ರಾಯಚೂರು | ಪಾರದರ್ಶಕವಾಗಿರದ ಅಕ್ರಮ ರಸ್ತೆ ಕಾಮಗಾರಿ ತನಿಖೆ; ಅಧಿಕಾರಿಗಳ ಅಮಾನತಿಗೆ ಒತ್ತಾಯ

Date:

Advertisements
  • ಒಂದೇ ರಸ್ತೆಗೆ ಮೂರು ಇಲಾಖೆಗಳಿಂದ ಹಣ ಎತ್ತುವಳಿ ಮಾಡಿರುವ ಆರೋಪ
  • ಅಕ್ರಮ ಕಾಮಗಾರಿ ನಡೆಸಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹ

ದೇವದುರ್ಗ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ರಸ್ತೆ ಕಾಮಗಾರಿಯ ಕುರಿತು ತನಿಖೆ ನಡೆಯುತ್ತಿರುವಾಗಲೇ ರಸ್ತೆ ದುರಸ್ತಿ ಕಾಮಗಾರಿ ಪ್ರಾರಂಭಿಸಿದ್ದು, ಕೂಡಲೇ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ವಿನೋದ್ ರೆಡ್ಡಿ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇವದುರ್ಗ ತಾಲೂಕಿನಲ್ಲಿ ಒಂದೇ ರಸ್ತೆಗೆ ಮೂರು ಇಲಾಖೆಗಳಿಂದ ಹಣ ಎತ್ತುವಳಿ ಮಾಡಲಾಗಿದೆ. ಈ ಕುರಿತು ದಾಖಲೆಗಳೊಂದಿಗೆ ಲೋಕೊಪಯೋಗಿ ಸಚಿವರಿಗೆ ಭೇಟಿ ನೀಡಿ ಮನವಿ ಸಲ್ಲಿಸಲಾಗಿತ್ತು. ಸಚಿವರು ಮೂರು ಇಲಾಖೆ ಅಧಿಕಾರಿಗಳ ತನಿಖಾ ತಂಡ ರಚಿಸಿ ಪರಿಶೀಲನೆ ಪ್ರಾರಂಭಿಸಿದ್ದಾರೆ. ಆದರೆ ಜಿಲ್ಲೆಗೆ ಆಗಮಿಸಿದ್ದ ತನಿಖಾ ತಂಡ ದೂರದಾರರಿಗೆ ಮಾಹಿತಿ ನೀಡದೇ ತನಿಖೆ ನಡೆಸಿದೆ” ಎಂದು ತಿಳಿಸಿದರು.

“ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಚನ್ನಬಸವಪ್ಪ ಮಕಾಲೆ ಹಾಗೂ ಕೆಬಿಎಜೆಎನ್‌ಎಲ್‌ನ ಸಣ್ಣ ಪರುಶರಾಮ ಸೇರಿದಂತೆ ಪಿಎಂಜಿಎಸ್‌ವೈ ಅಧಿಕಾರಿಗಳ ವಿರುದ್ದ ಅಕ್ರಮ ಆರೋಪ ಮಾಡಲಾಗಿತ್ತು. ಆದರೆ ಅಧಿಕಾರಿಗಳು ಸೇವೆಯಲ್ಲಿ ಇರುವುದರಿಂದ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಕೂಡಲೇ ಅವರನ್ನು ಅಮಾನತು ಮಾಡಬೇಕು. ಇದಕ್ಕೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಆರೋಪಿತ ಅಧಿಕಾರಿಗಳ ರಕ್ಷಣೆ ನಿಂತಿದ್ದಾರೆ” ಎಂದು ಆರೋಪಿಸಿದರು.

Advertisements

“ದೇವದುರ್ಗ ತಾಲೂಕಿನ ಬಿ.ಗಣೇಕಲ್ ಗ್ರಾಮದಿಂದ ಪಂದ್ಯಾನ ಗ್ರಾಮದವರೆಗೆ ರಸ್ತೆ ರಿಪೇರಿ ಕೆಲಸ ನಡೆಯುತ್ತಿದೆ. ಆದರೆ ಯಾವ ಇಲಾಖೆಯವರು ಮಾಡುತ್ತಿದ್ದಾರೆ ಎಂಬ ಮಾಹಿತಿ ನೀಡುತ್ತಿಲ್ಲ. ಮಾಹಿತಿ ಹಕ್ಕು ಅಧಿನಿಯಮದಡಿ ಮಾಹಿತಿ ಕೇಳಿದರೂ ಮೇಲನ್ಮವಿ ಸಲ್ಲಿಸುವಂತೆ ಅಧಿಕಾರಿಗಳು ಹೇಳುತ್ತಿದ್ದಾರೆ. ದೇವದುರ್ಗ ಶಾಸಕಿ ಕರೆಮ್ಮ ನಾಯಕ ಅವರಿಗೆ ದೂರು ನೀಡಲಾಗಿದೆ. ರಸ್ತೆ ನಿರ್ಮಾಣ ಹೆಸರಿನಲ್ಲಿ ಮೂರು ಇಲಾಖೆಗಳಲ್ಲಿ ಹಣ ಬಳಸಿ ಮತ್ತೊಮ್ಮೆ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು. ಜನರಿಗೆ ತೊಂದರೆಯಾಗುತ್ತಿರುವ ಕಾರಣ ರಸ್ತೆ ದುರಸ್ತಿ ಮಾಡಲಾಗುತ್ತಿದೆ ಎಂದು ಹೇಳುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ಮೂರು ವರ್ಷಗಳಿಂದ ಜನರಿಗೆ ತೊಂದರೆಯಾದರೂ ಕೇಳಲಿಲ್ಲ.ಈಗ ತೊಂದರೆ ಆಗುತ್ತಿರುವುದಾಗಿ ಹೇಳುತ್ತಿದ್ದಾರೆ” ಎಂದು ದೂರಿದರು.

ಕೂಡಲೇ ಆರೋಪಿ ಅಧಿಕಾರಿಗಳ ವಿರುದ್ದ ಇಲಾಖೆ ತನಿಖೆ ನಡೆದಿದೆ. ಅಲ್ಲಿಯವರಗೆ ಅಧಿಕಾರಿಗಳನ್ನು ಅಮಾನತು ಮಾಡಲು ಉಸ್ತುವಾರಿ ಸಚಿವರಿಗೆ ಭೇಟಿ ಮಾಡಿ ಮನವಿ ಮಾಡಲಾಗುತ್ತದೆ. ಯಾವುದೇ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಂ.ಎಸ್.ವೆಂಕಟೇಶ ದೇವದುರ್ಗ, ಡಿ.ಬಸನಗೌಡ ಮಾನವಿ, ಜಿಲಾನಿ ಪಾಷಾ ಲಿಂಗಸೂಗೂರು, ಎಚ್.ಗಂಗಣ್ಣ ಸಿಂಧನೂರು, ಗುರುರಾಜ ಮಸ್ಕಿ, ರಾಮಕೃಷ್ಣ, ಕೆ.ಕೊಂಡಪ್ಪ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X