ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

Date:

Advertisements

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಸ್‌ಎಫ್‌ಐ ಆಗ್ರಹಿಸಿದೆ.

ಮೃತ ವಿದ್ಯಾರ್ಥಿನಿ ಚಿತ್ರದುರ್ಗದ (ಎಸ್ಸಿ ಎಸ್ಟಿ) ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಆಕೆ ದೇಹ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ರೀತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಈ ಬಗ್ಗೆ ಸೂಕ್ತ ತನಿಖೆ ಆಗಬೇಕು ಮತ್ತು ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಹಸೀಲ್ದಾರರಿಗೆ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ಸಂಘಟನೆ ಮನವಿ ಸಲ್ಲಿಸಿ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷರ ಚಂದ್ರು ರಾಠೋಡ ಮಾತನಾಡಿ, “ರಾಜ್ಯದ ಶಾಲಾ ಕಾಲೇಜು ವಿಶ್ವವಿದ್ಯಾಲಯಗಳಲ್ಲಿ ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ಬಗ್ಗೆ ಮುಖ್ಯವಾಗಿ ವಿದ್ಯಾರ್ಥಿನಿಯರ ಬಗ್ಗೆ ಕಾಳಜಿ ವಹಿಸುವಂತಹ ವ್ಯವಸ್ಥೆ ಇಲ್ಲ. ಲೈಂಗಿಕ ಕಿರುಕುಳ ಆಗುತ್ತಿದ್ದರೆ ಅದನ್ನು ತಡೆಗಟ್ಟುವ ಒಂದು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಇಂತಹ ಘಟನೆಗಳು ದಿನನಿತ್ಯ ನಡೆಯುತ್ತಿದ್ದು ಅವುಗಳನ್ನು ತಡೆಯಲು ಸರ್ಕಾರಗಳು ಮತ್ತು ಇಲಾಖೆಗಳು ವಿಫಲವಾಗಿದೆ. ಜಾಗತಿಕವಾಗಿ ಆವರಿಸಿದ ಕರೋನ ನಂತರ ಶೈಕ್ಷಣಿಕ ವಲಯದಲ್ಲಿ ಹಲವಾರು ಬದಲಾವಣೆ ಆಗಿದ್ದು ಇಂದು ಪೋನ್ ಇಲ್ಲದೇ ಬದುಕುವುದು ಕಷ್ಟ ಆಗಿದೆ ಹಾಗಾಗಿ ಅದರ ಬಳಕೆಯ ಮೂಲಕ ಸಾಮಾಜಿಕ ಜಾಲತಾಣಗಳ ಬಳಸಿ ಇಂದು ಇಂತಹ ಘಟನೆಗಳಿಗೆ ಕೆಲವು ಪ್ರೇರಣೆ ನೀಡುವ ಸ್ಥಿತಿಗೆ ತಲುಪಿವೆ ಅವುಗಳನ್ನು ನಿಯಂತ್ರಣ ಮಾಡಲು ನಮ್ಮಲ್ಲಿ ಸರಿಯಾದ ಕಾನೂನು ಇಲ್ಲ, ಸರ್ಕಾರ ಈ ಕುರಿತು ಗಂಭೀರವಾಗಿ ಕಾನೂನು ಜಾರಿ ಮಾಡಬೇಕು ಮತ್ತು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಜಾರಿ ಮಾಡಬೇಕು” ಎಂದರು.

Advertisements

ಹೋರಾಟದ ಸ್ಥಳಕ್ಕೆ ಭೇಟಿ ನೀಡಿ ತಾಲೂಕ ತಹಶೀಲ್ದಾರ ಕಿರಣಕುಮಾರ ಕುಲಕರ್ಣಿ ಮನವಿ ಸ್ವೀಕರಿಸಿದರು.

ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷರಾದ ಚಂದ್ರು ರಾಠೋಡ, ತಾಲೂಕ ಅಧ್ಯಕ್ಷರಾದ ಅನಿಲ್ ಆರ್, ಅಭಿಲಾಷ್ ರಾಠೋಡ ಶರಣು ಎಮ್, ಮಹಾಂತೇಶ ಪೂಜಾರ, ಸಾಗರ ಎಚ್, ತನುಜಾ ರಾಯಬಾಗಿ,ವೀಣಾ ಗಾರ್ಗಿ, ಐಶ್ವರ್ಯ ಎಸ್, ಸೋಮು ವಡ್ಡರ, ಮಂಜುಳಾ ಬೆಳವಣಕಿ,ಕೇಶವ ಲಮಾಣಿ, ಅನಿಲ್ ರಾಠೋಡ, ಅನುಷಾ ತಳವಾರ, ಗಣೇಶ ವಡ್ಡರ, ಆಕಾಶ, ಮಹೇಶ್ ಎಮ್ ಎಚ್, ಇದ್ದರು.

ಇದನ್ನೂ ಓದಿ: ಗದಗ | ರಮೇಶ್ ಬೂದಿಹಾಳಗೆ ಸಿಎಂ ಸನ್ಮಾನ

ಬೇಡಿಕೆಗಳು: ಚಿತ್ರದುರ್ಗದ ಹಾಸ್ಟೆಲ್ ವಿದ್ಯಾರ್ಥಿನಿ ವರ್ಷಿತಾ ಸಾವಿನ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕು. ವಿದ್ಯಾರ್ಥಿನಿ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಬೇಕು. ನಗರದ ಹೊರ ವಲಯದಲ್ಲಿರುವ ಶಾಲಾ ಕಾಲೇಜು ವಿವಿ ಹಾಗೂ ವಿದ್ಯಾರ್ಥಿ ವಸತಿ ನಿಲಯಗಳಿಗೆ ಬೀಟ್ ಪೊಲೀಸ್ ರನ್ನು ನೇಮಿಸಬೇಕು. ನಗರದ ಹೊರವಲಯ ಹಾಗೂ ನಗರದಲ್ಲಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ದುರಸ್ತಿಯಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಬದಲಾಯಿಸಿ ಹೊಸ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. * ಶಾಲಾ-ಕಾಲೇಜು ಹಾಗೂ ಮಹಿಳೆಯರು ಕೆಲಸ ಮಾಡುವಂತಹ ಪದೇಶಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿಯನ್ನು ರಚನೆ ಮಾಡಬೇಕು. ಪ್ರೊ. ವರ್ಮಾ ಸಮಿತಿಯ ಶಿಪಾರಸುಗಳನ್ನು ಜಾರಿ ಮಾಡಬೇಕು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X