ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

Date:

Advertisements

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ ಪರಿಹಾರ ನೀಡಬೇಕು ಮತ್ತು ಹುಣಸಗಿ ತಾಲೂಕಿನ ಎಲ್ಲಾ ರೈತರಿಗೆ ಸಮಪರ್ಕವಾಗಿ ರಸಗೊಬ್ಬರ ವಿತರಣೆ ಮಾಡುವಂತೆ ರೈತ ಸಂಘಗಳ ಸಾಮೂಹಿಕ ಸಂಘಟನೆಗಳಿಂದ ಆಗ್ರಹಿಸಿದರು.

ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿ ಯಾದಗಿರಿ ಮತ್ತು ಸಾಮೂಹಿಕ ಸಂಘಟನೆಗಳು ನೇತೃತ್ವದಲ್ಲಿ ಹುಣಸಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಗೆ ಮನವಿ ಸಲ್ಲಿಸಿದರು.

ರೈತ ಮುಖಂಡ ಹಣಮಂತ್ರಾಯ ಚಂದಲಾಪೂರ್ ಮಾತನಾಡಿ, ‘ಈ ವರ್ಷ ಮುಂಗಾರು ಮಳೆ ಸಮಯಕ್ಕೆ ಸರಿಯಾಗಿ ಬಂದಿರುವುದರಿಂದ ಜಿಲ್ಲೆಯಾದ್ಯಂತ ಎಲ್ಲಾ ರೈತರು ಬಿತ್ತನೆ ಮಾಡಿದ್ದರು. ಈಗ ಬಿತ್ತಿರುವುದಕ್ಕಿಂತ ಬೆಳೆಗಳು ಮಳೆಯಾಶ್ರಿತ ಬೆಳೆಗಳು ಮತ್ತು ನೀರಾವರಿಯ ಇಲ್ಲದ ಕೊನೆಯ ಭಾಗದ ರೈತರು ಬೆಳೆಗಳಾದ ಶೇಂಗಾ ಹತ್ತಿ, ಸಜ್ಜೆ, ತೊಗರಿ ಮುಂತಾದ ಬೆಳೆಗಳು ರೈತರು ಬೆಳೆದಿರುತ್ತಾರೆ. ಆದರೆ ಇದಕ್ಕೆಲ್ಲಾ ಒಂದು ಸಲ ಬೆಳೆಯಬೇಕಾದರೆ ಮೂರು ಸಲ ಗೊಬ್ಬರ ಕೀಟನಾಶಕ ಸಿಂಪಡಿಸಬೇಕುʼ ಎಂದರು.

Advertisements

ʼರೈತರು ಸಾಲ ಸೂಲ ಮಾಡಿ ಬಿತ್ತನೆಗೆ ಸಾಕಷ್ಟು ಖರ್ಚು ಮಾಡುತ್ತಾರೆ. ಕನಿಷ್ಠ ಒಂದು ಎಕರೆ ಬೆಳೆಯನ್ನು ಬೆಳೆಯಬೇಕಾದರೆ 30 ರಿಂದ 40 ಸಾವಿರ ರೂಪಾಯಿ ಖರ್ಚು ಮಾಡಿ ಬೆಳೆಯನ್ನು ಬೆಳೆಯುತ್ತಾರೆ. ಆದರೆ ಈ ವರ್ಷದಲ್ಲಿ ಸರ್ಕಾರ ರಸಗೊಬ್ಬರದ ಕೊರತೆ ಮಾಡಿ ರೈತರ ಗಾಯದ ಮೇಲೆ ಬರಿ ಎಳೆದಂತಾಗಿದೆ’ ಎಂದು ತಮ್ಮ ಅಳಲನ್ನು ತೊಡಗಿಕೊಂಡರು

‘ರೈತರು ಒಂದಲ್ಲಾ ಒಂದು ಸಂಕಷ್ಟಕ್ಕೀಡಾಗುತ್ತಿದ್ದಾನೆ. ರೈತರು ಬೆಳೆದಿರುವ ಬೆಳೆ ಸೂಕ್ತ ದರ ಇರುವುದಿಲ್ಲ. ಸರಿಯಾಗಿ ಮಳೆ ಬಂದು ಬೆಳೆ ಬೆಳೆದರೆ ಗೊಬ್ಬರವಿಲ್ಲ. ರೈತರ ಜೊತೆಯಲ್ಲಿ ಚೆಲ್ಲಾಟವಾಡುವ ಸರ್ಕಾರಗಳು ನಮಗೇಕೆ ಬೇಕು, ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ರೈತರ ಗೋಳು ಕೇಳುವುದಿಲ್ಲ. ರಸಗೊಬ್ಬರ ಸಮಸ್ಯೆ ಬಗೆಹರಿಸಲು ಆಗಿಲ್ಲ. ತಿಂಗಳಾದರೂ ರೈತರಿಗೆ ಯೂರಿಯಾ ಗೊಬ್ಬರ ಸಿಗದೇ ಪರದಾಡುತ್ತಿದ್ದಾರೆʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಈ ಸಂದರ್ಭದಲ್ಲಿ ರೈತ ಮುಖಂಡರಾದ ಗೆದ್ದೆಪ್ಪ ನಾಗಬೇವಿನಾಳ, ಸಾಹೇಬಗೌಡ ಮದಲಿಂಗನಾಳ, ಹನುಮಗೌಡ ನಾರಾಯಣಪುರ, ನಿಂಗನಗೌಡ ಗುಳಬಾಳ, ವೆಂಕಟೇಶಗೌಡ ಕುಪಗಲ್, ತಿರುಪತಿ ಕುಪಗಲ್, ತಿಪ್ಪಣ್ಣ ಜಂಪಾ, ಮೌನೇಶ ಅರಳಹಳ್ಳಿ, ಗುಂಡುರಾವ, ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X