‘ಏಷ್ಯನ್ ಚಾಂಪಿಯನ್ಸ್’ ಗೆದ್ದ ಭಾರತ ಹಾಕಿ ಪುರುಷರ ತಂಡ : ₹1.10 ಕೋಟಿ ಬಹುಮಾನ ಘೋಷಿಸಿದ ತಮಿಳುನಾಡು

Date:

Advertisements
  • ಒಂದು ಕೋಟಿ 10 ಲಕ್ಷ ಬಹುಮಾನ ಘೋಷಿಸಿದ ತಮಿಳುನಾಡು ಸಿಎಂ ಸ್ಟ್ಯಾಲಿನ್
  • ಮಲೇಷ್ಯಾವನ್ನು 4-3 ಗೋಲುಗಳಿಂದ ಸೋಲಿಸಿದ ಭಾರತ ಪುರುಷರ ಹಾಕಿ ತಂಡ

ಚೆನ್ನೈನಲ್ಲಿ ಶನಿವಾರ ರಾತ್ರಿ ನಡೆದ ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ರೋಚಕ ಫೈನಲ್‌ನಲ್ಲಿ ಮಲೇಷ್ಯಾವನ್ನು 4-3 ಗೋಲುಗಳಿಂದ ಸೋಲಿಸಿ, ನಾಲ್ಕನೇ ಬಾರಿ ಪ್ರಶಸ್ತಿ ಗೆದ್ದ ಭಾರತ ಪುರುಷರ ಹಾಕಿ ತಂಡಕ್ಕೆ ತಮಿಳುನಾಡು ಸಿಎಂ ಒಂದು ಕೋಟಿ 10 ಲಕ್ಷ ಬಹುಮಾನ ಘೋಷಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್, ‘4ನೇ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದಿರುವ ಟೀಮ್‌ಇಂಡಿಯಾಕ್ಕೆ ಅಭಿನಂದನೆಗಳು. ನಿಮ್ಮ ಸಾಧನೆ ಗಮನಾರ್ಹವಾದದ್ದು. ಭಾರತ ತಂಡದ ಅದ್ಭುತ ಗೆಲುವಿಗಾಗಿ 1,10,00,000 ಬಹುಮಾನವನ್ನು ಘೋಷಿಸಲು ನನಗೆ ಸಂತೋಷವಾಗುತ್ತಿದೆ’ ಎಂದು ತಿಳಿಸಿದ್ದಾರೆ.

ರೋಚಕ ಫೈನಲ್‌
ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ರೋಚಕ ಫೈನಲ್‌ನಲ್ಲಿ ಮಲೇಷ್ಯಾವನ್ನು 4-3 ಗೋಲುಗಳಿಂದ ಸೋಲಿಸಿದ್ದ ಭಾರತ ಪುರುಷರ ಹಾಕಿ ತಂಡ ನಾಲ್ಕನೇ ಬಾರಿ ಪ್ರಶಸ್ತಿ ಎತ್ತಿಹಿಡಿದಿತ್ತು.

Advertisements

ಚೆನ್ನೈನಲ್ಲಿ ನಡೆದ ಫೈನಲ್‌ನಲ್ಲಿ, ಆತಿಥೇಯ ಭಾರತವು ವಿರಾಮದ ವೇಳೆಗೆ 1-3 ರಿಂದ ಹಿನ್ನಡೆಯಲ್ಲಿತ್ತು. ಆದರೆ ಭಾರತವು ಒಂದು ನಿಮಿಷದಲ್ಲಿ ಎರಡು ಗೋಲುಗಳನ್ನು ಗಳಿಸುವ ಮೂಲಕ 3-3 ರಿಂದ ಸಮಬಲ ಸಾಧಿಸಿತು.

ಪಂದ್ಯವು 3-3ರಿಂದ ಸಮಬಲಗೊಂಡಿದ್ದಾಗ 56ನೇ ನಿಮಿಷದಲ್ಲಿ ಅಮೋಘ ಫೀಲ್ಡ್ ಗೋಲು ಗಳಿಸಿದ ಆಕಾಶದೀಪ್ ಸಿಂಗ್ ಭಾರತಕ್ಕೆ 4-3 ಮುನ್ನಡೆ ಒದಗಿಸಿಕೊಟ್ಟರು. ಈ ಗೋಲಿನ ನೆರವಿನಿಂದ ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲಲು ಸಾಧ್ಯವಾಯಿತು.

ಇದಕ್ಕೂ ಮೊದಲು ಭಾರತ 2011, 2016 ಮತ್ತು 2018ರಲ್ಲಿ ಚಾಂಪಿಯನ್ ಆಗಿತ್ತು. 2012ರಲ್ಲಿ ಟೀಂ ಇಂಡಿಯಾ ರನ್ನರ್ ಅಪ್ ಆಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X