ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

Date:

Advertisements

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್ ಪರೀಶಿಲಿಸಿ, ಕೊರಚರಿಗೆ ನ್ಯಾಯ ಒದಗಿಸಲು ಸರ್ಕಾರಕ್ಕೆ ಒತ್ತಾಯ ಮಾಡಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಬನ್ನೂರು ಸುರೇಶ್, ಕರ್ನಾಟಕ ಸರ್ಕಾರವು ಆ. 19 ರಂದು ಪರಿಶಿಷ್ಟ ಜಾತಿವಾರು ಒಳಮೀಸಲಾತಿಯನ್ನು 3 ಭಾಗಗಳಾಗಿ ವಿಂಗಡಿಸಿದ್ದು, ಅದರಲ್ಲಿ ಕೊರಚ ಜನಾಂಗದವರನ್ನು 3ನೇ ಪಟ್ಟಿಯಲ್ಲಿ ಸೇರಿಸಿರುವುದು ಘನ ಘೋರವಾದ ಅನ್ಯಾಯ. ಕೊರಚರು, ಅಲೆಮಾರಿಗಳು, ಅಪರಾಧಿಕ ಬುಡ ಕಟ್ಟು ಜನಾಂಗದವರಾಗಿದ್ದು, ಈಗಲೂ ಸಹ ಅನೇಕ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದು, ರಾಜಕೀಯವಾಗಿ ಯಾವುದೇ ಜನಪ್ರತಿನಿಧಿತ್ವ ಹೊಂದಿಲ್ಲ. ಇದು ಅಸಂಘಟಿತ ಸಮಾಜವಾಗಿದ್ದು, ಕಡು ಬಡವರಾಗಿ ನಿರ್ಗತಿಕರಾಗಿ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಧಾರ್ಮಿಕವಾಗಿಯೂ ಹಿಂದುಳಿದ ಸಮಾಜವಾಗಿದೆ. ಎಂದರು.

ಇದನ್ನು ನಾಗಮೋಹನ್ ದಾಸ್ ವರದಿಯಲ್ಲಿಯೂ ಸಹ ಏಕ ಸದಸ್ಯ ಆಯೋಗವು ಸಹ ಹೇಳಿದರು ಸಹ ಸರ್ಕಾರವು ಈ ಜನಾಂಗವನ್ನು 3ನೇ ಪಟ್ಟಿಯಲ್ಲಿ ಸೇರಿಸಿ ಸಮಾಜದ ಅಭಿದ್ಯೋಕಕ್ಕೆ ಮಾರಕ ಉಂಟು ಮಾಡಿದೆ ಎಂದರು.

Advertisements

ಕೊರಚಜನಾಂಗದವರನ್ನು ಎಡಗೈ ಇಲ್ಲವೇ ಬಲಗೈ ಸಂಬಂಧಿಸಿದ ಜಾತಿಯಲ್ಲಿ ಸೇರಿಸಬೇಕು.ಇಲ್ಲವಾದರೆ ಒಂದು ಲಕ್ಷಕ್ಕಿಂತಕಡಿಮೆ ಜನಸಂಖ್ಯೆ ಇರುವ ಅಲೆಮಾರಿ ಪರಿಶಿಷ್ಟ ಜಾತಿಗಳ ಗುಂಪುಗಳನ್ನು ಒಂದು ಗುಂಪು ಮಾಡಿ ಶೇ 2% ಮೀಸಲಾತಿಯನ್ನು ಕಲ್ಪಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ಸುಪ್ರೀಂ ಕೋರ್ಟ್ ಆದೇಶವು ಸಾಮಾಜಿಕ ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ಶೋಷಿತ ಸಮುದಾಯಗಳಿಗೆ ಮೀಸಲಾತಿ ನೀಡಬೇಕು. ಹೇಳಿದ್ದರೂ ಸಹ ಇದನ್ನು ಗಾಳಿಗೆತೂರಿ ಮತ ಬ್ಯಾಂಕ್‌ಗಾಗಿ ಮಾಡಿರುವ ಈ ಒಳಮೀಸಲಾತಿಯನ್ನು ಪುನರ್ ಒದಗಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X