ರಾಯಚೂರು | ವಿವಿಧ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಧರಣಿ

Date:

Advertisements
  • ಪಡಿತರ ಆಹಾರ ಧಾನ್ಯ ಮತ್ತು ನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಆಗ್ರಹ
  • ಆಗಸ್ಟ್ 14 ಮತ್ತು 15 ರಂದು ಎರಡು ದಿನ ರಾಜ್ಯಾದ್ಯಂತ ಅಹೋರಾತ್ರಿ ಧರಣಿ

ಪಡಿತರ ಆಹಾರ ಧಾನ್ಯ ಮತ್ತು ನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಆಗ್ರಹಿಸಿ ಗ್ರಾಮೀಣ ಕೂಲಿಕಾರರ ಸಂಘಟನೆಯಿಂದ ರಾಜ್ಯಾದ್ಯಂತ ಎರಡು ದಿನ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಕೂಸ್ ರಾಜ್ಯ ಮುಖಂಡ ಗುರುರಾಜ್ ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಸ್ವಾತಂತ್ರ್ಯ ದಿವಸದ ಅಂಗವಾಗಿ ರೈತರ ಮತ್ತು ಕಾರ್ಮಿಕರ ಹಿತ ದೃಷ್ಟಿಯಿಂದ , ಪೌಷ್ಟಿಕಾಂಶದ ಕೊರತೆ ನೀಗಿಸುವುದಕ್ಕಾಗಿ ಅನುಕೂಲಕರ ದರದಲ್ಲಿ ಪಡಿತರದಲ್ಲಿ ಆಯಾಯ ಪ್ರದೇಶಕ್ಕೆ ಅನುಗುಣವಾಗಿ ಅಕ್ಕಿಯೊಂದಿಗೆ ರಾಗಿ ಅಥವಾ ಜೋಳ ಮತ್ತು 1 ಕೆ.ಜಿ. ತೊಗರಿಬೇಳೆ, 1 ಕೆ.ಜಿ. ಎಣ್ಣೆ ಅನುಕೂಲಕರ ದರದಲ್ಲಿ ಕೊಡಬೇಕೆಂದು ಒತ್ತಾಯಿಸಿ ಆಗಸ್ಟ್ 14 ಮತ್ತು 15 ರಂದು ಪ್ರತಿಭಟನೆ ನಡೆಸಲಿದ್ದೇವೆ” ಎಂದು ಮಾಹಿತಿ ನೀಡಿದ್ದರು.

“ರೈತರ ಬೆಳೆಗೂ ಸ್ಥಳೀಯವಾಗಿ ಸೂಕ್ತ ಮಾರುಕಟ್ಟೆ ದೊರೆತರೆ ಕಾರ್ಮಿಕರಿಗೆ ಪೌಷ್ಟಿಕ ಆಹಾರ ಸಿಗುತ್ತದೆ. ಉದ್ಯೋಗ ಖಾತ್ರಿಯಲ್ಲಿ 90 ದಿವಸಗಳಿಗೂ ಹೆಚ್ಚಿನ ಮಾನವ ದಿನಗಳನ್ನು ಮುಗಿಸಿದ ಕಾರ್ಮಿಕರಿಗೆ ‌ಸಾಮಾಜಿಕ ಭದ್ರತೆಗಾಗಿ BOCW ಅಡಿಯಲ್ಲಿ ಕಾರ್ಮಿಕ ಚೀಟಿಗಳನ್ನು ನೀಡಬೇಕೆಂದು ಒತ್ತಾಯಿಸಲಾಗುವುದು” ಎಂದರು.

Advertisements

ಈ ಸುದ್ದಿ ಓದಿದ್ದೀರಾ ? ರಾಯಚೂರು | ಏಮ್ಸ್ ಮಂಜೂರಾತಿ ಕುರಿತು ಪ್ರಾಣ ತ್ಯಾಗಕ್ಕೂ ಸಿದ್ಧ: ಕಾಂಗ್ರೆಸ್ ಮುಖಂಡ

“ಅಪೌಷ್ಟಿಕತೆ ನೀಗಿಸುವ ಆಹಾರ ಭದ್ರತೆ ಮತ್ತು ಆರೋಗ್ಯ ಶಿಕ್ಷಣವು ಸಾಮಾಜಿಕ ಭದ್ರತೆ ನೀಡುವ ಯೋಜನೆಗಳಾಗಿದ್ದು, ರೈತರ ಮತ್ತು ಕಾರ್ಮಿಕ‌ರಿಗೆ ಏಕಕಾಲಕ್ಕೆ ಪ್ರಯೋಜನೆ ಆಗಬೇಕು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X