, ಒಂದು ಸಿಸಿಟಿವಿ ಡಿವಿಆರ್, 7,650 ರೂ. ಮೌಲ್ಯದ 51 ಬಿಯರ್ ಟಿನ್‌ಗಳು, 1 ಲಕ್ಷ ರೂ. ಮೌಲ್ಯದ ಮದ್ಯ ತುಂಬಿದ ಬಾಟಲಿಗಳು, 750 ರೂ. ಮೌಲ್ಯದ ಬ್ರೀಸರ್ ಬಾಟಲ್ ಹಾಗೂ 3 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹೆಚ್ಚವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಟ್ಟಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿಗಾಗಿ ಕಾಲ್ನಡಿಗೆ ಜಾಥಾ

ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತಾರ, ತೀರ್ಥಹಳ್ಳಿ ಇನ್ಸ್‌ಪೆಕ್ಟರ್ ಅಶ್ವತ್ಥ ಗೌಡ ನೇತೃತ್ವದಲ್ಲಿ ದಾಳಿಯಾಗಿದೆ. ತೀರ್ಥಹಳ್ಳಿ ಸಬ್ ಇನ್ಸ್‌ಪೆಕ್ಟರ್ ಸಾಗರ ಅತ್ತರವಾಲ, ಮಾಳೂರು ಸಬ್ ಇನ್ಸ್‌ಪೆಕ್ಟರ್ ನವೀನ್ ಮಠಪತಿ, ಆಗುಂಬೆ ಸಬ್ ಇನ್ಸ್‌ಪೆಕ್ಟರ್ ರಂಗನಾಥ ಅಂತರಗಟ್ಟಿ, ರಿಪ್ಪನ್‌ಪೇಟೆ ಸಬ್ ಇನ್ಸ್‌ಪೆಕ್ಟರ್ ಪ್ರವೀಣ್ ಹಾಗೂ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X