ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

Date:

Advertisements

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು.

ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025’ ಅನ್ನು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೇಲ್ಮನೆಯಲ್ಲಿ ಮಂಡಿಸಿದರು. ಅಲ್ಪಚರ್ಚೆ ಬಳಿಕ ಅನುಮೋದನೆ ನೀಡಲಾಯಿತು.

ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಈ ವಿಧೇಯಕದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಅಂಶವನ್ನು ಸ್ಪಷ್ಟಪಡಿಸಲಾಗಿದೆ. ಭವಿಷ್ಯದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ನೀಡಬಾರದು ಎಂಬ ಉದ್ದೇಶದಿಂದ ಈ ತಿದ್ದುಪಡಿಯಲ್ಲಿ ಜಿಬಿಎ ಪಾಲಿಕೆಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಸ್ಪಷ್ಟನೆ ನೀಡಲಾಗಿದೆ” ಎಂದು ತಿಳಿಸಿದರು.

Advertisements

ಸದಸ್ಯರಾದ ಗೋವಿಂದರಾಜು, ಟಿ.ಎ ಶರವಣ, ಹೆಚ್.ಎಸ್ ಗೋಪಿನಾಥ್ ಅವರು ಕೋರಿದ ಸ್ಪಷ್ಟನೆಗೆ ಉತ್ತರ ನೀಡಿದ ಸಚಿವರು, “ನಾವು ಅನೇಕ ಬಾರಿ ನೋಡಿರುವಂತೆ ರಾಜ್ಯ ಸರ್ಕಾರ ಒಂದು ಪಕ್ಷ ಅಧಿಕಾರದಲ್ಲಿದ್ದರೆ, ಪಾಲಿಕೆಯಲ್ಲಿ ಮತ್ತೊಂದು ಪಕ್ಷ ಅಧಿಕಾರದಲ್ಲಿರುತ್ತದೆ. ಇಂತಹ ಸಂದರ್ಭದಲ್ಲಿ ಸಂವಿಧಾನದ 74ನೇ ತಿದ್ದುಪಡಿಗೆ ಧಕ್ಕೆಯಾಗದಂತೆ ಹಾಗೂ ರಾಜ್ಯ ಸರ್ಕಾರ ಪಾಲಿಕೆಗಳನ್ನು ನಿಯಂತ್ರಿಸುವಂತಾಗದಂತೆ ಎಚ್ಚರಿಕೆ ವಹಿಸಲು ಈ ತಿದ್ದುಪಡಿ ತರಲಾಗಿದೆ” ಎಂದರು.

“ಕೆಲವು ಶಾಸಕರು ಜನಸಂಖ್ಯೆ ಹಾಗೂ ವಾರ್ಡ್ ರಚನೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಈಗ ನಾವು ಬಳಸಿರುವುದು 2011ರ ಜನಗಣತಿ. ಆಗ ಒಂದು ವಾರ್ಡ್ ನಲ್ಲಿ 18 ಸಾವಿರ ಜನಸಂಖ್ಯೆ ಇದ್ದರೆ ಈಗಿನ ಪರಿಸ್ಥಿತಿಯಲ್ಲಿ 30 ಸಾವಿರದಷ್ಟು ಇರಲಿದೆ. ಮುಂದೆ ಹೊಸ ಪ್ರದೇಶಗಳನ್ನು ಪಾಲಿಕೆ ವ್ಯಾಪ್ತಿಯಲ್ಲಿ ಒಳಪಡಿಸುವ ಸಂದರ್ಭದಲ್ಲಿ ನಿಮ್ಮ ಪಕ್ಷದ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು. ಈ ವಿಚಾರವನ್ನು ಬೇರೆ ರೂಪದಲ್ಲಿ ಚರ್ಚೆಗೆ ಪ್ರಸ್ತಾವನೆ ನೀಡಿ, ಆಗ ಈ ವಿಚಾರವಾಗಿ ನಿಮಗಿರುವ ಅನುಮಾನಗಳಿಗೆ ಸಂಪೂರ್ಣವಾಗಿ ವಿವರಣೆ ನೀಡುತ್ತೇನೆ. ಈಗ ಈ ವಿಧೇಯಕ ಅಂಗೀಕಾರ ಮಾಡಿಕೊಡಿ” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

Download Eedina App Android / iOS

X