ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

Date:

Advertisements

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ ಸೆಪ್ಟೆಂಬರ್ 3 ರಂದು ಜಿಲ್ಲಾ ಮಟ್ಟದ ರಂಗೋಲಿ, ಬಾಲ ಬಸವಣ್ಣ ಹಾಗೂ ಇತರ ಬಾಲ ಶರಣರ ವೇಷಧಾರಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಬಸವ ಸಂಸ್ಕೃತಿ ಅಭಿಯಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಧನ್ನೂರ ತಿಳಿಸಿದ್ದಾರೆ.

ರಂಗೋಲಿ ಸ್ಪರ್ಧೆ ವಿಜೇತರಿಗೆ ₹10 ಸಾವಿರ ಪ್ರಥಮ, ₹6 ಸಾವಿರ ದ್ವಿತೀಯ ಹಾಗೂ ₹4 ಸಾವಿರ ತೃತೀಯ ಬಹುಮಾನ ನೀಡಲಾಗುವುದು. 15 ವರ್ಷ ಮೇಲ್ಪಟ್ಟವರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು. ಸ್ಪರ್ಧಾಳುಗಳು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರ ವರೆಗೆ ಬಿ.ವಿ. ಭೂಮರಡ್ಡಿ ಕಾಲೇಜು ಆವರಣದಲ್ಲಿ ಕನಿಷ್ಠ 5 ಅಡಿ x 5 ಅಡಿಯ ರಂಗೋಲಿ ಬಿಡಿಸಬೇಕಾಗಲಿದೆʼ ಎಂದು ಹೇಳಿದ್ದಾರೆ.

ಆಸಕ್ತರು ಹೆಸರು ನೋಂದಣಿಗೆ ಗುಂಡಪ್ಪ ಬಳತೆ (9448407946), ಚಂದ್ರಕಾಂತ ಮಿರ್ಚೆ (9886599511), ಉಮೇಶ ಪಾಟೀಲ (8123197936) ಅಥವಾ ಜಯದೇವಿ ಯದಲಾಪುರೆ  (8105595123) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements

ಬಾಲ ಬಸವಣ್ಣ, ಶರಣರ ವೇಷಧಾರಿ ಸ್ಪರ್ಧೆ :

ಬಾಲ ಬಸವಣ್ಣ ಹಾಗೂ ಇತರ ಬಾಲ ಶರಣರ ವೇಷಧಾರಿ ಸ್ಪರ್ಧೆ ವಿಜೇತರಿಗೆ ₹5 ಸಾವಿರ ಪ್ರಥಮ, ₹3 ಸಾವಿರ ದ್ವಿತೀಯ ಮತ್ತು ₹2 ಸಾವಿರ ತೃತೀಯ ಬಹುಮಾನ ಕೊಡಲಾಗುವುದು ಎಂದು ಹೇಳಿದ್ದಾರೆ.

4 ವರ್ಷದಿಂದ 8 ವರ್ಷದ ಒಳಗಿನ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧಾಳುಗಳು ಸಂಜೆ 4ಕ್ಕೆ ಬಸವ ಮುಕ್ತಿ ಮಂದಿರದಲ್ಲಿ ಸೇರಬೇಕು. ಅಲ್ಲಿಂದ ಬಿ.ವಿ. ಭೂಮರಡ್ಡಿ ಕಾಲೇಜಿನ ಬಸವ ಸಂಸ್ಕೃತಿ ಅಭಿಯಾನದ ಬಹಿರಂಗ ಸಭೆಯ ವೇದಿಕೆ ವರೆಗೆ ಪಥ ಸಂಚಲನದಲ್ಲಿ ಪಾಲ್ಗೊಳ್ಳಬೇಕು. ಬಹಿರಂಗ ಸಭೆಯಲ್ಲಿ ವಿಜೇತರ ಹೆಸರು ಪ್ರಕಟಿಸಿ ಬಹುಮಾನ ವಿತರಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಆಸಕ್ತರು ಹೆಸರು ನೋಂದಣಿಗೆ ರಾಚಯ್ಯ ಸ್ವಾಮಿ (ಮೊ: 8123958468), ವಿಶ್ವನಾಥ ಕಣಜಿ (9731631287), ವಿಶ್ವನಾಥ ಬೆಮಳಗಿ (9342354500), ಬಸವರಾಜ ತಳವಾಡೆ (9900583351) ಅಥವಾ ಶಿವರಾಜ ಶ್ರೀಮಂಗಲೆ (9900605957) ಅವರನ್ನು ಸಂಪರ್ಕಿಸಬಹುದು. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲರಿಗೂ ಪ್ರಮಾಣ ಪತ್ರ ಕೊಡಲಾಗುವುದು. ನಿರ್ಣಾಯಕರ ತೀರ್ಪು ಅಂತಿಮ ಎಂದು ಹೇಳಿದ್ದಾರೆ.

1004305240
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X